ಚಂಬಲ್‌ನ ಡಕಾಯಿತರು ಕಾಪಾಡಿದ ವಿಗ್ರಹಗಳು

ನಮ್ಮ ದೇಶವನ್ನು ನೋಡಲು ಸರಿಯಾಗಿ ಒಂದು ಜನ್ಮ ಸಾಕಾಗಲ್ಲ. ಅಲೆದಾಡಲು ಇನ್ನೂ ಅದೆಷ್ಟು ಜನ್ಮಗಳು ಬೇಕೋ. ಅದರಲ್ಲೂ ಈ ಮಧ್ಯಪ್ರದೇಶ ರಾಜ್ಯವನ್ನು ನೋಡಲು ಅರ್ಧ ಜನ್ಮವೇ ಬೇಕೇನೋ. ಪ್ರಸ್ತುತ ನಾನು ಗ್ವಾಲಿಯರ್‌ನಿಂದ ೨೫ ಕಿ. ಮೀ ದೂರದಲ್ಲಿರುವ ಮೊರೇನಾ ಅನ್ನೋ ಜಿಲ್ಲೆಗೆ ಸೇರಿದ ಬಟೇಶ್ವರ ಗುಡಿಗಳು ಜೀವ ತಳೆದ ಕಥೆಯ ಬಗ್ಗೆ ಹೇಳಬೇಕು.  ಇವು ೮ ರಿಂದ ೧೦ ನೇ ಶತಮಾನದಲ್ಲಿ ನಿರ್ಮಾಣ ಆಗಿರಬಹುದು ಎನ್ನುತ್ತಾರೆ ಪುರಾತತ್ವಜ್ಞರು. ಆದರೆ ಇದು ಬೆಳಕಿಗೆ ಬಂದಿದ್ದು ೨೦೦೫ ರಿಂದ ಈಚೆಗೆ. ಅಲ್ಲೀ ತನಕ ಏನಾಗಿತ್ತು? ಯಾಕೆ ಯಾರೂ ಇಲ್ಲಿರುವ ವಿಗ್ರಹಗಳನ್ನು ಕಳುವು ಮಾಡಲಿಲ್ಲ? ಅವುಗಳನ್ನು ಚಂಬಲ್‌ ನ ಡಕಾಯಿತರು  ಪರೋಕ್ಷವಾಗಿ ಕಾಯುತ್ತಿದ್ದರು ಎಂದು ಬರೆಯುತ್ತಾರೆ ಗಿರಿಜಾ ರೈಕ್ವ.  ದೇವಸನ್ನಿಧಿ ಅಂಕಣದಲ್ಲಿ ಅವರ ಹೊಸ ಬರಹ ಇಲ್ಲಿದೆ.

Read More