Advertisement

Tag: ಯಕ್ಷಗಾನ

ಎ. ಬಿ. ಪಚ್ಚು ಬರೆದ ಈ ಭಾನುವಾರದ ಕತೆ

ಆ ರಾತ್ರಿ ಯಕ್ಷಗಾನ ಎಲ್ಲಾ ನೋಡಿ ಮುಗಿದು ಬೆಳಿಗ್ಗೆ ಮನೆಗೆ ತಲುಪಿದೆ. ಕಣ್ಣೀರಿನ ಹೊರತು ಆ ದಿನ ಸಮಜಾಯಿಷಿ ಕೊಡಲು ನನ್ನಲ್ಲಿ ಯಾವ ಮಾತುಗಳೂ ಇರಲಿಲ್ಲ. ನಿಜ ನಾನೇನು ತಪ್ಪು ಮಾಡಿರಲಿಲ್ಲ, ಆದರೆ ಯಾಕೋ ನನಗೆ ಅಮ್ಮನನ್ನು ಒಬ್ಬಳನ್ನೇ ಬಿಟ್ಟು ಹೋದ ಆ ತಪ್ಪಿತಸ್ಥ ಭಾವ ಆ ದಿನದಿಂದ ಬಹಳವಾಗಿ ಕಾಡಿತು ಮಹೇಶ. ಆ ನೋವಿನಿಂದಾಗಿ ಆ ದಿನದಿಂದ ನಾನು ಎಂದಿಗೂ ಯಕ್ಷಗಾನದತ್ತ ಕಣ್ಣು ಹಾಯಿಸಲೇ ಇಲ್ಲ.
ಎ.ಬಿ. ಪಚ್ಚು ಬರೆದ ಕತೆ “ಮೈಸಾಸುರ”

Read More

ಭಾಗವತಿಕೆಯ ಪರಂಪರೆಯಲ್ಲಿ ವಿದ್ವಾನ್ ಗಣಪತಿ ಭಟ್ ಅವರ ವೈಶಿಷ್ಟ್ಯತೆ

ಯಕ್ಷಗಾನವನ್ನು ವೃತ್ತಿಯಾಗಿ ಸ್ವೀಕರಿಸಿದವರಿಗೆ ಜನಪ್ರಿಯ ಮಾದರಿಗಳಿಂದ ತಪ್ಪಿಸಿಕೊಳ್ಳುವುದು ಕಷ್ಟದ ಕೆಲಸ. ಅವರಿಗೆ ಹಲವು ಒತ್ತಡಗಳಿರುತ್ತವೆ. ಒತ್ತಡಗಳ ವಿರುದ್ಧ ನಿಲ್ಲುವುದಕ್ಕೆ ಒಂದು ರೀತಿಯ ನಿಷ್ಠುರತೆ, ಛಲ, ವಿಶ್ವಾಸವೂ ಬೇಕು. ಅಂತಹುದಕ್ಕೆ ಮಾದರಿ ವಿದ್ವಾನರು. ನಮಗೆ ಈಗ ಸಿಗುವ ಅವರ ತಾರುಣ್ಯ ಕಾಲದ ವೃತ್ತಿ ಮೇಳದ ಹೊಸಪ್ರಸಂಗದ ಪದ್ಯಗಳು, ಹಳೆಯ ದೇವಿ ಮಹಾತ್ಮೆಯ ಧ್ವನಿ ಮುದ್ರಿಕೆಯನ್ನು ಕೇಳಿದರೆ ಇದು ಸ್ಪಷ್ಟವಾಗುತ್ತದೆ.
ಯಕ್ಷಾರ್ಥ ಚಿಂತಾಮಣಿ ಅಂಕಣದಲ್ಲಿ ಕೃತಿ ಪುರಪ್ಪೇಮನೆ ಲೇಖನ ಇಲ್ಲಿದೆ.

Read More

ಪೇಟೇಸರದಲ್ಲಿ ನೋಡಿದ ಯಕ್ಷಗಾನ ಬಯಲಾಟದ ಸುತ್ತಮುತ್ತ

ಮಂಡಕ್ಕಿ ಅಂಗಡಿ ಇಡುವವರು ನಮ್ಮ ಚರ್ಚೆಯಲ್ಲಿ ಭಾಗವಹಿಸಿದರು, ಆದರೆ ಅವರು ಫೋಟೊ ತೆಗೆಯೋದು ಬೇಡ ಅಂದರು. ಮುಂಚೆ ಬಳೆ ವ್ಯಾಪಾರ ಮಾಡುತ್ತಿದ್ದರು. ಯಕ್ಷಗಾನವು ಇಷ್ಟ ಆಗುವುದರಿಂದ ಮಂಡಕ್ಕಿ ವ್ಯಾಪಾರ ಮಾಡುತ್ತಾರೆ. ಟೆಂಟ್ ಮೇಳದಲ್ಲಿ ಬರಿ ಭಾಗವತಿಕೆ ಕೇಳೋಕಾಗತ್ತೆ. ಭಾಗವತಿಕೆನೆ ಮುಖ್ಯ ಅವರ ಪ್ರಕಾರ. ‘ಯಕ್ಷಗಾನ ನೋಡಿದ ಹಾಗೂ ಆತು, ಗಂಜಿಗೆ ಕಾಸು ಆತು’, ಅದಕ್ಕೆ ಮಂಡಕ್ಕಿ ವ್ಯಾಪಾರ ಶುರುಮಾಡಿದೆ ಅಂದರು. ಇಲ್ಲಿಯ ಎಲ್ಲಾ ಕಲಾವಿದರೂ ಯಾವ ಪಾತ್ರವನ್ನಾದರೂ ಪದ್ಯ ನೋಡಿಕೊಂಡು ಮಾಡಬಲ್ಲವರಾಗಿದ್ದರು.
ಕೃತಿ ಪುರಪ್ಪೇಮನೆ ಬರಹ

Read More

ಬಲಿಪ ಗಾನಮೀಮಾಂಸೆ

ಯಕ್ಷಗಾನ ಪದಗಳ ಛಂದೋವೈವಿಧ್ಯವನ್ನು ಕಂಡಾಗ ಮತ್ತು ಅದರಂತೆ ಹಾಡಿದಾಗ ವಾದಕನಲ್ಲಿ ಪೂರಕವಾದ ಮನೋಧರ್ಮ ಬೆಳೆಯುತ್ತದೆ.  ಬಲಿಪರ ಗಾನದಲ್ಲಿ ಇದನ್ನು ಕಾಣಬಹುದು. ಹಾಡುವ ತಾಳ ಒಂದೇ ಆದರೂ ಹಾಡಿನ ಆಕಾರ ತುಂಬಾ ವಿಭಿನ್ನವಾಗಿ ಇರುತ್ತದೆ. ಹಾಡು ಕಟ್ಟಲ್ಪಟ್ಟ ಛಂದಸ್ಸು ಮತ್ತು ಸಾಹಿತ್ಯದಿಂದಾಗಿ ಈ ರೀತಿಯ ವ್ಯತ್ಯಾಸವನ್ನು ಹಾಡಿನಲ್ಲಿ ಬಲಿಪರು ಕಾಣಿಸುತ್ತಾರೆ. ಬಲಿಪರು ಬದಲಾವಣೆಯ ಪರ್ವದಲ್ಲಿ ತನ್ನತನವನ್ನ ಪರಂಪರೆಯನ್ನು ಕಾಪಿಟ್ಟುಕೊಂಡ ಧೀಮಂತ ವ್ಯಕ್ತಿಮಾತ್ರವಲ್ಲ ಸಾಂಸ್ಕೃತಿಕವಾಗಿ ಇವರ ಈ ಕೊಡುಗೆ ಬಲು ಮೌಲಿಕವಾದದ್ದು.  ‘ಬಲಿಪಮಾರ್ಗ’ ಸರಣಿಯಲ್ಲಿ ಕೃಷ್ಣ ಪ್ರಕಾಶ್‍ ಉಳಿತ್ತಾಯ ಲೇಖನ

Read More

ಚರ್ಚೆಗಳಲ್ಲಿ ರಸಸಿದ್ಧಾಂತ ಪಠ್ಯಗಳ ಪ್ರಮಾಣ

ಯಾವುದಕ್ಕೆ ಉತ್ತರ ಸಿಗುತ್ತಿಲ್ಲವೊ ಅದನ್ನು ಶಾಸ್ತ್ರ ಹೇಳುತ್ತದೆ ಅಂದ ಮೇಲೆ ಉತ್ತರ ಸಿಗದೇ ನಮಗೆ ಸಮಾಧಾನವಾಗುವ ಹಾಗೆ ಅಥವಾ ಮುಂದಿನ ಚರ್ಚೆ ತಾತ್ಕಾಲಿಕಯಾಗಿಯಾದರೂ ಕೊನೆಗೊಳ್ಳುವಂತೆ ರಸ ಸಿದ್ಧಾಂತವು ‘ಶಾಸ್ತ್ರ’ವಾಗುತ್ತದೆ. ಸಮಾಜದ ಎಲ್ಲ ಘಟಕಗಳಲ್ಲೂ ಮನುಷ್ಯ ವ್ಯವಹರಿಸುವಾಗ ಈ ‘ಶಾಸ್ತ್ರ’ಕ್ಕೆ  ಸಂವಾದಿಯಾಗುವ ಹಲವು ಪರಿಕರಗಳನ್ನು ಬಳಸಿ ಆ ಸಂದರ್ಭಕ್ಕೆ ಅಂತ್ಯ ಹಾಡುವುದು ಸಾಮಾನ್ಯವೇ.  ಇದೇ ಹಿನ್ನೆಲೆಯಲ್ಲಿ…

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ