Advertisement

Tag: Autobiography

ಕತ್ತಲಲಿ ಕಂಡ ಮಿನುಗುವ ಕಣ್ಣುಗಳು….

ಆ ಹಾಳು ಗುಡಿಯ ಮುಂದೆ ಹೋದೆವು. ಒಬ್ಬರೂ ಕಾಣಲಿಲ್ಲ. ಅಷ್ಟೊತ್ತಿಗೆ ಒಳಗಿನಿಂದ ಒಬ್ಬ ಯುವಕ ಬಂದ. ದೇವಾಲಯದೊಳಗೆ ಸಂಪೂರ್ಣ ಕತ್ತಲು ಕವಿದಿತ್ತು. ಇದೇನು ಹೀಗೆ ಎಂದಾಗ, ಆತ ‘ಇರುವುದೊಂದೇ ಮೋಂಬತ್ತಿ ನಿಮ್ಮ ಬರುವಿಗೆ ಕಾಯುತ್ತಿದ್ದೆವು’ ಎಂದ. ಒಳಗೆ ಕಾಲಿಟ್ಟಕೂಡಲೆ ಆತ ಮೋಂಬತ್ತಿ ಹಚ್ಚಿದ. ಅಲ್ಲಿ ಕುರ್ಚಿ ಟೇಬಲ್ ಏನೂ ಇರಲಿಲ್ಲ. ಆ ಮೋಂಬತ್ತಿಯ ಬೆಳಕಲ್ಲಿ ನೂರಾರು ಯುವಕರು ಕುಳಿತಿದ್ದು ಮಸುಕು ಮಸುಕಾಗಿ ಕಾಣುತ್ತಿತ್ತು. ಅವರ ಕಣ್ಣುಗಳು ಮಾತ್ರ ನಕ್ಷತ್ರಗಳ ಹಾಗೆ ಹೊಳೆಯುತ್ತಿದ್ದವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 64ನೇ ಕಂತು ನಿಮ್ಮ ಓದಿಗೆ

Read More

ಸೀರೆಯ ಸೆರಗಿನಲ್ಲಿ ಅನ್ನ-ಸಾರು….!

ಹೊಸಪೇಟೆಯ ಬಡತನ ನನ್ನನ್ನು ದಿಗಿಲು ಬಡಿಸಿತು. ಬೆಳಗಿನ ನಾಷ್ಟಾ ಮತ್ತು ಮಧ್ಯಾಹ್ನದ ಊಟದ ವೇಳೆ, ತಂತಿಬೇಲಿಯ ಆಚೆ ಬಡವರು ಅನ್ನಕ್ಕಾಗಿ ಕಾಯುತ್ತಿದ್ದರು. ನಮಗೆ ಇಲ್ಲಿ ಬೇಕಾದಷ್ಟು ಆಹಾರ ನೀಡುತ್ತಿದ್ದರು. ನನ್ನ ಕೆಲವರು ಗೆಳೆಯರಿಗೆ ಆ ನಿರ್ಗತಿಕರ ಬಗ್ಗೆ ತಿಳಿಸಿ ಒಂದು ಯೋಜನೆ ರೂಪಿಸಿದೆ. ನಾವೆಲ್ಲ ಹೆಚ್ಚಿಗೆ ಅನ್ನ ಹಾಕಿಸಿಕೊಳ್ಳುವುದು. ಸ್ವಲ್ಪ ತಿಂದ ಹಾಗೆ ಮಾಡಿ ಅವರ ಬಳಿ ಹೋಗುವುದು. ಆ ಬಡ ಹೆಣ್ಣುಮಕ್ಕಳು ಸೆರಗೊಡ್ಡುವುದು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 62ನೇ ಕಂತು ನಿಮ್ಮ ಓದಿಗೆ.

Read More

ವಿದ್ಯಾರ್ಥಿಗಳ ಓದಿಗೆ ಆಸರೆಯಾಗುತ್ತಿದ್ದ ಮಹಲುಗಳು…

ನಾನಿದ್ದಲ್ಲಿಂದ ಅಲ್ಲಿಗೆ ಹೋಗಲು 10 ನಿಮಿಷ ಬೇಕಿತ್ತು. ಅಲ್ಲಿಗೇ ಹೊರಟೆ. ‘ಮನೆಯಲ್ಲಿ ಎಲ್ಲರೂ ಕೂಡಿ ತಿನ್ನುವುದು ಒಳ್ಳೆಯದು’ ಎಂದು ಒಳತೋಟಿ ಹೇಳುತ್ತಿತ್ತು. ಆದರೆ ನಾನು ಕೇಳುವ ಪರಿಸ್ಥಿತಿಯಲ್ಲಿರಲಿಲ್ಲ. ಹೋಗಿ ಒಂದು ಕಡೆ ಹುಲ್ಲುಹಾಸಿನ ಮೇಲೆ ಕುಳಿತು ಸ್ವಲ್ಪ ತಿನ್ನುವುದರೊಳಗಾಗಿ ಗಾರ್ಡ್ ಬಂದು ‘ಎಂಟು ಗಂಟೆ ಆಗಿದೆ’ ಎಂದು ಸೀಟಿ ಹೊಡೆದು ಎಚ್ಚರಿಸಿ ಹೊರಗೆ ಹೋಗಲು ಸೂಚಿಸಿದ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಹಸಿವು ಇಂಗಿಸುವ ಬಿಸ್ಕಿಟ್‌ ವಾಸನೆ….

ಆ ಸಭೆಯಲ್ಲಿ ಭಾಗವಹಿಸಿದ್ದ ಉಗ್ರಗಾಮಿಗಳ ನಾಯಕ 35 ವರ್ಷದವನಿರಬಹುದು. ಆತ ತನ್ನ ಹೆಂಡತಿ ಮತ್ತು ಮಗುವಿನ ಜೊತೆ ಬಂದಿದ್ದ. ಸಭಿಕರ ಮಧ್ಯದಿಂದ ಆತ ಉಗ್ರಗಾಮಿಗಳ ಪ್ರತಿನಿಧಿಯಾಗಿ ಕಾಶ್ಮೀರ ಸಮಸ್ಯೆ ಕುರಿತು ಮಾತನಾಡಿದ. ಕಾಶ್ಮೀರದಲ್ಲಿ ಎನ್‌ಕೌಂಟರಲ್ಲಿ ಸತ್ತ ಸುಮಾರು 60 ಸಾವಿರ ಯುವಕರ ಹೆಸರು, ವಯಸ್ಸು ಮುಂತಾದ ವಿವರಗಳುಳ್ಳ ಕಂಪ್ಯೂಟರ್ ಲಿಸ್ಟ್ ತಂದಿದ್ದ. ಅದರ ಜೊತೆಗಿದ್ದ ಇನ್ನೊಂದು ಲಿಸ್ಟಲ್ಲಿ ಅತ್ಯಾಚಾರಕ್ಕೊಳಗಾದ 65 ಸಾವಿರ ಕಾಶ್ಮೀರ ಯುವತಿಯರ ಹೆಸರು ಮುಂತಾದ ವಿವರಗಳಿರುವುದಾಗಿ ತಿಳಿಸಿದ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಕಾಡ ತೊರೆಯ ಜಾಡು “ಕಡಿದಾಳು ಶಾಮಣ್ಣ”

ಮನಸ್ಸು ಮಾಡಿದ್ದರೆ ಅಥವಾ ಹಣಸಂಪಾದನೆಯ ಮಾರ್ಗ ಹಿಡಿದದ್ದರೆ ದೊಡ್ಡ ಶ್ರೀಮಂತರಾಗಬಹುದಿತ್ತು. ಅವರು ಒಂದು ಕಾಲದಲ್ಲಿ ಸ್ಥಾಪಿಸಿದ್ದ ಪ್ರೆಸ್ಸಿನ ಮೂಲಕವೋ ಇಲ್ಲಾ ಕೃಷಿಯ ಮೂಲಕವೋ ಧಾರಾಳ ಹಣಗಳಿಕೆ ಮಾಡಬಹುದಾಗಿತ್ತು. ಅಥವಾ ಸಂಗೀತದಲ್ಲಿ ಮುಂದುವರೆದಿದ್ದರೆ ಸರೋದ್‌ನಲ್ಲಿ ಅಂತಾರಾಷ್ಟ್ರೀಯ ಖ್ಯಾತಿ ಗಳಿಸಬಹುದಾಗಿತ್ತು. ಹೋರಾಟದ ಹಾದಿಯಲ್ಲಿ ನಡೆಯುತ್ತಿರುವಾಗ ತಾನಾಗಿಯೇ ಬಂದ ಅವಕಾಶವನ್ನು ನಿರಾಕರಣೆ ಮಾಡದಿದ್ದರೆ ಶಾಸಕರಾಗಬಹುದಾಗಿತ್ತು ಅಥವಾ ಕಾಲೇಜು ಉಪನ್ಯಾಸಕರಾಗಬಹುದಾಗಿತ್ತು. ಆದರೆ ಅದ್ಯಾವುದೂ ಆಗದೇ ಸಾಮಾನ್ಯ ರೈತನ ಜೀವನ ನಡೆಸಿದರು.
ಗಿರಿಧರ್‌ ಗುಂಜಗೋಡು ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ