Advertisement

Tag: Girija Raikwa

ರೂಪಾತೀತ, ಗಾತ್ರಾತೀತ, ಕಾಲಾತೀತ ಶಿವ….

ಮಧ್ಯಪ್ರದೇಶದ ಭೋಜಪುರದಲ್ಲಿರುವ ಭೋಜೇಶ್ವರ, ತಮಿಳುನಾಡಿನ ತಂಜಾವೂರಿನ ಬೃಹದೇಶ್ವರ ಲಿಂಗ ನೆನಪಾಗುತ್ತದೆ. ಕೆಲವು ಮನೆತನಗಳ ಸಂಪ್ರದಾಯದಲ್ಲಿ ನದಿ ಮತ್ತು ಸಮುದ್ರ ತೀರದಲ್ಲಿ ವಾಸಿಸುವ ಜನರು ಪ್ರತಿದಿವಸ ಅದೇ ನೀರಿನಲ್ಲಿ ಸ್ನಾನ ಮಾಡಿ ಅಲ್ಲಿ ಸಿಗುವ ಮರಳಿನಲ್ಲಿ ಒಂದು ಲಿಂಗವನ್ನು ರಚಿಸಿ ಪೂಜಿಸಿ ಮತ್ತೆ ಅದನ್ನು ನೀರಿನಲ್ಲಿ ಅಂದೇ ವಿಸರ್ಜಿಸಿ ಮನೆಗೆ ಬರುವುದೂ ಉಂಟು. ಇದನ್ನು ವಿದ್ಯಾನಿವಾಸ್‌ ಮಿಶ್ರಾ ಒಂದು ಕಡೆ ಬರೆಯುತ್ತಾರೆ. ಮನುಷ್ಯ ಕಟ್ಟಿರುವ ಲಿಂಗಗಳಲ್ಲದೆ ಅನೇಕ ಕಡೆಗಳಲ್ಲಿ ಉದ್ಭವ ಲಿಂಗಗಳು ಸಿಗುತ್ತವೆ.
‘ದೇವಸನ್ನಿಧಿ’ ಅಂಕಣದಲ್ಲಿ ಶಿವನ ಹಲವು ರೂಪ, ರೂಪಕಗಳ ಕುರಿತು ಬರೆದಿದ್ದಾರೆ ಗಿರಿಜಾ ರೈಕ್ವ

Read More

ದೇವಾಲಯಗಳಲ್ಲಿ ಮಿಥುನ ಶಿಲ್ಪಗಳು

ಇನ್ನೊಂದು ಕುತೂಹಲಕರ ವಿಷಯ ಅಂದರೆ, ಆ ಕಾಲದ ಸಾಮಾಜಿಕ ಜೀವನದ ಮೇಲೆ ಬೆಳಕು ಚೆಲ್ಲುವ ಕೃತಿಗಳನ್ನು ರಚಿಸಿರುವ, ತಮ್ಮ ಪ್ರವಾಸದ ಕಥೆ ಹೇಳುತ್ತ ಅಂದಿನ ಜೀವನದ ಬಗ್ಗೆ ತಿಳಿಸುವ ಕಲಣ, ಬಿಲ್ಲಣ ಮುಂತಾದವರ ಕೃತಿಗಳಲ್ಲೂ ಕೂಡ ಯಾವ ಕಾರಣಕ್ಕೆ ದೇವಾಲಯಗಳಲ್ಲಿ ಮಿಥುನ ಶಿಲ್ಪಗಳನ್ನು ಕೆತ್ತುತ್ತಾರೆ ಎನ್ನುವುದರ ಬಗ್ಗೆ ಏನೂ ಮಾಹಿತಿ ಸಿಗುವುದಿಲ್ಲ. ಹಾಗಾಗಿ ಇದು ಅಂದಿನ ಸಾಮಾಜಿಕ ಜೀವನದಲ್ಲಿ ತುಂಬಾ ಸಹಜವಾದ ಭಾಗವಾಗಿರಬಹುದು.
‘ದೇವಸನ್ನಿಧಿ’ ಅಂಕಣದಲ್ಲಿ ಪುರಾತನ ದೇವಸ್ಥಾನಗಳಲ್ಲಿ ಕಾಣಸಿಗುವ ಮಿಥುನ ಶಿಲ್ಪಗಳ ಕುರಿತು ಬರೆದಿದ್ದಾರೆ ಗಿರಿಜಾ ರೈಕ್ವ

Read More

ಕರಿಯಣ್ಣ ಕೆಂಚಣ್ಣರೆಂಬ ಜಾನಪದ ದೈವಗಳು

ನಿಧಾನವಾಗಿ ಜನ ಆಗ ತಾನೆ ಸ್ನಾನ ಮಾಡಿ, ಒಪ್ಪ ಓರಣ ಮಾಡಿಕೊಂಡು ಬರಲಾರಂಭಿಸಿದ್ದರು. ಭಜನೆಯ ವೇಳೆಯಲ್ಲಿ ಗುಡಿಗೆ ಬರುವಾಗ ಸ್ನಾನ ಮಾಡಿ ಬರುವ ಪದ್ಧತಿಯೂ ಗಮನಾರ್ಹ. ದಿನವಿಡೀ ಹೊಲಗದ್ದೆಗಳಲ್ಲಿ ದುಡಿಯುವ ವರ್ಗ ದುಡಿಮೆ ಮುಗಿಸಿಕೊಂಡು ಮನೆಗೆ ಬಂದು ಸ್ನಾನ ಮಾಡಿ ದೇವಾಲಯಕ್ಕೆ ಬರಲು ಸಂಜೆ ೭.೩೦ ಕಡಿಮೆ ಆಗುವುದಿಲ್ಲ ಅಂತ. ಅದಕ್ಕೇ ಇಡೀ ದೇವಾಲಯ ಗಲಗಲ ಅನ್ನಲು ೮ ಗಂಟೆ ತನಕ ಬೇಕಾಯಿತು. ನನ್ನ ವಾಪಸ್‌ ಊರಿಗೆ ಹೋಗುವ ಆತುರಕ್ಕೆ ಅರ್ಥವಿಲ್ಲ ಅಂತ ತಿಳಿದು ಮುಗಿದಾಗ ಹೊರಡೋದು ಅಂತ ತೀರ್ಮಾನಿಸಿ ವಾಚ್‌ ನೋಡಿಕೊಳ್ಳುವುದನ್ನು ಬಿಟ್ಟು ತೆಪ್ಪಗೆ ಕುಳಿತುಕೊಂಡೆ.
ಗಿರಿಜಾ ರೈಕ್ವ ಬರೆಯುವ ‘ದೇವಸನ್ನಿಧಿ’ ಅಂಕಣದಲ್ಲಿ ಹೊಸ ಬರಹ

Read More

ಇಂಟರ್‌ನೆಟ್‌ ಸೃಷ್ಟಿಸುತ್ತಿರುವ ಆಧುನಿಕ ಪುರಾಣಗಳು

ಭೂಲೋಕದಲ್ಲಿರುವ ಬೆರಗು ಹುಟ್ಟಿಸುವ ಎಲ್ಲ ಕೆಲಸಗಳನ್ನು ಅನ್ಯಲೋಕದ ಜೀವಿಗಳು ಬಂದು ಮಾಡಿದ್ದಾರೆ ಅಂತ ಎಲ್ಲವನ್ನೂ ಏಲಿಯನ್‌ ಟೆಕ್ನಾಲಜಿಗೆ ಒಪ್ಪಿಸುವ ಅಸಂಬದ್ಧತೆ ಈಗ ಎಲ್ಲಾ ಕಡೆಗಳಲ್ಲಿ ಢಾಳಾಗಿ ಕಾಣಿಸುತ್ತಿದೆ. ಅದು ಎಷ್ಟರ ಮಟ್ಟಿಗೆ ಜನರನ್ನು ನಂಬಿಸಿದೆ ಅಂದರೆ ಇತ್ತೀಚೆಗೆ ಒಬ್ಬರು ನನ್ನೊಂದಿಗೆ ಯಾರಾದರೂ ಮನುಷ್ಯರು ಅಷ್ಟು ಚೆನ್ನಾಗಿ ಕೆತ್ತಲು ಸಾಧ್ಯವೇ ಇಲ್ಲ ಅಂತ ವಾದಿಸುತ್ತಿದ್ದರು. ಅವರಿಗೆ ಈಗಲೂ ಕೆತ್ತನೆ ಮಾಡುವ ಸ್ಥಪತಿಗಳಿರುವುದು ತಿಳಿದಂತಿಲ್ಲ.
ಗಿರಿಜಾ ರೈಕ್ವ ಬರೆಯುವ ‘ದೇವಸನ್ನಿಧಿ’ ಅಂಕಣದಲ್ಲಿ ಹೊಸ ಬರಹ

Read More

ಧೋಲ್ಕಲ್ ಗಣೇಶನಿಗಾಗಿ ಬೆಟ್ಟ ಹತ್ತಿಯೇಬಿಟ್ಟೆ!

ಅಲ್ಲಿಂದ ಸ್ವಲ್ಪ ದೂರ ಸೂರ್ಯನ ಕಿರಣ ಬಿದ್ದು, ಗಾಳಿಯೂ ಸೋಕಿ ತುಸು ದಣಿವು ಕಡಿಮೆಯಾಯಿತು. ಮತ್ತೆ ಮುಂದುವರೆದಂತೆ ತುಸು ಇಳಿಜಾರಿಗೆ ಸಾಗಿದ ದಾರಿ ಮತ್ತೆ ಸ್ವಲ್ಪ ಹೆಚ್ಚೇ ಏರುಹಾದಿಯಲ್ಲಿ ಕರೆದುಕೊಂಡುಹೋಯಿತು. ಅದು ತಲುಪಿದ್ದು ದೊಡ್ಡ ದೊಡ್ಡ ಬಂಡೆಗಳ ಬಳಿ. ಅಲ್ಲಿಂದ ಮುಂದೆ ಯಾವ ದಾರಿಯಿರಲಿಲ್ಲ. ಹತ್ತೋಕೆ ಆಗುತ್ತೋ ಇಲ್ವೋ ಅನ್ನೋ ಹಾಗಿದ್ದ ಬಂಡೆಗಳು. ಇಲ್ಲಿಂದ ಮುಂದೆ ಮುಂದಿನ ೨೦೦—೩೦೦ ಮೀಟರಿನ ದಾರಿ ತುಸು ಕಠಿಣವಾಗೇ ಇತ್ತು. ಹೆಜ್ಜೆ ಇಡೋದರಲ್ಲಿ ಸ್ವಲ್ಪ ಹೆಚ್ಚುಕಡಿಮೆಯಾದರೂ ಒಂದು ನಾಲ್ಕು ಮೂಳೆಗಳು ರಿಪೇರಿಗೆ ಹೋಗೋದು ಗ್ಯಾರಂಟಿ. ಅಲ್ಲಿಂದಲೂ ಗಣೇಶ ಏನೂ ಕಾಣಿಸುತ್ತಿರಲಿಲ್ಲ.
ಗಿರಿಜಾ ರೈಕ್ವ ಬರೆಯುವ ಅಂಕಣ ‘ದೇವಸನ್ನಿಧಿ’

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ