Advertisement

Tag: K Sathyanarayana

ನಾನೇಕೆ ಪಾತ್ರವಾಗುವುದಿಲ್ಲ

ತಪ್ಪು ತಿಳಿಯಬೇಡಿ! ನನಗೆ ಪಾತ್ರಗಳನ್ನು ಸೃಷ್ಟಿಸುವುದಕ್ಕಿಂತ ಹೆಚ್ಚಾಗಿ ಅವುಗಳ ಜೊತೆಗೇ ಇದ್ದುಬಿಡುವುದು, ಅವುಗಳ ಜೊತೆ ಹೋಗಿಬಿಡುವುದೇ ಇಷ್ಟ. ನಾಲ್ಕು ಜನರ ಮಧ್ಯೆ, ಜನಸಂದಣಿಯ ನಡುವೆ ಇದ್ದೂ ಕೂಡ ನಾನು ಪಾತ್ರಗಳ ಜೊತೆ ಇದ್ದುಬಿಡಬಲ್ಲೆ. ಕುಟುಂಬದ ಸದಸ್ಯರು ಆಗಾಗ್ಗೆ ಆಕ್ಷೇಪಣೆ ತೆಗೆಯುವುದುಂಟು. ನೀವು ಮನೆಯಲ್ಲಿದ್ದರೂ, ನಮ್ಮೊಡನೆಯೇ ಇರುವಂತೆ ಕಂಡರೂ, ಇನ್ನೊಂದು ಲೋಕದಲ್ಲಿರುತ್ತೀರಿ. ಯಾರ ಮಾತನ್ನೋ ಕೇಳಿಸಿಕೊಳ್ಳುತ್ತಿರುತ್ತೀರಿ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹನ್ನೊಂದನೆಯ ಪ್ರಬಂಧ ನಿಮ್ಮ ಓದಿಗೆ

Read More

ಸರ್ಟಿಫಿಕೇಟ್‌ ದಾತರು

ಕೆಲವರಿಗೆ ಹೆಚ್ಚು ಹೆಚ್ಚು ಸರ್ಟಿಫಿಕೇಟ್‌ಗಳನ್ನು ನೀಡುವ ಆಸೆಯಿರುತ್ತದೆ. ಇಂಥವರು ತಮ್ಮ ಪ್ರಸಿದ್ಧಿಯನ್ನು ತಾವೇ ಹಬ್ಬಿಸುತ್ತಾರೆ. ಇಂಥವರು ನನಗೆ ಸ್ವಲ್ಪಕಾಲ ಗಂಟುಬಿದ್ದಿದ್ದರು. ನನ್ನಿಂದ ಸಾಕಷ್ಟು ಉಪಕೃತರೂ ಆಗಿದ್ದರು. ಉತ್ಸವ ಮೂರ್ತಿಯ ಸ್ವಭಾವದ ವ್ಯಕ್ತಿತ್ವ. ನಾನು ಎಲ್ಲಿಗೇ ಹೊರಡಲಿ, ಯಾವ ಕಾರ್ಯಕ್ಕೇ ಹೊರಡಲಿ, ಆಯ್ತು ಅಲ್ಲಿ ನನಗೆ ಇಂಥವರು ಪರಿಚಯ, ನನ್ನ ಬಗ್ಗೆ ಗೌರವವಿದೆ, ನನ್ನಿಂದ ಒಂದು ಸರ್ಟಿಫಿಕೇಟ್‌ ತಗೊಂಡು ಹೋಗು ಎನ್ನುತ್ತಿದ್ದರು. ಹೌದು ಅವರ ಇಂಗ್ಲಿಷ್‌ ತುಂಬಾ ಚೆನ್ನಾಗಿತ್ತು. ಸರ್ಟಿಫಿಕೇಟ್‌ ಬರೆದುಕೊಡುವ ಕಾಗದ ಕೂಡ ಚಿನ್ನದ ಬಣ್ಣದಿಂದ ಹೊಳೆಯುತ್ತಿತ್ತು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹತ್ತನೆಯ ಪ್ರಬಂಧ ನಿಮ್ಮ ಓದಿಗೆ

Read More

ಮಸಲ್‌ ಮೆಮೊರಿ ಮತ್ತು ನಾವು….

ಬರೇ ಜ್ಞಾನ, ವಿಪರೀತ ಮಾಹಿತಿಯಿಂದ ಏನೂ ಪ್ರಯೋಜನವಿಲ್ಲ. ಮನುಷ್ಯನ ನೋವನ್ನು ಗೌರವಿಸುವ, ಅರ್ಥಮಾಡಿಕೊಳ್ಳುವ ಭಾಗವಾಗಿ ಜ್ಞಾನ, ಪುಸ್ತಕಗಳು ಮೂಡಿ ಬರಬೇಕು. ಇಲ್ಲದಿದ್ದರೆ ಜ್ಞಾನ, ಮಾಹಿತಿಯೆಲ್ಲ ಮನುಷ್ಯನಿಂದ, ಬದುಕಿನಿಂದ ವಿಮುಖವಾಗುತ್ತದೆ, ಇದ್ದೂ ಇಲ್ಲದಂತೆ. ಏನೂ ಪ್ರಯೋಜನವಾಗುವುದಿಲ್ಲ. ಇಂತಹ ಜ್ಞಾನ, ಮಾಹಿತಿಯ ಆಧಾರದ ಮೇಲೆ ಬದುಕು, ನಾಗರಿಕತೆ ಯಾಂತ್ರಿಕವಾಗಿರುತ್ತದೆ, Muscle memoryಯನ್ನು ಪ್ರೋತ್ಸಾಹಿಸುತ್ತದೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿ

Read More

ಇಳಿ ವಯಸ್ಸಿನ ಕಾಠಿಣ್ಯ ಸ್ವಾರ್ಥ ಇತ್ಯಾದಿ

ಜಗತ್ತಿನಲ್ಲಿ ಮನುಷ್ಯ ಬಂದಿರುವುದು, ಇರುವುದು, ಮಾಗಬೇಕಾದದ್ದು ಕೇವಲ ನಾಲ್ಕು ದಿನದ ಅತಿಥಿಯಾಗಿ ಮಾತ್ರ. ಸದಾ ಕಾಲದ ಜಹಗೀರ್‌ದಾರಿ ಅವನಿಗಿಲ್ಲ. ಇದು ಎಲ್ಲರಿಗೂ ಗೊತ್ತಾಗಲೆಂದೇ ಸಾವಿನ ಸಮಯದಲ್ಲಿ ಸೃಷ್ಟಿ ಒಂದು ಉಪಾಯ ಮಾಡಿದೆ. ಮನುಷ್ಯನಿಗೆ ಪ್ರಾಣ ಹೋಗಿದೆ ಎಂದು ಗೊತ್ತಾದ ಮೇಲೂ ಯಾರಿಗೂ ಗೊತ್ತಾಗದಂತೆ ಕೆಲಕಾಲ ಕ್ಷೀಣವಾಗಿ ಪ್ರಾಣ ಇರುತ್ತದೆ. ದೇಹದಲ್ಲಿ ಶಾಖ ಕೂಡ ಇರುತ್ತದೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಆರನೆಯ ಪ್ರಬಂಧ ನಿಮ್ಮ ಓದಿಗೆ

Read More

ಸದಾ ಸ್ವಾಭಿನಂದನೆಯ ಯುಗ

ನಮ್ಮನ್ನು ನಾವೇ ಅಭಿನಂದಿಸಿಕೊಳ್ಳುತ್ತಿರುವುದು, ಹೊಗಳಿಕೊಳ್ಳುತ್ತಿರುವುದು ಇವೇ ನಮ್ಮ ನಿತ್ಯದ, ಕ್ಷಣಕ್ಷಣದ ದಂದುಗವಾಗಿದೆ. ಅಂದರೆ ನಾವು ನಮ್ಮನ್ನು ಅಭಿನಂದಿಸಿಕೊಂಡು ಬೆಚ್ಚಗೆ ಸುಖಪಡುತ್ತಾ ಮನೆಯೊಳಗೆ ಕುಳಿತಿರುತ್ತೇವೆಂದು ಅರ್ಥವಲ್ಲ. ಇನ್ನೊಬ್ಬರು, ಅಂದರೆ, ನಮ್ಮನ್ನು ಬಲ್ಲವರೆಲ್ಲರೂ ನಮ್ಮನ್ನು ಯಾವಾಗಲೂ ಅಭಿನಂದಿಸುತ್ತಲೇ ಸಾಧ್ಯವಾಗುವಂತಹ ಸುಲಭವಾಗುವಂತಹ ಅವಕಾಶಗಳನ್ನು ನಾವೇ ಸೃಷ್ಟಿಸುತ್ತಾ ಹೋಗುತ್ತೇವೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಐದನೆಯ ಪ್ರಬಂಧ ನಿಮ್ಮ ಓದಿಗೆ

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ