Advertisement

Tag: Kannada Literature

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್ ಕಥೆ

ಈ ದೃಶ್ಯಕ್ಕೆ ಅನತಿ ದೂರದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆಯುತ್ತಿದೆ. ಲಚ್ಚಣ್ಣನಿಗೆ ಎರಡು ದಶಕಗಳ ಕಾಲ ಈ ಊರಿನಲ್ಲಿ ಅನ್ನದ ವ್ಯಾಪ್ತಿ ತೋರಿಸಿದ್ದ ದೇವಿ ಪ್ರಸಾದ ಹೋಟೆಲಿನ ವಸ್ತ್ರಾಪಹರಣ ಮಾಡುತ್ತಿರುವಂತೆ ನಾಲ್ವರು ಕೆಲಸಗಾರರು ಅದರ ಮಾಡಿನ ಹಂಚುಗಳನ್ನು ಕಳಚಿ ಇಳಿಸುತ್ತಿದ್ದಾರೆ. ಆ ಹೋಟೆಲನ್ನು ಮೂರು ದಶಕಗಳ ಕಾಲ ನಡೆಸಿದ್ದ ಗೋಪಾಲಕೃಷ್ಣ ಮಂಜಿತ್ತಾಯರು ಕೊನೆಯುಸಿರೆಳೆದ ತಾಯಿಯ ಶವದೆದುರು ಶತಪಥ ಹಾಕುವ ಆಘಾತಗೊಂಡ ಮಗನಂತೆ ಅತ್ತಿಂದಿತ್ತ ಹೋಗುತ್ತಿದ್ದಾರೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್‌ ಬರೆದ ಕತೆ “ವಿದಾಯ” ನಿಮ್ಮ ಓದಿಗೆ

Read More

ಕರುಣಾಳು ಬಾ ಬೆಳಕೆ…

ಅಂಗಳದಲ್ಲಿ ಯಾರೂ ಕಾಣಲಿಲ್ಲ. ಅಲ್ಲಿ ಯಾವ ಮರ್ಸಿಡಿಸ್, ಬೆನ್ಝ್ ಕಾರುಗಳೂ ನಿಂತಿರಲಿಲ್ಲ. ಭಕ್ತಾದಿಗಳ ಜನಜಂಗುಳಿ ಇರಲಿಲ್ಲ. ಝಗ ಝಗಿಸುವ ದೀಪಾಲಂಕೃತ ವೇದಿಕೆ, ಮೆತ್ತನೆಯ ಗಾದಿ ಯಾವುದೂ ಇರಲಿಲ್ಲ. ಇದ್ದುದೆಲ್ಲ ಕೇವಲ ನೀರವತೆ. ಒಳಗೆ ಯಾವುದೋ ಕೋಣೆಯೊಳಗಿಂದ ಬೆಳಕು ಕಾಣುತ್ತಿತ್ತು. ಆ ಕೋಣೆಯ ಕಿಟಕಿಯ ಬಳಿ ನಿಂತೆವು.
ಗಿರಿಜಾ ಶಾಸ್ತ್ರಿ ಬರೆಯುವ “ಆ ಕಾಲದ ರಾಜಲಕ್ಷ್ಮಿ” ಸರಣಿಯಲ್ಲಿ ಹೊಸ ಬರಹ

Read More

ಎಲ್ಲ ಆಯಾಮಗಳಲ್ಲೂ ಸಮೃದ್ಧವಾದ “ಎತ್ತರ”

ಇವರೆಲ್ಲರೂ ಹಳೆಕಾಲದ ಟ್ರಂಕಿನೊಳಗೆ ಘಾತುಕ ರಹಸ್ಯವನ್ನು ತಣ್ಣಗೆ ಮಡಚಿಡಬಲ್ಲರು. ಹಾಗೆಯೇ ಮಡಿಲಿನಲ್ಲಿ ಮಲಗಿರುವ ಬೆಕ್ಕಿನ ಮರಿಯನ್ನು ಅತಿ ಅನೌಪಚಾರಿಕವಾಗಿ ಕೆಳಗಿಳಿಸುವಂತೆ ಗುಟ್ಟು ಬಿಟ್ಟುಕೊಡಬಲ್ಲವರು. ರಾಜಕಿಶೋರ, ಸರಳ, ಸುಗುಣೇಶ, ಮಾಧವ ಎಂಬ ಚುಕ್ಕಿಪಾತ್ರಗಳೆಲ್ಲ ಇವನನ್ನು ಸುಳಿಯ ಇನ್ನಷ್ಟು ಒಳಗೆ ಸೆಳೆಯಬಲ್ಲವರು. ಇವರೆಲ್ಲರಿಂದ ಸುತ್ತುವರೆದಿರುವ ಕಥಾನಾಯಕನಿಗೆ ಸಾವಯವ ಸಂಬಂಧದ ತಾದ್ಯಾತ್ಮ ಸಾಧ್ಯವಾಗುವುದು ‘ಒಂದು ಸುತ್ತು ಕಡಿಮೆ’ ಇರುವ ವಿಮಲಾಳೊಂದಿಗೆ. ನಾಣ್ಯ ಅವರ ನಡುವಿನ ಸಂವಾದದ ಭಾಷೆ.
ಇಂದ್ರಕುಮಾರ್ ಎಚ್.ಬಿ. ಯವರ “ಎತ್ತರ” ಕಾದಂಬರಿಯ ಕುರಿತು ಮಮತಾ ಆರ್. ಬರಹ

Read More

ನಾನೇಕೆ ಪಾತ್ರವಾಗುವುದಿಲ್ಲ

ತಪ್ಪು ತಿಳಿಯಬೇಡಿ! ನನಗೆ ಪಾತ್ರಗಳನ್ನು ಸೃಷ್ಟಿಸುವುದಕ್ಕಿಂತ ಹೆಚ್ಚಾಗಿ ಅವುಗಳ ಜೊತೆಗೇ ಇದ್ದುಬಿಡುವುದು, ಅವುಗಳ ಜೊತೆ ಹೋಗಿಬಿಡುವುದೇ ಇಷ್ಟ. ನಾಲ್ಕು ಜನರ ಮಧ್ಯೆ, ಜನಸಂದಣಿಯ ನಡುವೆ ಇದ್ದೂ ಕೂಡ ನಾನು ಪಾತ್ರಗಳ ಜೊತೆ ಇದ್ದುಬಿಡಬಲ್ಲೆ. ಕುಟುಂಬದ ಸದಸ್ಯರು ಆಗಾಗ್ಗೆ ಆಕ್ಷೇಪಣೆ ತೆಗೆಯುವುದುಂಟು. ನೀವು ಮನೆಯಲ್ಲಿದ್ದರೂ, ನಮ್ಮೊಡನೆಯೇ ಇರುವಂತೆ ಕಂಡರೂ, ಇನ್ನೊಂದು ಲೋಕದಲ್ಲಿರುತ್ತೀರಿ. ಯಾರ ಮಾತನ್ನೋ ಕೇಳಿಸಿಕೊಳ್ಳುತ್ತಿರುತ್ತೀರಿ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹನ್ನೊಂದನೆಯ ಪ್ರಬಂಧ ನಿಮ್ಮ ಓದಿಗೆ

Read More

ಶಾಂತಿ ಕೆ. ಅಪ್ಪಣ್ಣ ಈ ಭಾನುವಾರದ ಕಥೆ

ಅದು ವಿಷಯ! ಅಲ್ಲಿಗೆ ವಯಸ್ಸಾಗಿರುವುದು ಯಾವುದಕ್ಕೆ? ದೇಹಕ್ಕೆ ಮಾತ್ರವೇ? ಮನಸು ಪಕ್ವವಾಗುವುದು ಅನ್ನುತ್ತಾರಲ್ಲ ಅದೇನದು? ಆಯ್ಕೆಗಳನ್ನೆಲ್ಲ ಬದಿಗೊತ್ತಿ, ಹೆಚ್ಚು ತಕರಾರು ಮಾಡದೆ, ಇರುವುದನ್ನು ಒಪ್ಪಿಕೊಂಡು, ಒಪ್ಪಲಾಗದಿದ್ದರೂ ಒಪ್ಪಿಸಿಕೊಂಡು, ಅಪ್ಪಿಕೊಂಡು, ದಬ್ಬಿಸಿಕೊಂಡು ಹೇಗಾದರೊಂದು ಬದುಕುವುದೆ? ಅಥವಾ ಪರಿಸ್ಥಿತಿಗೆ ತಲೆಬಾಗಿ ಸ್ಥಿತಪ್ರಜ್ಞೆಯನ್ನು ಆರೋಪಿಸಿಕೊಂಡು ಒಳಗೊಳಗೇ ಬೇಯುತ್ತ, ಬೇಯುವಿಕೆಯ ಕಮಟು ವಾಸನೆ ಹೊರಗೆ ತೋರದಂತೆ ಕಾಯುತ್ತ, ಹೀಗೆ ಬೇಯುವುದೇ ಜೀವನದ ಸಾರ್ಥಕತೆಯೆಂದುಕೊಂಡು ಸುಳ್ಳೇ ನಂಬಿಸಿಕೊಳ್ಳುವುದೆ?
ಶಾಂತಿ ಕೆ. ಅಪ್ಪಣ್ಣ ಬರೆದ ಈ ಭಾನುವಾರದ ಕಥೆ “ಚಿತ್ರಕಾರನ ಬೆರಳು”

Read More

ಜನಮತ

ಸಾಹಿತ್ಯ ಪ್ರಕಾರಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...

Read More

ಬರಹ ಭಂಡಾರ