ಸುಜಯ್‌ ಪಿ. ಬರೆದ ಈ ಭಾನುವಾರದ ಕತೆ

ಹೂವು ಎಂದರೆ ಗೆಲುವು, ಕಾಯಿ ಎಂದರೆ ಅಂದಿನ ಕೋಳಿ ಕಾದಾಟದ ಪಂದ್ಯದಲ್ಲಿ ಸೋಲು ಎಂಬುದೊಂದು ಪುರಾತನ ನಂಬಿಕೆ. ಇದು ಅಂಗಾರ ಒಬ್ಬನ ನಂಬಿಕೆಯಲ್ಲ, ಕೋಳಿಅಂಕಕ್ಕೆ ಹೋಗುವ ಎಲ್ಲರೂ ಮನೆಯ ಪುಟ್ಟ ಮಕ್ಕಳ ಬಳಿ ಈ ಪ್ರಶ್ನೆ ಕೇಳಿ‌ ಅಂಕಕ್ಕೆ ಹೊರಡುವುದು ವಾಡಿಕೆ. ಇದರ ಅರ್ಥ ತಿಳಿದ ಮೇಲೆ ಮುತ್ತ, ‘ಕಾಯಿ’ ಎಂದು ಉತ್ತರಿಸಿದ್ದೇ ಇಲ್ಲ. ಈ ದಿನ ಅಂಗಾರ ಬಲ್ನಾಡಿನ ಜಾತ್ರೆಯ ಕೊನೆಯ ದಿನದಂದು ನಡೆಯುವ ಕೋಳಿಅಂಕಕ್ಕೆ ಹೊರಟು ನಿಂತಿದ್ದ.
ಸುಜಯ್ ಪಿ. ಬರೆದ ಈ ಭಾನುವಾರದ ಕತೆ ‘ಕುಕ್ಕುಟ ಕದನ ಕಥನ’ ನಿಮ್ಮ ಓದಿಗಾಗಿ…

Read More