ದೊಡ್ಡವರಿಗೂ ಸಲ್ಲುವ ಮಕ್ಕಳ ಕಥೆಗಳು

“ಒಂದರ್ಥದಲ್ಲಿ ಪಲ್ಲವಿಯವರು ಹೇಳುವಂತೆ ಭೂಮ್ತಾಯಿಯ ಒಡಲೆಲ್ಲ ಬರಿದಾಗಿ ನಿಜವಾಗಿಯೂ ರೋಗ ಪೀಡಿತ ಅಜ್ಜಿಯೇ ಆಗಿದ್ದಾಳೆ! ಅಂದರೆ, ಮನುಷ್ಯನ ದುರಾಶೆಯ ದೆಸೆಯಿಂದಾಗಿ ಭೂಮಿಯ ಅಂತ್ಯದ ದಿನಗಳು ಸನ್ನಿಹಿತವಾದವೆ ಎಂಬ ಆತಂಕ ಉಂಟಾಗುತ್ತದೆ! ಹೀಗೆ, ಈ ಕಥೆ ಮಕ್ಕಳಿಗೆ ಪರಿಸರ ಸಂರಕ್ಷಣೆಯನ್ನು ಮಾಡದೇ ಹೋದರೆ ಮುಂದಿನ ದಿನಗಳಲ್ಲಿ ಮನುಕುಲಕ್ಕೆ ಖಂಡಿತವಾಗಿಯೂ ಉಳಿಗಾಲವಿಲ್ಲ ಎಂಬ ಎಚ್ಚರಿಕೆಯ ಸಂದೇಶವನ್ನು ನೀಡುತ್ತದೆ. ಹಾಗೆಯೇ, ದೃಷ್ಟಾಂತವೊಂದರ ಮೂಲಕ ತೆರೆದುಕೊಳ್ಳುವ ‘ಎಂದೂ ಮುಗಿಯದ ಕಥೆ’ ಎಂಬ ಕಥೆ, ಮಕ್ಕಳ ಕಲ್ಪನೆಯ ಕ್ಷಿತಿಜವನ್ನು ವಿಸ್ತರಿಸುವ ನಿಟ್ಟಿನಲ್ಲಿದೆ.”

Read More