ಕೈ ಕೆಸರಾಗಿ ಬಾಯಿ ಮೊಸರು: ಗುರುಪ್ರಸಾದ್ ಕುರ್ತಕೋಟಿ ಅಂಕಣ
ಕೃಷಿಯನ್ನು ಕಲಿಯುವುದರ ಜೊತೆ ಜೊತೆಗೆ, ಉತ್ಪನ್ನಗಳನ್ನು ಹೇಗೆ ಮಾರಬೇಕು ಎಂಬುದನ್ನು ಕೂಡ ರೈತನಾಗುವವನು ಕಲಿಯಬೇಕು. ಹಿಂದೊಮ್ಮೆ ಬೆಂಗಳೂರನ್ನು ಬಿಟ್ಟು ಹಳ್ಳಿಗೆ ಖಾಯಂ ಆಗಿ ಬಂದು ಬಿಡಲೇ ಎಂದು ಯೋಚನೆ ಮಾಡುತ್ತಿದ್ದ ಸಮಯದಲ್ಲಿ ಅಲ್ಲಿನ ಸ್ನೇಹಿತರೊಬ್ಬರಿಗೆ ಹಳ್ಳಿಯಲ್ಲಿ ನಾನು ಸಂಪಾದನೆ ಮಾಡಲು ಏನು ಮಾಡಬಹುದು ಅಂತ ಕೇಳಿದಾಗ, ಅವರು ಬಿಳೆ (ಭತ್ತದ) ಹುಲ್ಲಿನ business ಮಾಡಿ ಅಂತ ನಕ್ಕಿದ್ದರು. ಆದರೆ ಅವರು ಹೇಳಿದ್ದು ತುಂಬಾ ಸತ್ಯ ಅಂತ ಈಗ ಅರಿವಾಗಿತ್ತು. ಭತ್ತದ ಹುಲ್ಲಿಗೆ ತುಂಬಾ ಬೆಲೆ ಹಾಗೂ ಬೇಡಿಕೆ ಇದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ