ಬಲಿಪ ಗಾನಮೀಮಾಂಸೆ

ಯಕ್ಷಗಾನ ಪದಗಳ ಛಂದೋವೈವಿಧ್ಯವನ್ನು ಕಂಡಾಗ ಮತ್ತು ಅದರಂತೆ ಹಾಡಿದಾಗ ವಾದಕನಲ್ಲಿ ಪೂರಕವಾದ ಮನೋಧರ್ಮ ಬೆಳೆಯುತ್ತದೆ.  ಬಲಿಪರ ಗಾನದಲ್ಲಿ ಇದನ್ನು ಕಾಣಬಹುದು. ಹಾಡುವ ತಾಳ ಒಂದೇ ಆದರೂ ಹಾಡಿನ ಆಕಾರ ತುಂಬಾ ವಿಭಿನ್ನವಾಗಿ ಇರುತ್ತದೆ. ಹಾಡು ಕಟ್ಟಲ್ಪಟ್ಟ ಛಂದಸ್ಸು ಮತ್ತು ಸಾಹಿತ್ಯದಿಂದಾಗಿ ಈ ರೀತಿಯ ವ್ಯತ್ಯಾಸವನ್ನು ಹಾಡಿನಲ್ಲಿ ಬಲಿಪರು ಕಾಣಿಸುತ್ತಾರೆ. ಬಲಿಪರು ಬದಲಾವಣೆಯ ಪರ್ವದಲ್ಲಿ ತನ್ನತನವನ್ನ ಪರಂಪರೆಯನ್ನು ಕಾಪಿಟ್ಟುಕೊಂಡ ಧೀಮಂತ ವ್ಯಕ್ತಿಮಾತ್ರವಲ್ಲ ಸಾಂಸ್ಕೃತಿಕವಾಗಿ ಇವರ ಈ ಕೊಡುಗೆ ಬಲು ಮೌಲಿಕವಾದದ್ದು.  ‘ಬಲಿಪಮಾರ್ಗ’ ಸರಣಿಯಲ್ಲಿ ಕೃಷ್ಣ ಪ್ರಕಾಶ್‍ ಉಳಿತ್ತಾಯ ಲೇಖನ

Read More