Advertisement

Tag: ಪ್ರಶಾಂತ್ ಬೀಚಿ

ಸೇವೆಯನ್ನು ಕಲಿಯುವ ಉತ್ಸಾಹಿ ಮಕ್ಕಳು

ಕೆನಡಾದಲ್ಲಿ ಹೈ ಸ್ಕೂಲ್ ಓದುವ ಮಕ್ಕಳು 40 ಗಂಟೆಗಳ ಸೇವಾ ಕಾರ್ಯಗಳನ್ನು ಮಾಡಬೇಕು. ಆದನ್ನು ಮುಗಿಸಿದರೆ ಮಾತ್ರ ಅವರಿಗೆ ಹೈ ಸ್ಕೂಲ್ ಮುಗಿಸಿದ ಪ್ರಮಾಣ ಪತ್ರವನ್ನು ಕೊಡುತ್ತಾರೆ. ಯಾವ ಸಂಸ್ಥೆಗೆ ಸೇವೆ ಮಾಡುತ್ತೇವೆ, ಎಷ್ಟು ಗಂಟೆಗಳು ಮಾಡುತ್ತೇವೆ ಎಂದು ನಮೂದಿಸಿ, ಸೇವಾ ಸಂಸ್ಥೆಗಳ ವಿವರ ಮತ್ತು ಅಲ್ಲಿನ ಪರಿಚಾರಕರ ಸಹಿಯ ಜೊತೆಗೆ ಅವರ ವಿವರಗಳನ್ನು ನಮೂದಿಸಬೇಕು. ಎಲ್ಲಾ ಮಕ್ಕಳು ಇದನ್ನು ಬಹಳ ನ್ಯಾಯಯುತವಾಗಿ ಮತ್ತು ನಿಖರ ಮಾಹಿತಿಯೊಂದಿಗೆ ಪೂರ್ಣ ಮಾಡುತ್ತಾರೆ. ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಕೊಡುವುದಿಲ್ಲ.
ಪ್ರಶಾಂತ್‌ ಬೀಚಿ ಅಂಕಣ

Read More

ಇಂತೀ, ನಿನ್ನ ಪ್ರೀತಿಸುವ…

ನನ್ನನ್ನು ಅನುಕೂಲಕ್ಕೆ ಬಳಸಿಕೊಂಡರೂ, ಅದು ನಾನೆ ಮನಸಾರೆಯಾಗಿ ಕೊಟ್ಟ ಅವಕಾಶ. ನನ್ನ ಮೇಲೆ ಪ್ರೀತಿ ಹೆಚ್ಚಲಿ ಎಂದಿದ್ದ ಸ್ವಾರ್ಥ. ಹಾಗೇನಾದರೂ ಯಾವತ್ತಾದರೂ ಮತ್ತೆ ನನ್ನನ್ನು ನಿನ್ನ ಅನುಕೂಲಕ್ಕೆ ಉಪಯೋಗಿಸಿಕೊಳ್ಳಬೇಕೆನಿಸಿದರೆ ನೆನಪಿಸಿಕೊ. ನನ್ನ ಮನಸ್ಸು ನೆಮ್ಮದಿಯ ನಿಟ್ಟುಸಿರು ಬಿಡಬಹುದು. ಪ್ರೀತಿ ಎಂದರೆ ಕೊಟ್ಟು ಕೊಳ್ಳುವ ವ್ಯಾಪಾರವಲ್ಲ, ಎಲ್ಲವನ್ನೂ ನೀಡುವ ತ್ಯಾಗವಲ್ಲ, ಕಸಿದುಕೊಳ್ಳುವ ದುರ್ಬುದ್ಧಿಯಲ್ಲ, ನಮಗಾಗಿಯೆ ಕೊಡುವ ಸ್ವಾರ್ಥ. ನೋಡುಗರಿಗೆ ಪ್ರೀತಿಯಲ್ಲಿ ಮೋಸ ಕಾಣಿಸಬಹುದು ಆದರೆ ಪ್ರೀತಿಸುವವರಲ್ಲಿ ಕಾಣಿಸಿದರೆ ಅದು ಪ್ರೀತಿಯೆ ಅಲ್ಲ.
ಪ್ರಶಾಂತ್‌ ಬೀಚಿ ಅಂಕಣ

Read More

ಮಾನವೀಯತೆಯ ಹಾದಿಯನ್ನು ಆರಿಸಿಕೊಂಡವರು..

ಭಾರತವೂ ಸೇರಿದಂತೆ ನಾಲ್ಕು ಖಂಡಗಳಲ್ಲಿ ಅಲ್ಪ ಸ್ವಲ್ಪ ದಿನ ಜೀವಿಸಿ, ಮನುಷ್ಯರಲ್ಲಿ ಎಷ್ಟೊಂದು ಸಹಾಯ ಜೀವಿಗಳು ಇದ್ದಾರೆ ಎಂದು ಸಂತಸವಾಗುತ್ತದೆ. ಕೆನಡಾಗೆ ಬಂದು ಮೂರು ವರ್ಷಗಳಲ್ಲಿ ಮೂರು ಊರುಗಳನ್ನು ಸುತ್ತಾಡಿ ಈಗ ಬಂದಿರುವುದು ಬ್ರಾಂಪ್ಟನ್ ಎನ್ನುವ ಸುಂದರ ನಗರಕ್ಕೆ. ಈ ಊರನ್ನು ಹೂವುಗಳ ಊರು ಎಂದು ಕರೆಯುತ್ತಾರೆ, ಭಾರತೀಯರೇ ಹೆಚ್ಚಾಗಿರುವ ಈ ಊರಿನಲ್ಲಿ, ಕನ್ನಡಿಗರೂ ಹೆಚ್ಚಾಗಿದ್ದಾರೆ. ಕನ್ನಡದ ಜನ ಕೆನಡಾಗೆ ಬಂದಾಗ ಮೊದಲು ಹುಡುಕುವುದೆ ‘ಕನ್ನಡ ಸಂಘ’.

Read More

ಹಬ್ಬಗಳಿರಬೇಕು… ಬದುಕನ್ನು ಸವಿಯಲು

ಹಬ್ಬಗಳ ಮಹತ್ವವನ್ನು ಇತ್ತೀಚಿನ ದಿನಗಳಲ್ಲಿ ನಾವು ಕಳೆದುಕೊಳ್ಳುತ್ತಿದ್ದೇವೆ. ಮಕ್ಕಳಿಗೆ ಹಬ್ಬಗಳ ಹೆಸರೆ ಸರಿಯಾಗಿ ಗೊತ್ತಾಗದಾಗಿರುವುದು ವಿಪರ್ಯಾಸ. ಹಬ್ಬಗಳ ಪರಿಚಯವೇ ತಿಳಿಯದಿದ್ದಾಗ, ಅದರ ಪರಂಪರೆ
ಅರಿಯುವುದು ದೂರದ ಮಾತು.  ಯಾವುದೇ ಹಬ್ಬವಿರಲಿ, ಯಾವುದೇ ಜನಾಂಗಕ್ಕೆ ಸೇರಿದ್ದಾಗಿರಲಿ, ಅದರ ಬಗ್ಗೆ ತಿಳಿದಾಗ ಆಚರಣೆ ಬಗ್ಗೆ ಗೌರವ ಹೆಚ್ಚುತ್ತದೆ. ಹಿಂದುಗಳಾದವರು ಕ್ರೈಸ್ತರ ಹಬ್ಬಕ್ಕೆ ನಿರ್ಲಕ್ಷ್ಯ ಮಾಡುವುದು, ಕ್ರೈಸ್ತರು ಮುಸಲ್ಮಾನರ ಹಬ್ಬಕ್ಕೆ ಅಗೌರವ ತೋರುವುದು, ಮುಸಲ್ಮಾನರು ಹಿಂದುಗಳ ಹಬ್ಬಕ್ಕೆ…

Read More

ದೇಶ ಯಾವುದಾದರೇನು, ಒಳಿತನ್ನು ಪರಾಂಬರಿಸೋಣ

ಪಾಶ್ಚಿಮಾತ್ಯ ದೇಶಗಳಲ್ಲಿ ನಾಲ್ಕು ಋತುಗಳು ಕಂಡು ಬರುತ್ತದೆ, ಅದರಲ್ಲೂ ಕೆನಡಾ ದೇಶದಲ್ಲಿ ವರ್ಷದ ಆರು ತಿಂಗಳು ಮಂಜು ಬೀಳುತ್ತಿದ್ದು, ಹಿಮದಿಂದ ಕೂಡಿದ್ದರೂ ನಾಲ್ಕು ಋತುಗಳು ಬಂದು ಹೋಗುತ್ತವೆ. ಇಂತಹ ದೇಶಗಳಲ್ಲಿ ಸ್ಪ್ರಿಂಗ್ ಎನ್ನುವ ಒಂದು ಋತು ಇದೆ, ಅದನ್ನು ವಸಂತ ಕಾಲ ಎನ್ನುವುದು ಸೂಕ್ತ. ಈ ಋತುವಿನ ಸಮಯದಲ್ಲಿ ಬೋಳಾಗಿದ್ದ ಮರಗಳು ಇದ್ದಕ್ಕಿದ್ದಂತೆ ಚಿಗುರೊಡೆಯುತ್ತವೆ, ನೋಡು ನೋಡುತ್ತಿದ್ದಂತೆ ಎಲೆಗಳಿಂದ ಪೂರ್ತಿ ಆವರಿಸಿಕೊಳ್ಳುತ್ತದೆ. ಮಣ್ಣಿನ ಶಕ್ತಿಯೋ, ಜಾಗದ ಮಹಿಮೆಯೋ ಕೇವಲ ತಿಂಗಳಲ್ಲಿ…

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ