Advertisement

Tag: ವಸಂತಕುಮಾರ್‌ ಕಲ್ಯಾಣಿ

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ನಾವೂ ನಮ್ಮ ಮಕ್ಕಳೂ, ಕೆಲಸಕ್ಕೂ, ಶಾಲೆಗೂ ಸೈಕಲ್ನಲ್ಲೋ ನಡೆದುಕೊಂಡೋ ಹೋಗಬೇಕು. ನೀವು ಹಾಕಿದ ಊಟ ತಿಂದು ಕೊಬ್ಬಿದ ನಾಯಿಗಳು ನಮ್ಮ ಮೇಲೆ ಹಾರಿ ಬೀಳ್ತವೆ. ಮೊನ್ನೆ ಮೊನ್ನೆ ಒಂದು ಸಣ್ಣ ಹುಡುಗನಿಗೆ ಸಿಕ್ಕಾಪಟ್ಟೆ ಕಚ್ಚಿ ನಾವು ಅವನನ್ನು ಆಸ್ಪತ್ರೆಗೆ ಕರೆದೊಯ್ಯಬೇಕಾಯಿತು. ಇನ್ನು ಮೇಲೆ ನೀವು ಇಲ್ಲಿ ತಂದು ಹಾಕಬೇಡಿ ಎಂದರಂತೆ….
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ನಾಯಿ ನೆರಳು” ನಿಮ್ಮ ಓದಿಗೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ರಾತ್ರಿ ಕಳೆದು ಬೆಳಗಾಯಿತು. ಸುದ್ದಿ ಇಲ್ಲ. ಶಾಲೆಗೆ ಮಾಲೀಕರು ಬಂದರು. ಸಿ ಈ ಓ, ಡ್ರೈವರ್, ಆಯಾಗಳ ಮೀಟಿಂಗ್ ನಡೆಯಿತು. ಹೆಚ್ಚಿನ ವಿಷಯ ತಿಳಿಯಲಿಲ್ಲ. ಆದರೆ ಎಲ್ಲರೂ “ಅವರಿಬ್ಬರ ನಡುವೆ ಏನೋ ನಡೆಯುತ್ತಿತ್ತು. ಅವಳು ಬಲೆ ಪಾಕಡ…” ಎಂದು, ಕೆಲವರು ‘ಮಹದೇವ ಗುಮ್ಮನ ಗುಸಕ.. ಸೈಲೆಂಟಾಗಿ ಇದ್ದು ಹಿಂಗ್ ಮಾಡ್ಬಿಟ್ಟ’ ಹೀಗೆ… ತರಹೇವಾರಿ ಮಾತುಗಳು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ಇದು ಎಂಥಾ ಲೋಕವಯ್ಯ..” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಯಾವುದೀ “ಮುಳ್ಳು, ನಾಲಿಗೆ…?”: ವಸಂತಕುಮಾರ್‌ ಕಲ್ಯಾಣಿ ಬರಹ

ಹಾಗಾಗಿ ಕೆಲವು ಗಂಡು ಮಕ್ಕಳು ಹೆಣ್ಣು ಮಕ್ಕಳು ಕೂತ ಭಾಗದಲ್ಲಿನ ಕೊನೆಯ ಬೆಂಚ್‌ಗಳಲ್ಲಿ ಕೂರಬೇಕಿತ್ತು. ಅವರ ಪೆನ್ನಿನಲ್ಲಿ ಇಂಕ್ ಖಾಲಿಯಾದಾಗ, ಒಬ್ಬಳು ಇನ್ನೊಬ್ಬಳಿಂದ ಸಾಲ ಪಡೆಯುತ್ತಿದ್ದಳು. ಅದು ಹೇಗೆಂದರೆ, ಪೆನ್ನಿನ ಮೇಲ್ ಭಾಗದ ತಿರುಪು ತಿರುಗಿಸಿಕೊಂಡು, ಕೆಳಮುಖವಾಗಿ ಇಟ್ಟುಕೊಂಡು ಪುನಃ ತಿರುಪು ಟೈಟ್ ಮಾಡುವಾಗ ಒಂದೊಂದೇ ತೊಟ್ಟು ಇಂಕ್ ಕೆಳಗೆ ಬೀಳುತ್ತಿತ್ತು, ಅದನ್ನು ಇಂಕ್ ಬೇಕಾದವರು ತಮ್ಮ ಪೆನ್ನನ್ನು ಸಿದ್ಧವಾಗಿಟ್ಟುಕೊಂಡು ನಾಜೂಕಾಗಿ ಒಳಗೆ ಬೀಳುವಹಾಗೆ ಮಾಡಿಕೊಂಡು, ಎಷ್ಟು ತೊಟ್ಟು ಬಿತ್ತು ಗಮನಿಸಿ, ಪುನಃ ಸಾಲ ವಾಪಸ್ ಮಾಡಬೇಕು.
ವಸಂತಕುಮಾರ್‌ ಕಲ್ಯಾಣಿ ಬರಹ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

2042 ಏಪ್ರಿಲ್ ಏಳನೇ ತಾರೀಕು. ಅಮ್ಮನನ್ನು ಕಳಿಸಿ ಒಂದು ವಾರವಾಗಿತ್ತು. ಹಳೆಯ ದೃಶ್ಯದ ಪುನರಾವರ್ತನೆ ಆಯಿತು. ಒಂದು ಬದಲಾವಣೆ ಎಂದರೆ ಅಮ್ಮ ಮನೆಯಲ್ಲಿ ಇರಲಿಲ್ಲ. ಬಂದವರು ಫಾರ್ಮಾಲಿಟಿ ಮುಗಿಸಿ ಚೆಕ್ ಹಾಗೂ ಸೂಟ್ಕೇಸ್‌ನೊಂದಿಗೆ ಅವನಿಯನ್ನು ಕರೆದುಕೊಂಡು ವಾಹನದಲ್ಲಿ ಹೊರಟರು. ಹೊರಡುವ ಮುನ್ನ ಅವನಿ ಕೇಳಿದಳು “ಅಮ್ಮನನ್ನು ಕಳಿಸುವೆ ಎಂದಲ್ಲವೇ ನನ್ನ ಸಹಿ ಪಡೆದದ್ದು… ಈ ಮಸಲತ್ತು ತಿಳಿದಿರಲಿಲ್ಲ, ಅದಕ್ಕೇನಾ ಎರಡು ಪೇಪರ್‌ಗೆ ಸಹಿ ಹಾಕಿಸಿಕೊಂಡದ್ದು… ಸರಿ, ದೇವರು ನಿಮಗೆ ಒಳ್ಳೆಯದು ಮಾಡಲಿ. ಗುಡ್ ಬೈ.” ಎಂದು ಹೊರಟು ಹೋದಳು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ಹಳೆ ಪಾತ್ರೆ… ಹಳೆ ಕಬ್ಬಿಣ…” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ನಗರ ಜೀವನದ ಬಿಕ್ಕಟ್ಟಿನ ಕತೆಗಳು…

ಮಧ್ಯಮ ವರ್ಗದ ಜನ ಚೀಟಿ ವ್ಯವಹಾರದಲ್ಲಿ ಮೋಸ ಹೋಗುವುದನ್ನು ಚಿತ್ರಿಸುವ ಕತೆ ‘ಹರಿಚಿತ್ತ’ ಆಂಧ್ರದಿಂದ ವಲಸೆ ಬಂದ ದಲಿತ ಪೆದ್ದ ಪೆಂಚಾಲಯ್ಯ, ಎಂತೆಂಥವೋ ಕೆಲಸ ಮಾಡುತ್ತಾ, ಹೋರಾಡುತ್ತಾ, ಮಗ ಪೆಂಚಾಲಯ್ಯ ನನ್ನು ಪೊಲೀಸ್ ಕೆಲಸಕ್ಕೆ ಸೇರಿಸುತ್ತಾನೆ. ರಾಜಕೀಯ ಗಲಾಟೆಯಲ್ಲಿ ಸಿಕ್ಕಿ ಹೊಡೆತ ತಿಂದು ಬಿದ್ದಾಗ, ಗಲಾಟೆ ನಿಯಂತ್ರಿಸಲು ಮಗ ಪೊಲೀಸ್ ಪೆಂಚಾಲಯ್ಯ ಬರ್ತಾನೆ. ಗಲಾಟೆಗೆ ಬಲಿಯಾಗುವವರು ಇಂತಹ ಅಮಾಯಕರೇ.. ಕೆಳ ಮಧ್ಯಮವರ್ಗದವರಿಗೆ ‘ಯಾರೂ ಕಾಯುವವರಿಲ್ಲ..’ ಎಂಬ ಸ್ಥಿತಿ.
ವಸಂತಕುಮಾರ್ ಕಲ್ಯಾಣಿ ಅವರ ಕಥಾಸಂಕಲನ “ಪರ್ಯಾಪ್ತ”ಕ್ಕೆ ಜಿಎಸ್ ಸುಶೀಲಾದೇವಿ ಆರ್ ರಾವ್ ಬರೆದ ಮುನ್ನುಡಿ

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ