Advertisement

Tag: ಶುಭಶ್ರೀ ಭಟ್ಟ

ನೆರಿಗೆಬಿದ್ದ ನವಿಲುಗರಿ

ಮಲೆನಾಡಿಗೆ ಬಂದು ಬದುಕ ಕಟ್ಟಿಕೊಂಡ ಗಟ್ಟಿಗಿತ್ತಿ. ಇದೇ ಕಾರಣಕ್ಕೋ ಏನೋ ಕೆಲವೊಂದು ಭಾವ ಹೇಳದೆಯೂ ಅರ್ಥ ಮಾಡಿಕೊಂಡು ನಾನಿದ್ದೇನೆ ಎಂಬ ಗಟ್ಟಿ ಭಾವವನ್ನು ಬಿಗಿಯುತ್ತಿದ್ದಳು. ವಯಸ್ಸಿದ್ದಾಗ ಮನೆಗೆ ಬಂದವರನ್ನೆಲ್ಲಾ ಕೈಲಾದಷ್ಟು ಸತ್ಕರಿಸಿ, ಕೈಲಾಗದ ಇಳಿ ಮುಪ್ಪಲ್ಲಿಯೂ ಕಂಡವರನ್ನೆಲ್ಲ ಕರೆದು ಮಾತನಾಡಿಸಿ ಊರವರಿಗೆಲ್ಲರಿಗೂ ಹತ್ತಿರವಾಗಿದ್ದಳು. ಅಜ್ಜಿಯ ಈ ಅಂತಃಕರಣದ ಅಂತಃಶಕ್ತಿ ಅರಿವಾದದ್ದೇ ಅವಳು ಹೋದಾಗ.
ಹಿರಿಯರೊಟ್ಟಿಗಿನ ಮಾತುಗಳಲ್ಲಿ ಸಿಕ್ಕುವ ಜೀವನ ದರ್ಶನದ ಕುರಿತು ಬರೆದಿದ್ದಾರೆ ಶುಭಶ್ರೀ ಭಟ್ಟ

Read More

ಕ್ಯಾತನಮಕ್ಕಿಯ ಕಾಲಮೇಲೆ ಕೂತು ಗಾಳಿಗುಡ್ಡವ ನೆನೆದು

ಕಿಲೋಮೀಟರ್ ದೂರದಲ್ಲಿ ಬೈಕು ನಿಲ್ಲಿಸಿ ನಮ್ಮ ಟ್ರೆಕಿಂಗ್ ಆರಂಭಿಸಿದಾಗ ಇದ್ದ ಉತ್ಸಾಹ, ಕ್ಯಾತನಮಕ್ಕಿಯನ್ನು ಅರ್ಧ ಹತ್ತಿದಾಗಲೇ ಬತ್ತುವುದರಲ್ಲಿತ್ತು. ಒಂಚೂರು ಕುಳಿತು ನೀರು ಕುಡಿದು ಕಚ್ಚಾ ರಸ್ತೆಯಲ್ಲಿ ಬೆವರಿಳಿಸಿ, ತುದಿ ತಲುಪುವಾಗ ಜೀಪಿನಲ್ಲಿ ಬಂದವರ ದರ್ಬಾರಿಗೆ ಮನವೊಮ್ಮೆ ಪಿಚ್ಚೆಂದಿತ್ತು. ಆದರೂ ನಡೆದು ಗಮ್ಯ ತಲುಪುವ ಸಾರ್ಥಕ ಭಾವ ಆರಾಮಾಗಿ ತೇಲಿ ಬಂದವರಿಗೆಲ್ಲಿ ಬರಬೇಕು ಎಂದು ನಮಗೆ ನಾವೇ ಬೆನ್ತಟ್ಟಿಕೊಂಡು ಮುನ್ನಡೆದೆವು.
ಚಿಕ್ಕಮಗಳೂರಿನ ‘ಕ್ಯಾತನಮಕ್ಕಿʼ ಪ್ರವಾಸಿ ತಾಣಕ್ಕೆ ಭೇಟಿ ನೀಡಿದ ಅನುಭವಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ ಶುಭಶ್ರೀ ಭಟ್ಟ

Read More

ತುಂಟ ಪೊಕ್ಕಣ್ಣ & ಕಡುಮಡಿಯ ಅಜ್ಜಿ

ಈ ಪೊಕ್ಕಣ್ಣ ಶತ ತುಂಟ, ಕಣ್ಣಲ್ಲೇ ಅವನ ತುಂಟತನ ಇಣಕುತ್ತಿತ್ತು. ಒಂದು ಕಿವಿ ನೆಟ್ಟಗೆ ಮಾಡಿ, ಮತ್ತೊಂದನ್ನು ಮಡಿಸಿದ ಅಂದರೆ ಅವನೇನೋ ತರಲೆ ಮಾಡುತ್ತಾನೆಂದು ನಮಗೆ ಖಾತ್ರಿಯಾಗಿತ್ತು. ಮಟ ಮಟ ಮಧ್ಯಾಹ್ನ ಎಣ್ಣೆ ಪಳಚಿಕೊಂಡು ಹಂಡೆತುಂಬಾ ಬೀಸಿನೀರನ್ನು ಸ್ನಾನ ಮಾಡಿ, ಒದ್ದೆ ಸೀರೆಯನ್ನುಟ್ಟು ಬರುವ ಅಜ್ಜಿಗೆ ಅಡ್ಡಲಾಗಿಯೇ ಮಲಗುತ್ತಿದ್ದ ಪೊಕ್ಕಣ್ಣ. ಅವನು ಮಲಗಬಾರದೆಂದು ಕೊಡಪಾನಗಟ್ಟಲೆ ನೀರು ಹೊಯ್ದಿಟ್ಟು ಸ್ನಾನಕ್ಕೆ ಹೋಗುತ್ತಿದ್ದರು. ಆದರೂ ಕಾಲು ಒರೆಸುವ ಗೋಣಿಚೀಲವನ್ನೆಳೆದುಕೊಂಡು ಬೇಕಂತಲೇ ಬಚ್ಚಲಮನೆ ಬುಡದಿ ಮಲಗಿ ಸತಾಯಿಸುತ್ತಿದ್ದ ಅಂವ.
ಶುಭಶ್ರೀ ಭಟ್ಟ ಲಲಿತ ಪ್ರಬಂಧಗಳ ಸಂಕಲನ “ಹಿಂದಿನ ನಿಲ್ದಾಣ” ದಿಂದ ಒಂದು ಪ್ರಬಂಧ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ