“ಪಲಾಯನ”ದ ಕತೆಗಳು…

ನಿರರ್ಗಳ ನಿರೂಪಣೆ ಕರಗತವಾಗಿರುವ ಲೇಖಕಿಯ ಕತೆಗಳು ಅನಾಯಾಸವಾಗಿ ಓದಿಸಿಕೊಂಡು ಹೋಗುತ್ತವೆ. ಈ ನಿರೂಪಣೆಯ ಉತ್ಸಾಹದಿಂದ ಮುಂದುವರಿಯುವ ಲೇಖಕಿ ಕೆಲವು ಕತೆಗಳ ಅಂತ್ಯದಲ್ಲಿ ತೀರ್ಪುಗಾರಿಕೆ ಕೈಗೆತ್ತಿಕೊಳ್ಳುತ್ತಾರೆ. ಉದಾಹರಣೆಗೆ “ಸಿಂಗಾರಳ್ಳಿ ಗಣಪತಿ” “ಕಾಣೆ” ಕತೆಗಳ ಅಂತ್ಯದಲ್ಲಿ ಪಾತ್ರಗಳ ಕುರಿತ ವ್ಯಾಖ್ಯೆ. ಈ ವಾಚ್ಯತೆ ಅದುವರೆಗಿನ ಕಥನ ಶೈಲಿಯ ನವಿರುಗಾರಿಕೆಯನ್ನು ಮೊಂಡಾಗಿಸಿ ವರದಿಯ ಸ್ವರೂಪ ತಳೆಯುತ್ತದೆ. ಹಾಗೆಯೇ ಕಥನ ಪ್ರಸ್ತುತಪಡಿಸುವಲ್ಲಿ ವಿಭಿನ್ನ ತಂತ್ರಗಳನ್ನು ಅಳವಡಿಸಿಕೊಂಡಲ್ಲಿ ವೈವಿಧ್ಯತೆ ಲಭಿಸುತ್ತದೆ.
ಶಾರದಾ ಮೂರ್ತಿ ಬರೆದ “ ಪಲಾಯನ ಮತ್ತು ಇತರೆ ಕಥೆಗಳು” ಕಥಾಸಂಕಲನದ ಕುರಿತು ಕೆ.ಆರ್. ಉಮಾದೇವಿ ಉರಾಳ ಬರಹ

Read More