Advertisement

Tag: Gurudath Amrutapura

ಇನ್ಸ್ಬ್ರುಕ್ ಎಂಬ ಮಾಯಾಲೋಕ

ನಾರ್ಡ್ ಕೆಟ್ಟೆಯಲ್ಲಿ ಪ್ರವಾಸಿಗರಿಗೋಸ್ಕರ “ಇಗ್ಲೂ” ಕೂಡ ಮಾಡಿ ಇಡಲಾಗಿತ್ತು. ಗಟ್ಟಿಯಾದ ಹಿಮದ ಇಟ್ಟಿಗೆಗಳಿಂದ ಕಟ್ಟಿದ ಪುಟ್ಟ ಮನೆಯೇ ಇಗ್ಲೂ. ತಾಪಮಾನ ಹೆಚ್ಚಿದ ಹಾಗೆ ಕರಗಿ ಹೋಗುವ ಈ ಮನೆ, ಬೇಸಿಗೆಯಲ್ಲಿ ಮಾಯವಾಗಿಬಿಡುತ್ತದೆ. ಮತ್ತೆ ಚಳಿಗಾಲದಲ್ಲಿ ಹೊಸದಾಳಿ ಹಿಮ ಬಿದ್ದು, ಗಟ್ಟಿಯಾದಮೇಲೆ ಪುನಃ ಕಟ್ಟಿಕೊಳ್ಳಬೇಕು. ಅಲ್ಲಿಗೆ ಹಿಂದಿನವರ ಕಾಲದಲ್ಲಿ ಪ್ರತಿವರ್ಷ ಹೊಸ ಮನೆ ಕಟ್ಟಿ, ಗೃಹಪ್ರವೇಶ ನಡೆಯುತ್ತಿತ್ತು ಅನ್ನಿಸುತ್ತದೆ!
“ದೂರದ ಹಸಿರು” ಸರಣಿಯಲ್ಲಿ ಇನ್ಸ್ಬ್ರುಕ್ ನಗರದಲ್ಲಿ ಓಡಾಡಿದ ಅನುಭವಗಳ ಬರೆದಿದ್ದಾರೆ ಗುರುದತ್ ಅಮೃತಾಪುರ

Read More

ಸಾಟಿಯಿಲ್ಲದ ಸ್ಲೊವೇನಿಯಾ: ಪೋಸ್ಟೋಯ್ನಾ ಗುಹೆಗಳು

ಕಾರಿನಲ್ಲಿ ಸ್ಲೊವೇನಿಯಾದ ಯಾವುದೇ ಒಂದು ಮೂಲೆಯಿಂದ ಇನ್ನೊಂದು ಮೂಲೆಗೆ ಎರಡು ತಾಸಿನಲ್ಲಿ ಪ್ರಯಾಣಿಸಬಹುದು. ಅಷ್ಟು ಪುಟ್ಟ ದೇಶ. ಪುಟ್ಟ ರಾಷ್ಟ್ರವಾದರೂ ವೈವಿಧ್ಯಮಯ ಪ್ರವಾಸಿ ಆಕರ್ಷಣೆಗಳನ್ನೊಳಗೊಂಡಿದೆ. ಪ್ರವಾಸಿಗಳಿಗೆ ಹೇರಳ ಅವಕಾಶಗಳನ್ನು ತೆರೆದಿಟ್ಟಿರುವ ಸ್ಲೊವೇನಿಯಾ ಪ್ರಕೃತಿ ಪ್ರೇಮಿಗಳನ್ನು ಎಲ್ಲ ಋತುಗಳಲ್ಲೂ ಕೈಬೀಸಿ ಕರೆಯುತ್ತದೆ. ಸ್ಲೊವೇನಿಯಾದ ಶುಭ್ರ ಸ್ಪಟಿಕದಂತಹ ಸ್ವಚ್ಚ ನದಿಗಳು ನನ್ನ ಅಚ್ಚುಮೆಚ್ಚು. ಪ್ರಪಂಚದ ಅತ್ಯಂತ ಸುಂದರ ಸರೋವರಗಳಲ್ಲಿ ಒಂದಾದ “ಲೇಕ್ ಬ್ಲೆಡ್” ಕೂಡ ಸ್ಲೊವೇನಿಯಾದಲ್ಲಿದೆ. ನಾನು ಗಮನಿಸಿದಂತೆ ಕನ್ನಡದ ಹಲವಾರು ಚಲನಚಿತ್ರಗಳ ಹಾಡುಗಳು ಸ್ಲೊವೇನಿಯಾದಲ್ಲಿ ಚಿತ್ರೀಕರಣಗೊಂಡಿವೆ.
“ದೂರದ ಹಸಿರು” ಸರಣಿಯಲ್ಲಿ ಗುರುದತ್ ಅಮೃತಾಪುರ ಬರಹ

Read More

ರೊವಿನೇಮಿಯದಲ್ಲಿ ಸಾಂಟಾಕ್ಲಾಸ್ ಸಹವಾಸ

ಇಲ್ಲಿಂದ ಹಿರಿಯರು ಪೋಸ್ಟ್ ಮಾಡಿದ ಅಂಚೆ 2022ರ ಕ್ರಿಸ್ಮಸ್ ಹೊತ್ತಿಗೆ ಮಕ್ಕಳನ್ನು ತಲುಪುತ್ತೆ. ಆ ರೀತಿಯ ವ್ಯವಸ್ಥೆ ಇದೆ. ಎಲ್ಲ ಸ್ಟ್ಯಾಂಪ್ ಮೇಲೂ ಸಾಂಟಾ ಕ್ಲಾಸ್ ಇರುತ್ತಾನೆ. ನಾವು ಸಹ ಪೋಸ್ಟ್ ಕಾರ್ಡ್ ಪಡೆದು ನಮ್ಮ ಮನೆಗಳಿಗೆ ಪೋಸ್ಟ್ ಮಾಡಿದೆವು. ಇಲ್ಲಿಯ ಮತ್ತೊಂದು ವಿಶೇಷ ಎಂದರೆ ಪ್ರಪಂಚದಾದ್ಯಂತ ಮಕ್ಕಳು ಸಾಂಟಾ ಕ್ಲಾಸಿಗೆ ಕಳಿಸುವ ಅರಿಕೆಯ ಪತ್ರಗಳು ಇಲ್ಲಿ ಬಂದು ತಲುಪುತ್ತವೆ. ವರ್ಷಕ್ಕೆ ಸುಮಾರು ಐವತ್ತು ಲಕ್ಷ ಪತ್ರಗಳು! ಹಾಗಾಗಿ ರೊವಿನೇಮಿಯ ಸಾಂಟಾ ಕ್ಲಾಸ್ ವಿಲೇಜ್ ಕ್ರಿಸ್ಮಸ್ ತಾತನ ಅಧಿಕೃತ ಸ್ಥಳವಾಗಿದೆ.

Read More

ಗುರುದತ್ ಅಮೃತಾಪುರ ಬರೆವ ಹೊಸ ಸರಣಿ ಇಂದು ಆರಂಭ

ಹೊಸ ಊರಿಗೆ ಪ್ರವಾಸ ಹೋಗುವ ಖುಷಿ ಇಮ್ಮಡಿಯಾಗುವುದು ಆ ಸ್ಥಳದ ಪೂರ್ವಾಪರವನ್ನು ತಿಳಿದಾಗ. ಗುರುದತ್ ಅಮೃತಾಪುರ ಅವರು ಪ್ರವಾಸವನ್ನು ಇಷ್ಟಪಡುವವರು. ಜೊತೆಗೆ ಆ ಜಾಗಗಳ  ಇತಿಹಾಸವನ್ನೂ ಅರಿಯುವ ಕುತೂಹಲ  ಹೊಂದಿದವರು. ಯುರೋಪ್ ಖಂಡದ ಈಶಾನ್ಯ ಭಾಗದಲ್ಲಿರುವ ಒಂದು ಪುಟ್ಟ ರಾಷ್ಟ್ರ. ಭಾರತದಂತೆಯೇ ಅಹಿಂಸಾತ್ಮಕ ಹೋರಾಟದ ಹಾದಿಯನ್ನು ಹಿಡಿದ ದೇಶವದು. ಎಲೆಮರೆಯ ಕಾಯಿ ಎಸ್ಟೋನಿಯಾದ ರಾಜಧಾನಿ ತಾಲಿನ್ ಕುರಿತ ಬರಹದೊಂದಿಗೆ ತಮ್ಮ ಸರಣಿಯನ್ನು ಅವರು ಆರಂಭಿಸಿದ್ದಾರೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ