ವಸ್ತುನಿಷ್ಠ ವಿಮರ್ಶೆ-ಟೀಕೆಗಳಿಗೆ ಜಾಗವಿಲ್ಲದ ಕಾಲ

ಸರಿಸುಮಾರು ಇಪ್ಪತ್ತು ದಿನಗಳಿಂದ ಈ ಕಥೆಯನ್ನು ರೂಪಕವಾಗಿಸಿಕೊಂಡು ಯೋಚಿಸುತ್ತಿದ್ದೇನೆ. ವಿಭೂತಿಪುರುಷರ ಉತ್ತುಂಗ ಸ್ಥಿತಿಯ ಬಗ್ಗೆ ನನಗೆ ಇಂದಿಗೂ ತಿಳಿದಿಲ್ಲ. ಅವರು ಎಲ್ಲದರಲ್ಲೂ ಸುಂದರತೆ ಕಾಣಲು ಬಯಸುವವರು. ಆದರೆ ನಾನು ಆ ಸುಂದರತೆಯ ಬಗೆಗೆ ನಿತ್ಯ ಅನುಮಾನಗಳನ್ನ ಇಟ್ಟುಕೊಂಡಿರುವವನು. ತಮಾಷೆ ಮಾಡುತ್ತ ಎಲ್ಲವನ್ನೂ ತೇಲಿಸುತ್ತ ಜಗತ್ತನ್ನು ಸುಂದರ ಗೋಳವನ್ನಾಗಿ ಪರಿವರ್ತಿಸಿಕೊಳ್ಳುವವರ ಬಗೆಗೆ ನನ್ನಲ್ಲಿ ಗೌರವವೇನೊ ಇದೆ. ಹಾಗೆಯೇ ದಾರಿಹೋಕನಿಗೆ ಜ್ಞಾನೋದಯದ ಬಗೆಗೂ ಚಕಾರಗಳಿವೆ.
ಎನ್.ಸಿ. ಮಹೇಶ್‌ ಬರೆಯುವ ‘ರಂಗ ವಠಾರ’ ಅಂಕಣ

Read More