Advertisement

Tag: Australia

ಮಳೆಬೆಳೆ, ಸಂತೋಷ, ನೆಮ್ಮದಿಗಳ ಕಣಜ

ಕಳೆದ ಇಡೀ ಬೇಸಿಗೆಯಲ್ಲಿ ನಮ್ಮ ರಾಣಿರಾಜ್ಯದಲ್ಲಿ ಮಳೆ ಎಂಬುದು ಮರೀಚಿಕೆಯಾಗಿತ್ತು. ಬೇಸಿಗೆ ಬರುವುದಕ್ಕೂ ಮುನ್ನ ಸರ್ಕಾರವು ಬರಲಿರುವ ಚಂಡಮಾರುತಗಳ ಬಗ್ಗೆ, ಮಳೆಪ್ರವಾಹಗಳ ಬಗ್ಗೆ ಅದೇನೆಲ್ಲಾ ಎಚ್ಚರಿಕೆ ಕೊಟ್ಟಿತ್ತು ಎಂದರೆ ದೂರಪ್ರವಾಸಕ್ಕೇನಾದರೂ ಹೋದರೆ ಮನೆಕಡೆ ಪರಿಸ್ಥಿತಿ ಏನಪ್ಪಾ ಎಂದೆಲ್ಲ ಚಿಂತೆಯಾಗಿತ್ತು. ಹಾಗೇನೂ ಆಗದೆ ಕಡೆಗೆ ನೆಟ್ಟಗೊಂದು ಸರಿಯಾದ ಮಳೆಯೂ ಬೀಳದೆ, ಬೇರೊಂದು ತರಹದ ಚಿಂತೆಯಾಗಿತ್ತು. ಬಿಸಿಲು ಹೆಚ್ಚಾಗಿ, ಮಳೆನೀರು ಕೊಯ್ಲಿನ ಟ್ಯಾಂಕ್ ಪೂರಾ ಖಾಲಿಯಾಗಿ, ಏನೊಂದೂ ತರಕಾರಿ ಬೆಳೆಯಲಿಲ್ಲ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ಅಂಕಣ

Read More

‘ಇಂಡೀಜಿನಸ್ ವಾಯ್ಸ್’ – ಸಮತೆಯತ್ತ ಆಸ್ಟ್ರೇಲಿಯಾ

ದೇಶದ ಮೂಲಜನರಿಗೆ ಸಂಬಂಧಿಸಿದ್ದರೂ 55 ವರ್ಷಗಳ ನಂತರ ಪ್ರತಿಯೊಬ್ಬ ಆಸ್ಟ್ರೇಲಿಯನ್ ವಯಸ್ಕ ಪ್ರಜೆಯೂ ಕಡ್ಡಾಯವಾಗಿ ಮತ ಚಲಾಯಿಸಬೇಕಾದ, ದೇಶದ ಸಂವಿಧಾನಕ್ಕೆ ತಿದ್ದುಪಡಿ ತರಲು ಕೇಳಬೇಕಿದ್ದ ಅತ್ಯಂತ ಮುಖ್ಯವಾದ ಪ್ರಶ್ನೆಯನ್ನು ಅವರು ಅಧಿಕೃತವಾಗಿ ಬಿಡುಗಡೆ ಮಾಡುವವರಿದ್ದರು. ತಮ್ಮ ಬಿಳಿಯ ಜನರಿಗೆ ಸಾರಾಸಾಗಾಟಾಗಿ, ಯಾವುದೇ ಅಡ್ಡಿಗಳಿಲ್ಲದೆ ‘ಸ್ವಾಭಾವಿಕವಾಗಿ’ ಲಭ್ಯವಿರುವ ಸ್ವಯಂ-ನಿರ್ಣಯದ ಹಕ್ಕು ಇದೇ ದೇಶದ ಮೂಲಜನರಿಗೆ ಇಲ್ಲವಾಗಿರುವುದನ್ನು ಅವರು ಎತ್ತಿ ಹಿಡಿದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಬನ್ಯಾ ಮರ ಹಬ್ಬ ಮತ್ತು ಬನ್ಯಾ ಡ್ರೀಮಿಂಗ್

ಅಬೊರಿಜಿನಲ್ ಜನರ ಜೀವನದಲ್ಲಿ ಡ್ರೀಮಿಂಗ್ ಸ್ಟೋರೀಸ್ ಎನ್ನುವುದು ಅವಿಭಾಜ್ಯ ಅಂಗವಾಗಿದೆ. ಭಾರತೀಯ ಹಿಂದೂ ಧರ್ಮದಲ್ಲಿ ದೇವರುಗಳು ಮತ್ತು ಅನೇಕಾನೇಕ ಪುರಾಣಗಳು ಹಾಸುಹೊಕ್ಕಾಗಿರುವಂತೆ. ಅಬೊರಿಜಿನಲ್ ಜೀವನದಲ್ಲಿ ಪ್ರತಿಯೊಂದನ್ನೂ ಸ್ಪಿರಿಟ್‌ಗಳು, ಅವುಗಳು ಎಲ್ಲ ಬಗೆಯ ಜೀವಜಾಲದೊಂದಿಗೆ ಹೊಂದಿರುವ ಸಂಬಂಧವು ಎಲ್ಲರ ಜೀವನದ ಆಗುಹೋಗುಗಳನ್ನು ನಿರ್ದೇಶಿಸುತ್ತವೆ.
ಡಾ. ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಆಸ್ಟ್ರೇಲಿಯಾದ ‘ಬಿಗ್ ಥಿಂಗ್ಸ್’ ಆಕರ್ಷಣೆಗಳು

ಏನಿದು ‘ಬಿಗ್ ಥಿಂಗ್ಸ್’ ಎಂದು ಮೊದಲ ಬಾರಿ ಕೇಳಿದಾಗ ನನ್ನ ಆಸ್ಟ್ರೇಲಿಯನ್ ಸ್ನೇಹಿತೆಯ ಗಂಡ ಬಲು ಸೊಗಸಾಗಿ ವಿವರಿಸಿದ್ದರು. ಒಂದೂರಿನ ಜನರು ಸೇರಿ ತಮಗೆ ಆಪ್ತವೆನಿಸಿದ ಹಣ್ಣು, ಆಹಾರ, ಪ್ರಾಣಿ, ಪಕ್ಷಿ, ಮರ ಇತ್ಯಾದಿಗಳಲ್ಲಿ ಒಂದನ್ನು ಆರಿಸಿಕೊಂಡು ಅದನ್ನು ದೊಡ್ಡ ಗಾತ್ರದ ಶಿಲ್ಪ ಕೃತಿಯಾಗೋ, ಲೋಹ ಕಲಾ ಕೃತಿಯಾಗಿಯೋ ನಿರ್ಮಿಸಿ ಹೆಮ್ಮೆಯಿಂದ ಆ ಪ್ರತಿಮೆಯನ್ನು ತಮ್ಮೂರಲ್ಲಿ ಸ್ಥಾಪಿಸುವುದು. ಕ್ರಮೇಣ ಅದಕ್ಕೆ ಪ್ರಚಾರ ಕೊಟ್ಟು ಅದನ್ನು ದೇಶದ ‘ಬಿಗ್ ಥಿಂಗ್ಸ್’ ಪಟ್ಟಿಗೆ ಸೇರುವಂತೆ ಮಾಡುವುದು. ಇದರಿಂದ ಆ ಊರಿಗೆ ಅದೇನೋ ವಿಶೇಷ ಗುರುತು ಸಿಕ್ಕಿದಂತಾಗುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಆಸ್ಟ್ರೇಲಿಯನ್ ಕ್ಯಾಂಪಿಂಗ್ ಕಥಾನಕಗಳು – ಭಾಗ ಎರಡು

ಹಾಗೆಂದು ನಮ್ಮೆಲ್ಲಾ ಅನುಭವಗಳು ಆನಂದತುಲಿತಮಯ, ಅದ್ಭುತರಮ್ಯ, ಲೋಕಾತೀತವಾದವೇನಲ್ಲ. ಹೆಚ್ಚಿನ ಬಾರಿ ಖುಷಿಖುಷಿಯಿಂದ ಕೂಡಿದ್ದರೂ, ಒಮ್ಮೊಮ್ಮೆ ಗೊಳೋ ಎಂದು ಅತ್ತಿರುವುದೂ ನಿಜ. ಇಂತಹ ಕ್ಯಾಂಪಿಂಗ್ ಸಾಹಸಗಳಲ್ಲಿ ಕೆಲವು ಬಾರಿ ಅಪರಿಚಿತ ದೇಶಗಳಲ್ಲಿ, ಸ್ಥಳಗಳಲ್ಲಿ ಪರಿಸ್ಥಿತಿ ಕೈಕೊಟ್ಟು ಕ್ಯಾಂಪಿಂಗ್ ಪಟು ಜೀಬೀ ಪೇಚಿಗೆ ಸಿಲುಕಿ, ನಾನು ನಮ್ಮ ಮಕ್ಕಳ ಮೈದಡವುತ್ತಾ ಕಂಗಾಲಾಗಿ ಕಣ್ಣೀರಿಟ್ಟಿದ್ದೂ ನಿಜ. ಆದರೂವೆ… ಧೈರ್ಯಗೆಡದೆ ಜರ್ಮನ್ ಪೊಲೀಸರಿಗೆ ಇಂಗ್ಲೀಷಿನಲ್ಲಿ ಉತ್ತರಿಸಿದ್ದಿದೆ.
ಡಾ. ವಿನತೆ ಶರ್ಮ ಬರೆಯವ “ಆಸ್ಟ್ರೇಲಿಯಾ ಪತ್ರ”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ