Advertisement

Tag: Arun Joladakudligi

ಜೀವನ ರೂಪಿಸಿಕೊಳ್ಳುವ ನಿರೀಕ್ಷೆಯಲ್ಲಿ ಕೆಲವು ಮಾತುಗಳು

ಗಂಟಿಚೋರ ಸಮುದಾಯ ಬಹುಶಃ ಹೊಟ್ಟೆಪಾಡಿನ ಕೆಲಸವಾಗಿ ಈ ಭಾಗದಲ್ಲಿ ಸ್ಥಳೀಯವಾಗಿ ಬಾವಿ ತೋಡುವ ಕೆಲಸಕ್ಕೆ ಹೊಂದಿಕೊಂಡಿರಬಹುದು ಅನ್ನಿಸುತ್ತದೆ. ಹಾಗಾಗಿ ಪರ್ಯಾಯ ವೃತ್ತಿಗಳನ್ನು ಕೈಗೊಳ್ಳಲು ಸರಕಾರ ತನ್ನ ಯೋಜನೆಗಳಲ್ಲಿ ಸಹಾಯ ಮಾಡಿದರೆ, ಈ ಸಮುದಾಯ ಈ ಅಪಾಯಕಾರಿ ವೃತ್ತಿಯಿಂದ ಬಿಡುಗಡೆ ಪಡೆಯಲು ಸಾಧ್ಯವಿದೆ. ಅಂತೆಯೇ ಇದೇ ವೃತ್ತಿಯನ್ನು ಸುರಕ್ಷಿತವಾಗಿ ಮುಂದುವರೆಯಲು ಸರಕಾರ ಆಧುನಿಕ ತಾಂತ್ರಿಕ ಸೌಲಭ್ಯವನ್ನು ಪಡೆಯಲು ಸಹಕರಿಸಬಹುದಾಗಿದೆ.
ಡಾ. ಅರುಣ್ ಜೋಳದಕೂಡ್ಲಿಗಿ ಬರೆಯುವ ಗಂಟಿಚೋರರ ಕಥನ ಸರಣಿಯ ಕೊನೆಯ ಕಂತು

Read More

ಬಿಟ್ಟೇನೆಂದರೂ ಬಿಡದ ಹಣೆಪಟ್ಟಿಗಳ ಕಳಚುವುದು ಹೇಗೆ…

ಈ ಹೆಸರಿನಿಂದುಂಟಾಗುವ ಸಾಮಾಜಿಕ ಅಪಮಾನದಿಂದ ದೂರಾಗಲು ಈ ಸಮುದಾಯ ತನ್ನ ಹೆಸರನ್ನು ಹೊಸ ವೃತ್ತಿಗನುಗುಣವಾಗಿ ಗಿರಣಿ ವಡ್ಡರ್ ಮುಂತಾಗಿ ಕರೆದುಕೊಂಡಿದ್ದಾರೆ. ಹೀಗಾಗಿ ಡಿನೋಟಿಫೈಡ್ ಸಮುದಾಯ ಅಪರಾಧಿ ಬುಡಕಟ್ಟು ಎನ್ನುವ ಹಣೆಪಟ್ಟಿ ಕಳಚಿದರೂ ಅಪರಾಧದ ಸಂಕೇತವಾದ `ಗಂಟಿಚೋರ್ಸ್’ ಎನ್ನುವ ಹೆಸರಿನಿಂದಲೇ ಈ ಸಮುದಾಯದ ಜನರು ತಮ್ಮ ಇರವನ್ನು ಗುರುತಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ.
ಡಾ. ಅರುಣ್ ಜೋಳದಕೂಡ್ಲಿಗಿ ಸರಣಿ

Read More

ಗಂಟಿಚೋರರ ಸಾಂಪ್ರದಾಯಿಕ ಶಿಕ್ಷಣ

ಈ ಬಗೆಯ ಸವಾಲು ಸೆಟ್ಲಮೆಂಟಿಗೆ ಬಂದ ಮೇಲೆ ಒಂದು ಹಂತದಲ್ಲಿ ಬದಲಾಯಿತು. ಕಾರಣ ಈ ಸೆಟ್ಲಮೆಂಟುಗಳಲ್ಲಿ ಕ್ರಿಮಿನಲ್ ಟ್ರೈಬ್ಸ್ ಎಂದು ಯಾವುದನ್ನು ಕರೆಯುತ್ತಿದ್ದರೋ ಆ ಸಮುದಾಯಗಳು ಒಟ್ಟಿಗೆ ಬಾಳುವುದಕ್ಕೆ ಆರಂಭಿಸಿದವು. ಅಂತೆಯೇ ಬ್ರಿಟಿಷರ ಕಣ್ಗಾವಲು, ಹಾರುವ ಹಕ್ಕಿಯನ್ನು ಪಂಜರದೊಳಿಟ್ಟಂತಹ ಸ್ಥಿತಿ -ಹೀಗೆ ಏನೆಲ್ಲವು ಸೆಟ್ಲಮೆಂಟಿನಲ್ಲಿದ್ದರೂ ಗ್ರಾಮೀಣ ಭಾಗದಲ್ಲಿದ್ದ ಅವಮಾನದ ಸ್ವರೂಪ ಇಲ್ಲದಾಯಿತು. ಸೆಟ್ಲಮೆಂಟಿನ ಪ್ರತ್ಯೇಕ ಶಾಲೆಗಳಲ್ಲಿ ಈ ಸಮುದಾಯವನ್ನು ಮೌಲ್ಯಮಾಪನ…

Read More

ಕಳ್ಳತನಕ್ಕೆ ಗುಡ್ ಬೈ ಹೇಳಿದ ಗಂಟಿಚೋರರು ಮಾಡಿದ್ದೇನು?

ಆಗ ತುಡುಗು ಮಾಡುವುದು ಅವರ ಆರ್ಥಿಕತೆಯ ಪ್ರಧಾನ ಮೂಲವಾಗಿತ್ತು. ಅಂತೆಯೇ ಹಣ ಬಂಗಾರ ಮಾತ್ರವಲ್ಲದೆ ದಿನಬಳಕೆಯ ವಸ್ತುಗಳನ್ನು ಹೆಚ್ಚು ತುಡುಗು ಮಾಡುತ್ತಿದ್ದರು. ಆ ಸಂದರ್ಭದಲ್ಲಿ ಈ ಸಮುದಾಯವು ಮುಖ್ಯವಾಗಿ ತುಡುಗು ಮಾಡುವ ಉದ್ದೇಶದಲ್ಲಿ ಹೊಟ್ಟೆಪಾಡಿನ ಅನಿವಾರ್ಯತೆ ಇತ್ತು. ಹಾಗಾಗಿ ಹಿಂದೆಯೂ ಕೂಡ ಈ ಸಮುದಾಯದಲ್ಲಿ ತುಡುಗುತನ ಇದ್ದದ್ದು ಹೆಚ್ಚಾಗಿ ಹಸಿವನ್ನು ನೀಗಿಸುವ ವಸ್ತುಸಂಗತಿಗಳಿಗೆ ಸಂಬಂಧಿಸಿದ್ದು ಎನ್ನುವುದನ್ನು ಗಮನಿಸಬೇಕು.
ಡಾ.ಅರುಣ್ ಜೋಳದ ಕೂಡ್ಲಿಗಿ ಬರೆಯುವ ‘ಗಂಟಿಚೋರರ ಕಥನಗಳು’ ಸರಣಿಯ ಹತ್ತನೆಯ ಕಂತು.

Read More

ತುಡುಗುತನಕ್ಕಂಟಿದ ನಂಬಿಕೆಯ ಲೋಕ

ಈ ಕತೆ ಸಿಕ್ಕಿದ್ದು ಬಾಲೆಹೊಸೂರಿನಲ್ಲಿ. ಇದರ ವಿವರಗಳನ್ನು ನೋಡಲಾಗಿ ಈ ಊರಿನಲ್ಲಿಯೇ ‘ದ್ಯಾಮವ್ವ’ ಪೂಜೆಗೊಳ್ಳುತ್ತಾಳೆ. ಹೀಗಾಗಿ ಇಲ್ಲಿನ ತುಡುಗು ಮಂದಿಯೇ ಈ ಕಥೆಯ ನಾಯಕರಿರಬಹುದು. ಇದು ಸೃಷ್ಟಿ ಕತೆಯಲ್ಲ ಆದರೆ ಈಗಾಗಲೇ ಇರುವ ಸಮುದಾಯದ ಪ್ರವೃತ್ತಿಯನ್ನು ಬೆಂಬಲಿಸಿ ಪಾರುಮಾಡುವ ಕತೆಯಾಗಿದೆ. ಅಂತೆಯೇ ಸಮುದಾಯ ದೈವಗಳ ಜತೆ ಹೊಂದಿದ್ದ ಅವಿನಾಬಾವ ಸಂಬಂಧವನ್ನು ಕೂಡ ಸೂಚಿಸುತ್ತದೆ. ಅಂತೆಯೇ ದ್ಯಾಮವ್ವ ತಮ್ಮನ್ನು ಪೊರೆಯುತ್ತಾಳೆ…

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಚಿತ್ರಾಕ್ಷರ: ಕೆ ವಿ ಸುಬ್ರಮಣ್ಯಂ ಕಲೆ ಮತ್ತು ಬರಹಗಳ ಬಿಂಬ

ಯಾವುದೇ ಒಬ್ಬ ಕಲಾವಿದ ಕಲಾಕೃತಿಗಳನ್ನು ತನ್ನ ಸ್ವಂತ ಅಭಿರುಚಿಯಂತೆ ಮಾಡುವುದನ್ನು ಕಲಿಯುವ ಮೊದಲು ನಕಲು ಮಾಡುವುದರಿಂದ ಪ್ರಾರಂಭಿಸುವಂತೆ ಇವರು ಕೂಡ ಮೊದಲು ನಕಲು ಮಾಡಿಯೇ ಪ್ರಾರಂಭಿಸಿದ್ದು. ನೋಡಿದ್ದನ್ನು…

Read More

ಬರಹ ಭಂಡಾರ