Advertisement

Tag: Guruprasad Kantalagere

ಇಂಗ್ಲಿಷ್ ಪಾಸು ಮಾಡಿಸುವ ‘ದಾತ’

ಹಾಸ್ಟೆಲ್‌ನಲ್ಲಿ ಓದುವುದಕ್ಕೆ ಬಿಎಸ್ಸಿ ಹುಡುಗರಿಗಿಂತ ಹೆಚ್ಚಿನ ಸಮಯ ವ್ಯಯಿಸುತ್ತಿದ್ದ ನಾವು, ರಾತ್ರಿ ಹಗಲೆನ್ನದೆ ಪುಸ್ತಕ ಹಿಡಿದೇ ಇರುತ್ತಿದ್ದೆವು. ಸದಾ ಕನ್ನಡಕ ಹಾಕುತ್ತ ಎಲ್ಲರಿಂದ ‘ಇಂಟಲಿಜೆಂಟ್’ ಎಂದು ಕರೆಸಿಕೊಳ್ಳುತ್ತಿದ್ದ ರಂಗನಾಥ್ ನಮ್ಮ ಓದನ್ನ ಕಂಡು ‘ನೀವು ಸೈನ್ಸ್‌ ತಗಬೇಕಾಗಿತ್ತು ಕಂಡ್ರಲ’ ಎನ್ನುತ್ತಿದ್ದ. ಓದಿ ಬಸವಳಿಯುತ್ತಿದ್ದ ನಮಗೆ ಮಧ್ಯೆ ಕರೆಂಟ್ ಹೋದರೆ ತಂಪೆನಿಸುತ್ತಿತ್ತು. ಆದರೆ ಅದನ್ನ ತೋರಗೊಡದೆ ಕರೆಂಟಿಗೆ ಶಪಿಸುವರಂತೆ ನಾಟಕವಾಡುತ್ತಿದ್ದೆವು. ಹೀಗೆ ಒಮ್ಮೆ ನಮಗೂ ಪ್ರಭನಿಗೂ ಚಾಲೆಂಜ್ ಬಿತ್ತು.
ಗುರುಪ್ರಸಾದ್ ಕಂಟಲಗೆರೆ ಬರೆಯುವ ಟ್ರಂಕು ತಟ್ಟೆ ಸರಣಿಯ ಬರಹ ಇಲ್ಲಿದೆ.

Read More

ಉಪೇಂದ್ರನ ಹಾವಳಿ ಮತ್ತು ರಾಮಾಂಜಿ ಲವ್

ಸರ್ಕಾರದಿಂದ ನಡೆಯುವ ಯಾವುದೇ ಪರೀಕ್ಷೆಗಳನ್ನು ನಡೆಸಲು ನಮ್ಮ ಜೂನಿಯರ್ ಕಾಲೇಜಿನ ಕೊಠಡಿಗಳನ್ನ ಕಡ್ಡಾಯವಾಗಿ ತೆಗೆದುಕೊಳ್ಳುತ್ತಿದ್ದುದರಿಂದ ಆಗೆಲ್ಲ ನಮಗೆ ದೀರ್ಘ ರಜೆ ಸಿಗುತ್ತಿತ್ತು. ಚೆನ್ನಾಗಿ ಓದಬೇಕೆಂಬ ಕನಸು ಹೊತ್ತು ಬಂದಿದ್ದ ನಮಗೆ ಇಲ್ಲಿನ ವಿಪರೀತ ರಜೆಗಳಿಂದಾಗಿ ನಿರಾಸೆ ಉಂಟಾಗಿತ್ತು. ನಮಗೆ ಇತ್ತ ಕೆಲ ತಿಂಗಳು ಕಳೆದರೂ ಕಾಲೇಜು ಪ್ರಾರಂಭ ಆಗದೆ ಊರಲ್ಲೆ ಉಳಿದಾಗ, ಪಕ್ಕದ ಮನೆ ಕೇಸುದೊಡಪ್ಪ ‘ಎಲ್ಲೊ ಪೇಲಾಗವೆ ಅದ್ಕೆ ಹೋಗಿಲ್ಲ’ ಎಂದು ಅನುಮಾನ ಪಟ್ಟುಕೊಳ್ಳುತ್ತಿತ್ತು. ಗುರುಪ್ರಸಾದ್‌ ಕಂಟಲಗೆರೆ ಬರಹ.

Read More

ಹಾಸ್ಟೆಲ್ ರೂಂನಲ್ಲಿ ಓದುವ ‘ಸೆಟಪ್’ ನಿರ್ಮಾಣ

ರಂಗಸ್ವಾಮಣ್ಣ ಮಾವನ ಬಗೆಗೆ ಕೊಟ್ಟಿದ್ದ ಬಿಲ್ಡಪ್‌ನಿಂದ ರೂಮಿನವರಾದ ನಾವಷ್ಟೆ ಅಲ್ಲದೆ ಅಕ್ಕಪಕ್ಕದವರೂ ಸೈಲೆಂಟಾಗಿದ್ದರು. ಗಂಟೆ ಗಟ್ಟಲೆ ಇದ್ದ ತಿಮ್ಮರಾಯಪ್ಪನವರು ಬಹಳ ಹೊತ್ತು ಭಾಮೈದುನನನ್ನು ಮಾತ್ರವಲ್ಲದೆ ನಮ್ಮನ್ನೂ ವಿಚಾರಿಸಿಕೊಂಡರು. ಕುಂದೂರು ತಿಮ್ಮಯ್ಯನವರ ಮಗ ಮತ್ತು ಭಾಮೈದ ಎಂದು ತಿಳಿದ ನಂತರ ನಮ್ಮನ್ನೂ ಕಾಳಜಿಯಿಂದ ಮಾತಾಡಿಸಿದರು. ಭಾಮೈದನ ವಿದ್ಯಾಭ್ಯಾಸದ ಸ್ಥಿತಿಗತಿಯನ್ನ ಒಂದಷ್ಟು ಒಳಹೊಕ್ಕೆ ಕೆದಕಿದ ನಂತರವೂ ಜೋಬಿಗೆ ಕೈ ಹಾಕಿ ಏನನ್ನೂ ತೆಗೆದಿದ್ದು ಕಾಣಲಿಲ್ಲ. ಹೊರಡಲು ಸಿದ್ಧರಾದ ತಿಮ್ಮರಾಯಪ್ಪನವರನ್ನ…

Read More

ದಪ್ಪ ತುಂಡಿನ ಬಾಡಿನೆಸರು

ನಾವು ನಮ್ಮ ಬಳಿ ಕಳವಾಗುತ್ತಿರುವ ಹಣ, ವಸ್ತುಗಳ ವಿಷಯವನ್ನ ಕುತೂಹಲದಿಂದಲೂ ಬೇಸರದಿಂದಲೂ ಹೇಳಿಕೊಳ್ಳುತ್ತಿದ್ದೆವು.  ಅದನ್ನು ಕೇಳಿಸಿಕೊಳ್ಳುವ ಆತ ನಮ್ಮಂತೆಯೇ ಆಶ್ಚರ್ಯ ಚಕಿತನಾಗುತ್ತಿದ್ದ. ‘ಈ ದಿನ ಆಜಾಗ ಬೇಡ ಈ ಜಾಗದಲ್ಲಿ ಇಟ್ಟೋಗಿ’ ಎಂದು ಸಲಹೆ ಕೊಟ್ಟು ಜೋಪಾನವಾಗಿ ಕಾಲೇಜಿಗೆ ಕಳುಹಿಸುತ್ತಿದ್ದ. ಬಂದು ನೋಡಿದರೆ ಮತ್ತೆ ಕಳವು!ಒಂದು ದಿನ ಕಾಲೇಜು ಮುಗಿಸಿಕೊಂಡು ಮಧ್ಯಾಹ್ನ ಹಾಸ್ಟೆಲ್ಗೆ ಬಂದೆವು. – ಗುರುಪ್ರಸಾದ್ ಕಂಟಲಗೆರೆ ಬರಹ

Read More

ಜಂತೆಯಲ್ಲಿದ್ದ ಕೈಚೀಲದಲ್ಲಿ ಪೋಲಿ ಪುಸ್ತಕಗಳು

ಪಿಯುಸಿ ಓದಲು ತುಮಕೂರಿಗೆ ಹೊರಟಾಗ ಹಲವು ಬದಲಾವಣೆಗಳಾದವು.  ಹೈಸ್ಕೂಲ್ ಹಾಸ್ಟೆಲ್‌ವರೆಗೆ ಕಡ್ಡಾಯವಾಗಿದ್ದ ‘ಟ್ರಂಕು ತಟ್ಟೆ’ ಜಾಗದಲ್ಲಿ ಈಗ ಸೂಟ್‌ಕೇಸ್ ಬಂತು. ಆ ವರ್ಷದ ಮಾವಿನ ಮರದ ಫಸಲಿನಲ್ಲಿ ಅಪ್ಪ ಮೊದಲ ಬಾರಿಗೆ ಕಾಲೇಜಿಗೆ ಹೋಗುವ ಮಗ ಎಂದು ಎರಡು ಜೊತೆ ಹೊಸ ಬಟ್ಟೆ ಕೊಡಿಸಿತು. ಕಾಲೇಜು ಪ್ರವೇಶ ಮಾಡಿದ್ದಕ್ಕೆ ಪ್ರಮೋಷನ್ ಎಂಬಂತೆ ಮೊದಲ ಬಾರಿಗೆ ಚಿ.ನಾ.ಹಳ್ಳಿಯ ಗೋಪಾಲ ಶೆಟ್ಟಿ ಅಂಗಡಿಗೆ ಕರೆದೊಯ್ದು ಎರಡೆರಡು ಡ್ರಾಯರ್, ಬನಿಯನ್ ಕೊಡಿಸಿತು. ಅವೆಲ್ಲವನ್ನು ಹೊಸ ಸೂಟ್ ಕೇಸ್‌ಗೆ ತುಂಬಿ ಜೋಪಾನ ಎಂದು ಹೇಳಿ ಅಪ್ಪ ಅಮ್ಮ ನನ್ನನ್ನ ಬೀಳ್ಕೊಟ್ಟರು. 
‘ಟ್ರಂಕು ತಟ್ಟೆ’ ಸರಣಿಯಲ್ಲಿ ಗುರುಪ್ರಸಾದ್ ಕಂಟಲಗೆರೆ ಅನುಭವ ಕಥನದ ಹದಿಮೂರನೆಯ ಕಂತು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ