Advertisement

Tag: ಬರಗೂರು ರಾಮಚಂದ್ರಪ್ಪ

ಕಾಗೆ ಕಾರುಣ್ಯದ ಕಣ್ಣು: ಬರಗೂರು ರಾಮಚಂದ್ರಪ್ಪ ಕೃತಿಯ ಒಂದು ಬರಹ

ಇನ್ನೊಂದು ವಿಷಯವನ್ನೂ ಇಲ್ಲಿ ಹೇಳಬೇಕು. ಚಿತ್ರೀಕರಣಕ್ಕೆಂದು ನಾನು ಆಯ್ಕೆ ಮಾಡಿಕೊಂಡ ಸ್ಥಳಗಳು ಸಾಂಪ್ರದಾಯಿಕ ರಮಣೀಯ ಸ್ಥಳಗಳಲ್ಲ. ಅಂದರೆ ಹಸಿರು, ನದಿ ತೀರ ಇತ್ಯಾದಿಗಳಿಂದ ಕೂಡಿದ ಸ್ಥಳಗಳಲ್ಲ. ಬಯಲು ಸೀಮೆಯ ಬೆಟ್ಟ, ಗುಡ್ಡ, ಹಸಿರಿಲ್ಲದೆ ಒಣಗಿದ ಪರಿಸರಗಳನ್ನು ಆಯ್ಕೆ ಮಾಡಿಕೊಂಡೆ. ಪ್ರಕೃತಿಯಲ್ಲಿರುವ ಸಮಸ್ತವೂ ಮುಖ್ಯವೆಂಬ ತಾತ್ವಿಕತೆ ನನ್ನದು. ನನ್ನ ಸಿನಿಮಾ ಕತೆಗಳು ಬಹುಪಾಲು ನಮ್ಮ ತುಮಕೂರು ಜಿಲ್ಲೆಯ ಸಿರಾ, ಮಧುಗಿರಿ, ಪಾವಗಡ, ದೇವರಾಯನ ದುರ್ಗ, ಚಿತ್ರದುರ್ಗ – ಇವೇ ಮುಂತಾದ ವಲಯಗಳಿಗೆ ಹೊಂದುತ್ತಿದ್ದ ವಸ್ತುವನ್ನು ಒಳಗೊಂಡಿದ್ದವು.
ಬರಗೂರು ರಾಮಚಂದ್ರಪ್ಪ ಅವರ “ಕಾಗೆ ಕಾರುಣ್ಯದ ಕಣ್ಣು” ಆಯ್ದ ಅನುಭವಗಳ ಕಥನದ ಒಂದು ಬರಹ ನಿಮ್ಮ ಓದಿಗೆ

Read More

ಪ್ರಜಾಪ್ರಭುತ್ವದ ಆಶಯಕ್ಕೆ ಆಸರೆಯಂತಹ ಬರಹ..

ರವೀಂದ್ರ ಭಟ್ಟರು ನಿರೂಪಿಸಿದ ಪ್ರಸಂಗ ಮತ್ತು ಅಂತಿಮ ಅಭಿಪ್ರಾಯದಲ್ಲಿ ಪ್ರಜಾಪ್ರಭುತ್ವದ ಮೂಲ ಆಶಯವಿದೆ. ಮಹಾಭಾರತದ ರಾಜಪ್ರಭುತ್ವವು ಜನಪರವಾಗಿರ ಬೇಕೆಂದು ಅಂದಿನ ಶ್ರೀಕೃಷ್ಣ ಬಯಸಿದಂತೆ, ಪ್ರಜಾಪ್ರಭುತ್ವದ ಇಂದಿನ ಜನರು ಆಗ್ರಹಿಸುತ್ತಾರೆ. ಅಂದಿನ ಶ್ರೀಕೃಷ್ಣನ ಅಭಿಮತ ಮತ್ತು ಇಂದಿನ ಜನರ ಆಗ್ರಹವು, ಪ್ರಭುತ್ವವು ಮೌಢ್ಯಾಚರಣೆಗಳನ್ನು ಮೀರಿದ ಜನಹಿತ ಕೆಲಸಗಳಲ್ಲಿ ಪುಣ್ಯವನ್ನು ಗಳಿಸ ಬೇಕೆಂಬ ನೀತಿಪಾಠವನ್ನು ಒಳಗೊಂಡಿದೆ. ಅಂದಿನ ಪ್ರಸಂಗದಲ್ಲಿರುವ ‘ಶ್ರೀಕೃಷ್ಣ’ ಒಂದು ‘ರೂಪಕ’ವಾಗಿ ಇಂದಿನ ಆಶಯವನ್ನೂ ಅಭಿವ್ಯಕ್ತಿಸುವುದು ಗಮನೀಯ.
ರವೀಂದ್ರ ಭಟ್ಟ ಐನಕೈ ಅವರ “ರಾಜಕಾರಣದಲ್ಲಿ ನಿಂಬೆ – ಹಾಗಲ” ಅಂಕಣ ಬರಹಗಳ ಸಂಕಲನಕ್ಕೆ ಬರಗೂರು ರಾಮಚಂದ್ರಪ್ಪ ಬರೆದ ಮುನ್ನುಡಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ