ನೇತ್ರಾವತಿಯಲ್ಲಿ ಹರಿದು ಹೋದ ನೀರೆಷ್ಟೋ…

ಏನೇನೋ ಚಿಂತಿಸುತ್ತ ಇದಿನಬ್ಬ ಕುಳಿತಿದ್ದಾನೆ; ಅಷ್ಟರಲ್ಲೇ ದೂರದಲ್ಲಿ ಒಂದು ಸಣ್ಣ ತಂಡ ನಡೆದು ಬರುತ್ತಿದೆ. ಇದಿನಬ್ಬನಿಗೆ ಮತ್ತೆ ಬದುಕುವ ಆಸೆ ಚಿಗುರಿತು, ಅಪರಿಚಿತರಾದರೇನು? ಮನುಷ್ಯರನ್ನು ಕಂಡೆನಲ್ಲಾ ಅನ್ನುವ ಖುಷಿ. ಹತ್ತಿರವಾದಂತೆ ಮುಖ ಚಹರೆ ಸ್ಪಷ್ಟವಾಗತೊಡಗಿತು. ಹೌದು, ಯೂಸುಫ್ ಮತ್ತು ಇತರ ಸಹ ಯಾತ್ರಿಕರು. ದೂರದಲ್ಲಿ ಬಂದವರಿಗೂ ಪರಿಚಯ ಸಿಕ್ಕಿರಬೇಕು. ಎಲ್ಲರೂ ಇದಿನಬ್ಬರ ಕಡೆಗೆ ಓಡಿ ಬಂದರು.  ಉಳಿದವರು ಎಲ್ಲಿ ಹೋದರೋ ಗೊತ್ತಾಗಲಿಲ್ಲ.”

Read More