ಜ್ಞಾನದ ಹೊಸ ಆಯಾಮ ತೋರುವ ಬರಹಗಳು

ಯಾಜಿಯವರು ಸರ್ಚ್‌ಲೈಟ್‌ ಬೀರದ ಸಂಗತಿಗಳು ವಿರಳ. ನಾವೆಲ್ಲ ಮರೆತೇ ಬಿಟ್ಟಿರುವ ವೇದಕಾಲದ ಮಹಾಜ್ಞಾನಿ, ಗಾರ್ಗಿ ವಾಚಕ್ನವಿ ಎಂಬ ಮಹಾಪಂಡಿತೆಯ ಬಗೆಗೂ ಬೆಳಕು ಚೆಲ್ಲುತ್ತಾರೆ. ಗೌತಮ ಬುದ್ಧ ಕರ್ಮಯೋಗವನ್ನು ಪ್ರತಿಪಾದಿಸಿದವನು ಎಂದು ಹೇಳುತ್ತಾ ಬುದ್ಧನೂ ನಮ್ಮ ಪರಂಪರೆಯ ಜತೆಗೆ ಹೊಂದಿರುವ ಸಾಂಗತ್ಯವನ್ನು ಗುರುತಿಸುತ್ತಾರೆ. ಶಂಕರಾಚಾರ್ಯರ ಅದ್ವೈತ ವಿಚಾರದ ವಿಲಾಸವನ್ನು ಬೆರಗಾಗುವಂತೆ ಕಟ್ಟಿಕೊಡುತ್ತಾರೆ. ಹಾಗೆಯೇ ಪುರಾಣದ ಹತಭಾಗ್ಯ ಸ್ತ್ರೀ ಪಾತ್ರಗಳ ಬಗ್ಗೆ ತುಂಬಾ ಮಮತೆಯಿಂದ ಅವರು ಬರೆಯುತ್ತಾರೆ. ಉದಾಹರಣೆಗೆ, ಮಹಾಭಾರತದ ಅಂಬೆ, ಕುಂತಿ, ರಾಮಾಯಣದ ಕೈಕೇಯಿ ಮುಂತಾದವರು.
ನಾರಾಯಣ ಯಾಜಿಯವರ “ನೆಲ ಮುಗಿಲು” ಅಂಕಣ ಬರಹಗಳ ಸಂಕಲನಕ್ಕೆ ಹರಿಪ್ರಕಾಶ್‌ ಕೋಣೆಮನೆ ಬರೆದ ಮುನ್ನುಡಿ

Read More