Advertisement

Tag: ಮಿನಿಕಾಯ್

ಹಸಿರು ಕಡಲ ಹೆಣ್ಣಾಮೆಯ ಪ್ರಸವ ಪ್ರಸಂಗ

“ಆ ದೊಡ್ಡ ಹೆಣ್ಣಾಮೆ ಬಹಳಷ್ಟು ಲೆಕ್ಕಾಚಾರ ಹಾಕಿ ಸಾವಿರಾರು ಮೈಲು ದೂರದಿಂದ ಈಜಿ ಬಂದಿರಬಹುದು. ಭೂಮಿಯ ಅಯಸ್ಕಾಂತೀಯ ಗುಣಗಳು ಈ ಹೆಣ್ಣಿಗೆ ತವರಿನ ದಾರಿಯನ್ನು ತೋರಿಸಿರಬಹುದು. ಕಡಲಿನ ಒಳ ಅಲೆಗಳ ಹರಿವು, ಆಕಾಶದ ತಾರೆಗಳ ಲೆಕ್ಕಾಚಾರ, ಕಡಲ ಭರತ ಇಳಿತಗಳ ಪಂಚಾಂಗ, ಹೊಟ್ಟೆಯೊಳಗಿನ ಮೊಟ್ಟೆಗಳ ಜಾತಕದ ಗೋಚಾರಫಲ ಎಲ್ಲವೂ ಇದ್ದಿರಬಹುದು. ಆದರೆ ಎಲ್ಲೋ ಲೆಕ್ಕ ತಪ್ಪಿದಂತೆ ಇಳಿ ಹಗಲ ಹೊತ್ತೇ ಸೂರ್ಯ ಮುಳುಗುವ ಮೊದಲೇ ಈ ಆಮೆ ಪ್ರಸವ ಮುಗಿಸಿ…”

Read More

ಮಾಯದಂತಹ ಒಂದು ಮಧ್ಯಾಹ್ನದ ಮಳೆ

“ಧರ್ಮ ಗ್ರಂಥಗಳಲ್ಲಿರುವ ಸ್ವರ್ಗದ ವಿವರಗಳಲ್ಲಿರುವ ಎಲ್ಲ ಸೌಂದರ್ಯವನ್ನೂ ನಾನೂ ಇಲ್ಲಿ ಸ್ವತಃ ಕಂಡಿದ್ದೆ. ಆದರೆ ಯಾಕೋ ಅಪ್ಸರೆಯರು ಕಾಣಿಸುತ್ತಿಲ್ಲವಲ್ಲಾ ಎಂದು ಯೋಚಿಸುತ್ತಿದ್ದೆ. ಒಂದು ಮಧ್ಯಾಹ್ನ ಬಿಸಿಲಲ್ಲಿ ತಿರುಗಿ ಬಸವಳಿದು ಒಂದು ನಿಂಬೂ ಪಾನಿಯ ಅಂಗಡಿಗೆ ಹೋಗಿದ್ದೆ. ಅದು ನಿಜವಾಗಿ ಒಂದು ದಿನಸಿ ಅಂಗಡಿ. ಆ ಅಂಗಡಿಯೊಳಗೇ ಒಂದು ಮೂಲೆಯಲ್ಲಿ ನಿಂಬೂ ಪಾನಿಯ ಅಂಗಡಿ. ಅದನ್ನು ನಡೆಸುತ್ತಿರುವವರು ದಿನಸಿ ಅಂಗಡಿಯ ಮಾಲಿಕರ ಮಡದಿಯೂ ಇರಬಹುದು. ಅಥವಾ ಮಗಳೂ ಆಗಿರಬಹುದು.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಕಥಾನಕದ ಒಂಬತ್ತನೇ ಕಂತು.

Read More

ಉಕ್ಕಿನ ಮಹಿಳೆ ಹವ್ವಾ ತಾತ

ಹವ್ವಾ ಅವರಿಗೆ ಈಗ ಎಪ್ಪತ್ತೆರಡು ವರ್ಷ. ಕಳೆದ ನಲವತ್ತು ವರ್ಷಗಳಿಂದ ಅಂಗನವಾಡಿಯೊಂದರ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದವರು ಇದೀಗ ತಾನೇ ನಿವೃತ್ತರಾಗಿದ್ದಾರೆ. ಅವರ ಬಳಿ ಇರುವ ಸೈಕಲ್ಲಿಗೂ ಐವತ್ತು ವರ್ಷಗಳಾಗಿವೆ. ಈ ದ್ವೀಪದಲ್ಲಿ ಸೈಕಲ್ಲು ಓಡಿಸಿದ ಮೊದಲ ಮಹಿಳೆ ಈಕೆ. ‘ನೀವು ಬಂದಾಗ ನಾನು ಸೈಕಲ್ಲು ಓಡಿಸುವ ಫೋಟೋ ತೆಗೆಯಬೇಕು’ ಎಂದಿದ್ದರು ಆಕೆ.
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಕಥಾನಕದ ಎಂಟನೇ ಕಂತು.

Read More

ಸೈಕಲ್ಲಿನ ಜೊತೆಗಿದ್ದ ಲೇಡೀಸು ಸೈಕಲ್ಲು!

“ಅಲೆಯುವ ಮನಕ್ಕೆ ಲೋಕದ ಯಾವ ಸದ್ದುಗಳೂ ಕೇಳಿಸುವುದಿಲ್ಲವಂತೆ. ಅಲೆಮಾರಿಗಳು ಲೋಕದ ಗೊಡವೆಗಿಂತ ತಮ್ಮ ತಮ್ಮ ಸ್ವವ್ಯಸನಗಳಲ್ಲೇ ಹೆಚ್ಚು ಮುಳುಗಿರುತ್ತಾರಂತೆ. ಹಾಗಾಗಿ ಅವರು ಆಯಾಸಗೊಳ್ಳದೆ ಚಲಿಸುತ್ತಲೇ ಇರುತ್ತಾರಂತೆ. ಇದು ಹಿಂದೆ ಬದುಕಿದ್ದ ಮಿತ್ರರೂ ಆಗಿದ್ದ ಹಿರಿಯರೊಬ್ಬರು ಹೇಳಿದ್ದ ಮಾತು. ಅವರ ಪ್ರಕಾರ ಅಲೆಮಾರಿಗಳಷ್ಟು ಸ್ವರತಿ ಪ್ರಿಯರು ಬೇರೆ ಯಾರೂ ಇಲ್ಲ. ಹಾಗೆಯೇ ನನ್ನ ಕಥೆಯೂ ಎಂದು ಅನಿಸುತ್ತಿತ್ತು.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಫೋಟೋ ಕಥಾನಕದ ಏಳನೆಯ ಕಂತು

Read More

ಕಾಕ ಸಾಮ್ರಾಜ್ಯದಲ್ಲಿ ಹೂಹಕ್ಕಿಗಳು ಇರಬಲ್ಲುವೇ?

“ನಾವು ಶಾಲೆಯಲ್ಲಿ ಕಲಿತ ಹಾಗೆ ಇಲ್ಲಿ ತೇಲಿ ಬರುವ ಮೋಡಗಳು ಪರ್ವತಶ್ರೇಣಿಗಳಿಗೆ ಡಿಕ್ಕಿ ಹೊಡೆದು ಮಳೆಯಾಗಿ ಸುರಿಯುವುದಿಲ್ಲ, ಬದಲಾಗಿ ತಮ್ಮ ಭಾರಕ್ಕೆ ತಾವೇ ನಲುಗಿ ದೊಪ್ಪನೆ ತಪ್ಪಲೆಯೊಳಗಿನ ನೀರಂತೆ ಸುರಿದು ತಾವು ಇದುವರೆಗೆ ಇರಲೇ ಇಲ್ಲವೇನೋ ಎಂಬ ಹಾಗೆ ಮಾಯವಾಗಿರುತ್ತದೆ. ದ್ವೀಪದ ಒಳಗೂ ಹಾಗೇ. ಬಿಸಿಲಲ್ಲಿ ಬೆಳಗುತ್ತಿದ್ದ ಆಕಾಶವೇನಾದರೂ ಮಂಕಾಗಿದ್ದರೆ ಮನೆಯಿಂದ ಹೊರಬಂದು ಆಕಾಶಕ್ಕೆ ತಲೆ ಎತ್ತಿದರೆ ಕಪ್ಪಗಿನ ಮೇಘವೊಂದು ಕರಿಯ ಬೆಕ್ಕಿನ ಹಾಗೆ ಮೇಲಿನ ಮೂಲೆಯೊಂದರಿಂದ ನಿಮ್ಮನ್ನು ನೋಡುತ್ತಿರುತ್ತದೆ.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಫೋಟೋ ಕಥಾನಕದ ಆರನೆಯ ಕಂತು

Read More
  • 1
  • 2

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ