ಅಣ್ಣ ನೆಟ್ಟ ದೇವರ ಮರ

ಅಪ್ಪನ ಕೆಮ್ಮುಗಳಲ್ಲಿ ಎರಡು ವಿಧಗಳಿದ್ದವು. ಒಂದು ಬೀಡಿ ದಮ್ಮಿನ ಕೆಮ್ಮು, ಇನ್ನೊಂದು ಎಚ್ಚರಿಕೆಯ ಕರಗಂಟೆಯ ಒಣಕೆಮ್ಮು. ಎರಡನೆಯ ಕೆಮ್ಮು ಒಂಥರ ನಮ್ಮಪ್ಪನ ಸಿಗ್ನಲ್ಲು ಕೂಡ ಆಗಿತ್ತು. ನಮಗೆಲ್ಲಾ ಆ ಕೆಮ್ಮಿನ ಧ್ವನಿಯ ಹಿಂದಿರುವ ಭಾಷೆ, ಭಾವಗಳು ತಕ್ಷಣಕ್ಕೆ ಗೊತ್ತಾಗಿ ಬಿಡುತ್ತಿದ್ದವು. ಅಪ್ಪ ಸಿಟ್ಟಿನಲ್ಲಿ ಇದ್ದಾರಾ? ಇಲ್ಲ ಒಳ್ಳೇ ಮೂಡ್ನಲ್ಲಿ ಬರ್ತಿದ್ದಾರಾ? ಎನ್ನುವುದು ತಿಳಿಯುತ್ತಿತ್ತು. ಜೊತೆಗೆ `ನಾನು ಬರುತ್ತಿದ್ದೇನೆ ಹೋಶಿಯಾರ್’ ಎಂಬ ಬೋಪರಾಕ್ ಕೂಡ ಆ ಕೆಮ್ಮಿನ ದನಿಯಲ್ಲಿ ಅಡಕವಾಗಿರುತ್ತಿತ್ತು. -ಕಲೀಮ್‌ಉಲ್ಲಾ ಬರೆದ “ಬಾಡೂಟದ ಮಹಿಮೆ” ಪ್ರಬಂಧ ಸಂಕಲನದ ಒಂದು ಪ್ರಬಂಧ ನಿಮ್ಮ ಓದಿಗೆ

Read More