ವಿಜಾಪುರ ನಗರಿಯ ರಂಗು, ವಿಸ್ಮಯಗಳು
ವಿಜಾಪುರಕ್ಕೆ ಬಂದಮೇಲೆ ಬಹಳ ದಿನಗಳ ನಂತರ ನಾವು ಟಾಂಗಾದಲ್ಲಿ ಜೋಡಗುಂಬಜ ದರ್ಗಾಕ್ಕೆ ಹೋಗಿ ವಾಪಸ್ ಮನೆಯ ಸಮೀಪ ಬರುತ್ತಿರುವಾಗ ಅಲ್ಲೀಬಾದಿಯಲ್ಲಿ ನಾವು ಸಾಕಿದ ನಾಯಿ ಕಂಡಿತು. ಕಂಡೊಡನೆ ಅದು ಟಾಂಗಾದ ಬೆನ್ನು ಹತ್ತಿತು. ಅದರ ಅವಸ್ಥೆ ನೋಡಿ ನನ್ನ ಕರುಳು ಕಿತ್ತುಬಂದಂತಾಯಿತು. ನಾನು ಮುಟ್ಟುವ ಸ್ಥಿತಿಯಲ್ಲಿ ಅದು ಇರಲಿಲ್ಲ. ಆ ತೆಳ್ಳನೆಯ ಬಿಳಿ ನಾಯಿಯ ಮೈತುಂಬ ಚಿಕ್ಕ ಚಿಕ್ಕ ಹುಣ್ಣುಗಳಾಗಿ ರಕ್ತದ ಬಿಂದುಗಳಂತೆ ಕಾಣುತ್ತಿದ್ದವು. ಅದು ಬಹಳ ಆಯಾಸಗೊಂಡಿತ್ತು. ಆದರೆ ಟಾಂಗಾದ ಬೆನ್ನು ಬಿಡಲಿಲ್ಲ. ಮನೆ ಬಂದಿತು.
ರಂಜಾನ್ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿಯ ಒಂಭತ್ತನೆಯ ಕಂತು.