ಒಂದು ನೊಣದ ಕಥೆ….

ಅಂದು ಬೆಳಿಗ್ಗೆ ಕೋರ್ಟಿಗೆ ಹೋದ ನನಗೆ ಕಟ ಕಟೆಯಲ್ಲಿ ಮುಖಾಮುಖಿಯಾಗಿದ್ದು ಆಗ ಬೆಂಗಳೂರಿನಲ್ಲಿ ಇದ್ದಂತಹ ಇಬ್ಬರು ಪ್ರಸಿದ್ಧ, ಘಟಾನುಘಟಿ ಕ್ರಿಮಿನಲ್ ವಕೀಲರುಗಳಲ್ಲಿ ಒಬ್ಬರು. ಶವಪರೀಕ್ಷೆಗೆ ಸಂಬಂಧಿಸಿದ ಮಾಹಿತಿಗಳನ್ನು ನಾನು ನೀಡುತ್ತ ಹೋದಂತೆ ಅವರು ಅನೇಕ ಪ್ರಶ್ನೆಗಳನ್ನು ಕೇಳಿದ್ದರು. ಕೆಲವು ದಿವಸಗಳ ಹಿಂದೆಯಷ್ಟೇ ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡು ಬಂದಿದ್ದ ನಾನು ಪರೀಕ್ಷೆಗೆಂದು ಬಹಳಷ್ಟು ಓದಿದ್ದೆ. ಆದ್ದರಿಂದ ಪಾಟೀ ಸವಾಲು ಎದುರಿಸುತ್ತ, ಸಾವು ಸಂಭವಿಸಿ ಅಂದಾಜು ಎಷ್ಟು ದಿನಗಳಾಗಿರಬಹುದು ಎಂಬುದನ್ನು ಹೇಳಿದೆ. ಡಾ. ಕೆ.ಬಿ. ಸೂರ್ಯಕುಮಾರ್ ಬರೆಯುವ ‘ನೆನಪುಗಳ ಮೆರವಣಿಗೆ’ ಸರಣಿಯಲ್ಲಿ ಹೊಸ ಬರಹ. 

Read More