Advertisement

Tag: ನೆನಪಾದಾಗಲೆಲ್ಲ

ಹೀಗಿದ್ದರು ನಮ್ಮ ಕೆ.ಎಚ್. ರಂಗನಾಥ: ರಂಜಾನ್ ದರ್ಗಾ ಸರಣಿ

ಅವರಿಗೆ ಸ್ವಂತ ಕಾರು ಇರಲಿಲ್ಲ. ಅವರ ಮಕ್ಕಳು ಸರ್ಕಾರಿ ಕಾರಿನಲ್ಲಿ ಎಂದೂ ಶಾಲೆಗೆ ಹೋಗಲಿಲ್ಲ. ನಾನು ಸೇರಿದ ಒಂದು ವರ್ಷದಲ್ಲಿ ಅವರು ಒಂದು ಸೆಕೆಂಡ್ ಹ್ಯಾಂಡ್ ಅಂಬಾಸಿಡರ್ ಕಾರು ಕೊಂಡರು. ಆಗ ಅವರ ಮನೆಮಂದಿಯೆಲ್ಲ ಸಂಭ್ರಮಪಟ್ಟಿದ್ದು ಇಂದಿಗೂ ನೆನಪಿದೆ. ಅನೇಕ ವರ್ಷಗಳಿಂದ ಕ್ಯಾಬಿನೆಟ್ ದರ್ಜೆಯ ಸಚಿವರಾಗಿದ್ದ ಅವರು ಮೊದಲ ಬಾರಿಗೆ ಕೊಂಡದ್ದು ಒಂದು ಹಳೆಯ ಕಾರನ್ನು!
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ನನ್ನ ತವನಿಧಿ…: ರಂಜಾನ್ ದರ್ಗಾ ಬರೆಯುವ ಸರಣಿ

ಜನಸಾಮಾನ್ಯರ ಶಕ್ತಿಯಲ್ಲಿ ಮತ್ತು ಜ್ಞಾನ ಶಕ್ತಿಯಲ್ಲಿ ಅವರಿಗೆ ಅಪಾರವಾದ ನಂಬಿಕೆ ಇದೆ. ಒಬ್ಬ ವಕೀಲನಿಗೆ ತನ್ನ ಕ್ಷೇತ್ರದಲ್ಲಿನ ಎಷ್ಟು ಶಬ್ದಗಳು ಗೊತ್ತಿವೆಯೋ ಅದಕ್ಕಿಂತ ಹೆಚ್ಚಿನ ಶಬ್ದಗಳು ಮೀನುಗಾರನಿಗೆ ಅವನ ಸಮುದ್ರ ಸಂಬಂಧದಿಂದ ಗೊತ್ತಾಗುತ್ತವೆ ಎಂದು ಅವರು ಹೇಳಿದ್ದರು. ಆತನಿಗೆ ವಿವಿಧ ಜಾತಿಯ ಜಲಚರಗಳು, ಗಾಳಿ, ಮೋಡಗಳು, ತೆರೆಗಳು, ಕಾಲ ಮತ್ತು ದಿನಮಾನಗಳ ಪರಿಚಯವಿರುತ್ತದೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 68ನೇ ಕಂತು ನಿಮ್ಮ ಓದಿಗೆ

Read More

ಕತ್ತಲಲಿ ಕಂಡ ಮಿನುಗುವ ಕಣ್ಣುಗಳು….

ಆ ಹಾಳು ಗುಡಿಯ ಮುಂದೆ ಹೋದೆವು. ಒಬ್ಬರೂ ಕಾಣಲಿಲ್ಲ. ಅಷ್ಟೊತ್ತಿಗೆ ಒಳಗಿನಿಂದ ಒಬ್ಬ ಯುವಕ ಬಂದ. ದೇವಾಲಯದೊಳಗೆ ಸಂಪೂರ್ಣ ಕತ್ತಲು ಕವಿದಿತ್ತು. ಇದೇನು ಹೀಗೆ ಎಂದಾಗ, ಆತ ‘ಇರುವುದೊಂದೇ ಮೋಂಬತ್ತಿ ನಿಮ್ಮ ಬರುವಿಗೆ ಕಾಯುತ್ತಿದ್ದೆವು’ ಎಂದ. ಒಳಗೆ ಕಾಲಿಟ್ಟಕೂಡಲೆ ಆತ ಮೋಂಬತ್ತಿ ಹಚ್ಚಿದ. ಅಲ್ಲಿ ಕುರ್ಚಿ ಟೇಬಲ್ ಏನೂ ಇರಲಿಲ್ಲ. ಆ ಮೋಂಬತ್ತಿಯ ಬೆಳಕಲ್ಲಿ ನೂರಾರು ಯುವಕರು ಕುಳಿತಿದ್ದು ಮಸುಕು ಮಸುಕಾಗಿ ಕಾಣುತ್ತಿತ್ತು. ಅವರ ಕಣ್ಣುಗಳು ಮಾತ್ರ ನಕ್ಷತ್ರಗಳ ಹಾಗೆ ಹೊಳೆಯುತ್ತಿದ್ದವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 64ನೇ ಕಂತು ನಿಮ್ಮ ಓದಿಗೆ

Read More

ಬಾಂಬುದಾಳಿಗೀಡಾಗಿ ಬಾನುಲಿ ಬರಿದಾಗಿದೆ ಮೌನವಾಗಿದೆ…

ಭಾಷಣ ಸ್ಪರ್ಧೆಯ ದಿನ ಬಂದಿತು. ಹೈಸ್ಕೂಲು ಕಟ್ಟಡದ ಹಿಂದಿನ ಗೋಡೆಯ ಮೇಲೆ ಹೋಗಿ ಕುಳಿತೆ. ಗೋಡೆ ಜಿಗಿದು ಸಭಾಭವನಕ್ಕೆ ಹೋಗಬೇಕೆಂದರೆ ಧೈರ್ಯ ಸಾಲದು. ಹಾಫ್ ಪ್ಯಾಂಟ್ ಹರಿದಿತ್ತು. ಷರ್ಟ್ ಗಲೀಜಾಗಿತ್ತು. ಕ್ಷೌರಿಕರಿಗೆ ಕೊಡಲಿಕ್ಕೆ ಹಣವಿಲ್ಲದ್ದಕ್ಕಾಗಿ ಕೂದಲು ಬೆಳೆದಿತ್ತು. ಕೊಬ್ಬರಿ ಎಣ್ಣೆ ಇಲ್ಲದ್ದಕ್ಕಾಗಿ ಕೂದಲು ಒಣಗಿದ್ದರಿಂದ ಕಾಡು ಮನುಷ್ಯನ ಹಾಗೆ ಕಾಣುತ್ತಿದ್ದೆ. ಭಾಷಣ ಮಾಡುವ ಸ್ಫೂರ್ತಿಗೆ ಪೂರಕವಾಗಿರುವಂಥ ಯಾವುದೂ ಇರಲಿಲ್ಲ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 63ನೇ ಕಂತು ನಿಮ್ಮ ಓದಿಗೆ

Read More

ಸೀರೆಯ ಸೆರಗಿನಲ್ಲಿ ಅನ್ನ-ಸಾರು….!

ಹೊಸಪೇಟೆಯ ಬಡತನ ನನ್ನನ್ನು ದಿಗಿಲು ಬಡಿಸಿತು. ಬೆಳಗಿನ ನಾಷ್ಟಾ ಮತ್ತು ಮಧ್ಯಾಹ್ನದ ಊಟದ ವೇಳೆ, ತಂತಿಬೇಲಿಯ ಆಚೆ ಬಡವರು ಅನ್ನಕ್ಕಾಗಿ ಕಾಯುತ್ತಿದ್ದರು. ನಮಗೆ ಇಲ್ಲಿ ಬೇಕಾದಷ್ಟು ಆಹಾರ ನೀಡುತ್ತಿದ್ದರು. ನನ್ನ ಕೆಲವರು ಗೆಳೆಯರಿಗೆ ಆ ನಿರ್ಗತಿಕರ ಬಗ್ಗೆ ತಿಳಿಸಿ ಒಂದು ಯೋಜನೆ ರೂಪಿಸಿದೆ. ನಾವೆಲ್ಲ ಹೆಚ್ಚಿಗೆ ಅನ್ನ ಹಾಕಿಸಿಕೊಳ್ಳುವುದು. ಸ್ವಲ್ಪ ತಿಂದ ಹಾಗೆ ಮಾಡಿ ಅವರ ಬಳಿ ಹೋಗುವುದು. ಆ ಬಡ ಹೆಣ್ಣುಮಕ್ಕಳು ಸೆರಗೊಡ್ಡುವುದು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 62ನೇ ಕಂತು ನಿಮ್ಮ ಓದಿಗೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ