Advertisement

Tag: art

ರಂಗಸ್ಥಳದಲ್ಲೀಗ ಸಮಯಮಿತಿಯ ವಾಗ್ವಿಲಾಸ

1985 ಕ್ಕಿಂತ ಮುಂಚೆಯೇ  ಇಡಗುಂಜಿ ಮೇಳ ವಿವಿಧ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಕಾಲಮಿತಿಯ ಯಕ್ಷಗಾನ  ಪ್ರದರ್ಶನವನ್ನು ಆರಂಭಿಸಿತ್ತು. 1968 ರಲ್ಲಿ ಮತ್ತು 1971ರಲ್ಲಿ ದೆಹಲಿಯಲ್ಲಿ ಜರಾಸಂಧವಧೆ, ಕರ್ಣಪರ್ವ ಮುಂತಾದ ಪ್ರಸಂಗಗಳನ್ನು ಕಾಲಮಿತಿಯಲ್ಲಿ ಪ್ರದರ್ಶಿಸಿತ್ತು. ಆ ಸಂದರ್ಭದಲ್ಲಿ ಜನರ ಮನಸ್ಸು ಇನ್ನು ಸಮಯಮಿತಿಗೆ ಒಗ್ಗಿಕೊಳ್ಳದ ಸಂದರ್ಭವಾದರೂ, ಸುಮಾರು 75ಕ್ಕೂ ಮಿಕ್ಕಿ ಪ್ರದರ್ಶನ ನಡೆಯಿತು. ಹಾಗೆ ನೋಡಿದರೆ ಜಗತ್ತಿನ ಯಾವ ರಂಗಭೂಮಿಗೊ, ನಾಟ್ಯಪ್ರಕಾರಕ್ಕೋ ʻಕಾಲಮಿತಿʼ ಎಂಬುದು ಒಂದು ಚರ್ಚಿಸಬೇಕಾದ ವಿಷಯವೇ ಅಲ್ಲ ಎನ್ನುವ  ಹಿರಿಯ ಕಲಾವಿದ ಕೆರೆಮನೆ ಶಿವಾನಂದ ಹೆಗಡೆ ಅವರು ಮೇಳವನ್ನು ನಡೆಸುವವರೂ ಹೌದು. ಹಿರಿಯ ಕಲಾವಿದರೂ ಹೌದು. ಅವರು ಬರೆದ ಲೇಖನ ಇಂದಿನ ಓದಿಗಾಗಿ. 

Read More

‘ಸಮಷ್ಟಿ ನೀತಿ’ ಒಪ್ಪುವ ಔಚಿತ್ಯದ ಚರ್ಚೆ

ಯಕ್ಷಗಾನಕ್ಕೆ ಲಕ್ಷಣಗ್ರಂಥವಿಲ್ಲ, ಪ್ರಪಂಚದ ಹಲವು ಪ್ರದರ್ಶನ ಕಲೆಗಳಿಗೂ ಶಾಸ್ತ್ರ ಹೇಳುವ ‘ಪಠ್ಯ’ಗಳಿಲ್ಲ. ನಾಟ್ಯಶಾಸ್ತ್ರ, 11 ನೇ ಶತಮಾನದಲ್ಲಿ ಕ್ಷೇಮೆಂದ್ರ ಬರೆದ ‘ಔಚಿತ್ಯ ವಿಚಾರ ಚರ್ಚಾ’ ಇತ್ಯಾದಿ ಗ್ರಂಥಗಳಿದ್ದರೂ ಆ ಕಾಲದಲ್ಲೇ ಕಲಾಪ್ರಕಾರಗಳು ಅವುಗಳನ್ನು ಎಷ್ಟು ಅನುಸರಿಸುತ್ತಿದ್ದವೊ ಗೊತ್ತಿಲ್ಲ. ಆದರೆ ಪಠ್ಯಗಳು ಒಂದಕ್ಕೊಂದು ಪ್ರತಿಕ್ರಿಯಿಸುತ್ತಾ, ಒಂದನ್ನೊಂದು ವ್ಯಾಖ್ಯಾನಿಸುತ್ತಾ ತಮ್ಮದನ್ನು ಸೇರಿಸುವ ‘ಅಂತರ್ ಪಠ್ಯೀಯತೆ’ಯು ಪಠ್ಯ ಮತ್ತು ಪ್ರಯೋಗಕ್ಕೂ ಅನ್ವಯಿಸುತ್ತದೆ.  ಕೃತಿ ಆರ್. ಪುರಪ್ಪೇಮನೆ ಬರೆಯುವ ‘ಯಕ್ಷಾರ್ಥ  ಚಿಂತಾಮಣಿ’ ಸರಣಿಯಲ್ಲಿ ಯಕ್ಷಗಾನ ಔಚಿತ್ಯದ ಕುರಿತ ಲೇಖನ. 

Read More

ಯಕ್ಷಗಾನ ಪಠ್ಯ: ಕಲೆಗೆ ತೊಡಕುಂಟು ಮಾಡುವ ಪ್ರಮಾದಗಳು

ಕರ್ನಾಟಕದ ಕರಾವಳಿಯುದ್ಧಕ್ಕೂ ಸೊಂಪಾಗಿ ವಿಕಾಸಗೊಂಡಿರುವ ಯಕ್ಷಗಾನ ಕಲೆಯು ಅಪಾರ ವೈವಿಧ್ಯವನ್ನು ಹೊಂದಿದೆ. ಈ ವೈವಿಧ್ಯತೆಯ ಕಾರಣದಿಂದಲೇ, ಅದರ ವ್ಯಾಖ್ಯಾನವನ್ನು ಸರಳವಾಗಿ ಮಾಡುವುದು ಕಷ್ಟವಾಗಿಬಿಟ್ಟಿದೆ. ಆಯಾ ಪ್ರದೇಶಗಳ ಪ್ರಭಾವದೊಂದಿಗೆ ವಿಕಾಸ ಹೊಂದಿರುವ ಈ ಕಲೆಯನ್ನು ಏಕರೂಪವಾಗಿ ನೋಡುವುದು ಸಾಧ್ಯವಾಗುತ್ತಿಲ್ಲ. ಇದೀಗ ಯಕ್ಷಗಾನ ಕಲೆಗೊಂದು ಪಠ್ಯಪುಸ್ತಕ ರಚನೆಯಾಗಿದೆ. ಹಾಗಿದ್ದರೆ ಪಠ್ಯಪುಸ್ತಕವು  ಈ ಬೃಹತ್ ಕಲಾಪ್ರಕಾರವನ್ನು ಸಾಂದ್ರವಾಗಿ ಗ್ರಹಿಸಿದೆಯೇ ಎನ್ನುವ ಪ್ರಶ್ನೆ ಎದುರಾಗಿದೆ. 

Read More

ಜನಮತ

ಸಾಹಿತ್ಯ ಪ್ರಕಾರಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...

Read More

ಬರಹ ಭಂಡಾರ