Advertisement

Tag: Autobiography

ನಾಲ್ಕಾಣೆಯಿಂದ ಒಂದು ಪ್ರಾಣ ಉಳಿಯಿತು!

ಆಕೆ ಅಗಸಿಯ ಕಡೆಗೆ ಹೋಗುತ್ತಿರುವುದರಿಂದ ಏನಾಗಿದೆ ಎಂದು ಕೇಳಿಯೆಬಿಟ್ಟೆ. ಅಡುಗೆಯಲ್ಲಿ ಉಪ್ಪಿಲ್ಲವೆಂದು ಗಂಡ ಹೊಡೆದಿರುವುದಾಗಿ ತಿಳಿಸಿದಳು. ‘ಆತ ಹಣ ಕೊಡದಿದ್ದರೆ ಉಪ್ಪು ಎಲ್ಲಿಂದ ತರಲಿ’ ಎಂದು ಕೇಳಿದಳು. ಈ ರೀತಿ ಬದುಕುವುದಕ್ಕಿಂತ ಸಾಯುವುದೇ ಮೇಲು ಎಂದು ಬಾವಿಗೆ ಹಾರುವುದಾಗಿ ಹೊರಟೇಬಿಟ್ಟಳು. ಮತ್ತೆ ತಡೆದೆ. ಬಿಗಿ ಮುಷ್ಟಿಯಲ್ಲಿದ್ದ ನಾಲ್ಕಾಣೆಯನ್ನು ತೋರಿಸುತ್ತ ‘ಇದನ್ನು ಕೊಟ್ಟರೆ ವಾಪಸ್ ಹೋಗುವೆಯಾ’ ಎಂದು ಕೇಳಿದೆ. ಆಕೆ ಕೃತಜ್ಞತೆಯಿಂದ ತೆಗೆದುಕೊಂಡು ಮನೆಯ ದಾರಿ ಹಿಡಿದಳು. ಆ ನಾಲ್ಕಾಣೆಯನ್ನು ಖರ್ಚು ಮಾಡಿದೆನೆಂದು ಭಾವಿಸಿ ತಾಯಿ ಬಡಿದದ್ದು ನೋವೆನಿಸಲಿಲ್ಲ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 58ನೇ ಕಂತು ನಿಮ್ಮ ಓದಿಗೆ.

Read More

ಮೆಳ್ಳಿಗೇರಿ ಸರ್‌ ಸಲುವಾಗಿ ಶಾಲೆಯನ್ನೇ ಬದಲಾಯಿಸಿದ್ದೆ!

ವಿದ್ಯಾರ್ಥಿಗಳನ್ನು ನಾಲ್ಕು ಗುಂಪಾಗಿ ವಿಂಗಡಿಸಿ ಪ್ರತಿ ಗುಂಪಿಗೆ ಒಬ್ಬೊಬ್ಬ ಗಣಿತ ಪರಿಣತ ವಿದ್ಯಾರ್ಥಿಯನ್ನು ನಾಯಕನನ್ನಾಗಿ ಮಾಡಿದ್ದರು. ನನಗೆ ಒಂದು ಗುಂಪಿನ ಜಬಾಬ್ದಾರಿ ಕೊಟ್ಟಿದ್ದರು. ದೊಡ್ಡದಾಗಿರುವ ಮನೆಯ ಸಹಪಾಠಿಗಳ ಕೋಣೆಯೊಂದರಲ್ಲಿ ರಾತ್ರಿ ಕುಳಿತು ಗಣಿತ ಬಿಡಿಸುತ್ತಿದ್ದೆವು. ಅಲ್ಲೇ ಮಲಗಿ ಬೆಳಿಗ್ಗೆ ಮನೆಗೆ ಹೋಗುತ್ತಿದ್ದೆವು. ಹೀಗೆ ಸಹಪಾಠಿಗಳ ಮನೆಗೆ ಹೋಗಿ ಪಾಠ ಹೇಳುವುದನ್ನು ಮೊದಲಿನಿಂದಲೂ ಮಾಡುತ್ತಿದ್ದೆ. ಶ್ರೀಮಂತ ಹುಡುಗರ ತಾಯಂದಿರು ಬಡ ಹುಡುಗನ ತಾಯಿಯ ಮನೆಗೆ ಬಂದು “ಇವತ್ತು ನಿಮ್ಮ ಮಗನನ್ನು ನಮ್ಮ ಮನೆಗೆ ಕಳಿಸಿರಿ” ಎಂದು ಕೇಳುವುದು ನನಗೆ ಖುಷಿ ಕೊಡುತ್ತಿತ್ತು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಲೆನಿನ್‌ಗ್ರಾಡ್‌ನಲ್ಲಿ ತಿರುಗಾಡಿದ ನೆನಪುಗಳು…

ಗಲೀನಾ ಹೇಳಿದ ಮೊದಲ ಪ್ರಸಂಗವೆಂದರೆ ತಾಯಿಯೊಬ್ಬಳು ತನ್ನ ಕೂಸನ್ನು ನೀರಲ್ಲಿ ಮುಳುಗಿಸಿದ ಹೃದಯವಿದ್ರಾವಕ ಘಟನೆ. ಹಿಟ್ಲರನ ಸೈನ್ಯ ಸೋವಿಯತ್ ದೇಶದ ಹಳ್ಳಿಯೊಂದನ್ನು ಸುತ್ತುವರಿದಿತ್ತು. ರಾತ್ರಿಯ ಗಾಢಾಂಧಕಾರ ಕಳೆದ ಕೂಡಲೆ ಆ ದಟ್ಟ ಅರಣ್ಯದ ಮಧ್ಯದಲ್ಲಿನ ಹಳ್ಳಿಯ ಮೇಲೆ ಬೆಳಗಿನ ಜಾವ ದಾಳಿ ಮಾಡುವ ಯೋಜನೆಯನ್ನು ಹಿಟ್ಲರನ ಸೈನ್ಯ ರೂಪಿಸಿತ್ತು. ಈ ಸುದ್ದಿ ಗೊತ್ತಾಗಿದ್ದರಿಂದ ಆ ಹಳ್ಳಿಗರು ರಾತ್ರಿಯೆ ಹಳ್ಳಿಯನ್ನು ಬಿಟ್ಟು ಬೇರೆಕಡೆ ಹೋಗಬೇಕಿತ್ತು. ರಂಜಾನ್‌ ದರ್ಗಾ ಬರೆಯುವ ಆತ್ಮಕತೆಯ ಸರಣಿ

Read More

ನಿಜಾರ್ಥದಲ್ಲಿ ಯಾರಿಗೂ ಗೆಲುವಿಲ್ಲ ಯುದ್ಧದಲ್ಲಿ…

ಮಾಸ್ಕೋ ಸಮೀಪದ ಬೊರೊದಿನೊ ಎಂಬ ಗ್ರಾಮದಲ್ಲಿ ನೆಪೊಲಿಯನ್ ಬೊನಾಪಾರ್ಟೆ ಸೈನ್ಯದ ವಿರುದ್ಧ ನಡೆದ ಯುದ್ಧದಿಂದ ಆ ಗ್ರಾಮ ಹೇಗೆ ನಾಶವಾಯಿತು ಎಂಬುದನ್ನು ರಷ್ಯನ್ ಪನೋರಮಾದಲ್ಲಿ ಅದ್ಭುತವಾಗಿ ಕಣ್ಣಿಗೆ ಕಟ್ಟುವಂತೆ ಸೃಷ್ಟಿಸಲಾಗಿದೆ. ದಾಳಿಗೊಳಗಾಗಿ ಸಾಯುತ್ತಿರುವ ಸೈನಿಕರು, ಬಿದ್ದು ಒದ್ದಾಡುತ್ತಿರುವ ಯುದ್ಧ ಕುದುರೆಗಳು, ಸುಡುತ್ತಿರುವ ಮನೆಗಳು, ಸುಟ್ಟು ಹೊಗೆಯಾಡುತ್ತಿರುವ ಪ್ರದೇಶಗಳು, ಹಾಹಾಕಾರದ ವಾತಾವರಣ ಹೀಗೆ ಎಲ್ಲವೂ ನಮ್ಮ ಮುಂದೆ ನಡೆಯುತ್ತಿರುವ ಹಾಗೆ ಅನಿಸುತ್ತದೆ. ನೆಪೊಲಿಯನ್ ಬೋನಾಪಾರ್ಟೆ ವಿನಾಶಕಾರಿ ಯುದ್ಧನೃತ್ಯ ಮಾಡುತ್ತಿರುವ ಹಾಗೆ ಅನಿಸುತ್ತದೆ. ರಂಜಾನ್‌ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿ

Read More

ಅವನಿಗೆ ಒಂದು ಹಿಡಿ ಮಣ್ಣನ್ನೂ ಕೊಡಲಿಲ್ಲ.

ಆ ಮನೆಯ ಅಂಗಳದಲ್ಲಿ ಎಷ್ಟೊಂದು ದೊರೆಯಂತೆ ಮೆರೆದಿದ್ದವನು… ಎಷ್ಟು ಬಡಿದಾಡಿ ರಕ್ತ ಹರಿಸಿದ್ದವನು. ಈಗ ಅದೇ ಅಂಗಳವ ಹಾದು ಹೋಗುವ ಹಾದಿ ಹೋಕರತ್ತ ಕ್ಷೀಣ ದನಿ ಹೊರಡಿಸಿ ಕೈ ಒಡ್ಡಿ ತಿನ್ನಲು ಏನಾದರೂ ಕೊಡಿ ಎಂದು ಬೇಡುತ್ತಿದ್ದ. ಕೊಡುವವರು ಕೊಡುತ್ತಿದ್ದರು. ಅವನ ಮೂರನೇ ಹೆಂಡತಿ ಮೈಸೂರು ಸೇರಿದ್ದವಳು ತನ್ನ ಮಗಳ ಸಮೇತ ನಾಪತ್ತೆ ಆದವಳು ಮತ್ತೆ ಎಲ್ಲೂ ಕಂಡಿರಲಿಲ್ಲ. ಶಾಂತಿ ಮಾತ್ರ ಬಚಾವಾಗಿ ಗಂಡನ ಮನೆಯಲ್ಲಿ ಅನುಕೂಲವಾಗಿ ಇದ್ದಳು.
ಮೊಗಳ್ಳಿ ಗಣೇಶ್‌ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆ ಸರಣಿಯ 39ನೇ ಕಂತು

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ