Advertisement

Tag: Kannada Literature

ಕೆಂಪಾದವೋ ಎಲ್ಲ ಕೆಂಪಾದವೋ: ಸುಧಾ ಆಡುಕಳ ಅಂಕಣ

ಆ ದಿನವೂ ಮಳೆಗೆ ಇನಿತೂ ಬಿಡುವಿಲ್ಲ. ಸಂಜೆಯಾಗುತ್ತಲೇ ರಾತ್ರಿಯಿಳಿದಂತ ಕತ್ತಲು. ನೀಲಿಯ ಅಮ್ಮ ಅಂಗಳಕ್ಕೆ ಇಣುಕಿ ಕ್ಷಣಕ್ಷಣವೂ ನೀಲಿ ಬಂದಳೆ? ಎಂದು ನಿರುಕಿಸುತ್ತಾಳೆ. ಈ ಹುಡುಗಿಗೆ ಯಾಕಿಷ್ಟು ಶಾಲೆಯ ಹುಚ್ಚೋ ಎಂದು ಮನದಲ್ಲಿಯೇ ಶಪಿಸುತ್ತಾಳೆ. ಹೊಳೆಯಂತೂ ಹುಚ್ಚುಹಿಡಿದು ಹರಿಯುತ್ತಿದೆ.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ನಾಲ್ಕನೆಯ ಕಂತಿನಲ್ಲಿ ನೀಲಿಯ ಓದುವ ಹುಚ್ಚಿನ ಕತೆ

Read More

ಹಿರಿಯ ಕಾದಂಬರಿಕಾರ ಕೆ.ಟಿ. ಗಟ್ಟಿ ನಿಧನ…

ಪ್ರವಾಸ ನಮಗಿಷ್ಟವಾಗುವುದು ಯಾವಾಗಲೂ ಮನೆಯಲ್ಲಿದ್ದು ಒಮ್ಮೊಮ್ಮೆ ಪ್ರವಾಸ ಹೋದಾಗ. ನಿರಂತರ ಪ್ರವಾಸದಲ್ಲಿರುವುದು ಎಷ್ಟು ರಸಹೀನ ಎಂದು ಗಗನಸಖಿಯರು ಮತ್ತು ಮೆಡಿಕಲ್ ರೆಪ್ರಸೆಂಟೇಟಿವ್‌ಗಳು ಹೇಳಿಯಾರು. ಬೇರೆ ದೇಶ, ಬೇರೆ ನಗರ, ಬೇರೆ ಮನೆ ಎಲ್ಲಾ ಅಷ್ಟೆ. ಸಾಮಾನ್ಯವಾಗಿ ‘ಅತ್ಯಂತ ಪ್ರೇಕ್ಷಣೀಯ ಸ್ಥಳ’ ಸುಪ್ರಸಿದ್ಧವಾಗಿರುತ್ತದೆ. ಅದು ಹಲವು ಬಾರಿ ಟೀವಿಯಲ್ಲಿ ಮತ್ತು ಸಿನಿಮಾದಲ್ಲಿ ಕಂಡ, ಪತ್ರಿಕೆ ಪುಸ್ತಕಗಳಲ್ಲಿ ಓದಿದ ಸ್ಥಳವೇ ಆಗಿರುತ್ತದೆ.
ಹಿರಿಯ ಸಾಹಿತಿ ಕೆ.ಟಿ. ಗಟ್ಟಿ ಇಂದು ಮಂಗಳೂರಿನಲ್ಲಿ ನಿಧನರಾಗಿದ್ದು ಅವರು ಕೆಂಡಸಂಪಿಗೆಗೆ ಬರೆದ “ಬಿಸಿಲುಕೋಲು” ಸರಣಿಯ ಕೆಲ ಬರಹಗಳು ನಿಮ್ಮ ಓದಿಗೆ

Read More

ಎಸ್. ನಾಗಶ್ರೀ ಅಜಯ್ ಬರೆದ ಈ ಭಾನುವಾರದ ಕತೆ

ಆಹಹಹಾ, ಯಾಕಮ್ಮಣ್ಣಿ ಬಂದ್ಬಿಡು, ಅಯ್ಯೋ ಅಯ್ಯೋ ಅಯ್ಯೋ…., ಕೇಳಿಸ್ಕೊಂಡ್ಯೇನೋ ಕೆಪ್ರ, ಮನೆಹಾಳಿ, ಗೆಣಸು ಕೀಳು ಹೋಗು, ಚಿನಾಲಿ, ಚಂಗ್ಲು… ಹೀಗೆ ಅವಳ ಶಬ್ದಕೋಶದ ತುಂಬ ಆ ಪಾತ್ರದ ಮಾತುಗಳದ್ದೇ ಪಾರಮ್ಯ. ಕತ್ತೆ, ಕೋತಿ, ಗೂಬೆ ಎನ್ನುವ ಮೂರು ಪದದಿಂದಾಚೆ ಬೈಗುಳವೇ ಆಡಿ, ಕೇಳಿ ಗೊತ್ತಿಲ್ಲದ ಮನೆಯಲ್ಲಿ, ಇವಳ ಈ ಹೊಸ ವ್ಯಾಕರಣ, ಶಬ್ದಕೋಶ ಅಸಮಾಧಾನದ ಹೊಗೆ ಹಬ್ಬಿಸಿತ್ತು.
ಎಸ್ ನಾಗಶ್ರೀ ಅಜಯ್ ಬರೆದ ಈ ಭಾನುವಾರದ ಕತೆ “ಹೆಜ್ಜೆ ಮೂಡದ ಹಾದಿ” ನಿಮ್ಮ ಓದಿಗೆ

Read More

ಕಲಿತ ಬುದ್ಧಿಗಳೇ ನಮ್ಮ ನೆರಳು: ಎಸ್ ನಾಗಶ್ರೀ ಅಜಯ್ ಅಂಕಣ

ಎಷ್ಟೋ ಜನ ಸರಳತೆ, ಸಹೃದಯತೆ, ಸಹನೆ, ಕರುಣೆಯನ್ನು ನಂಬದೆ ಡಂಭಾಚಾರ, ನಾಟಕ, ಕೃತಕತೆ ಎಂಬ ಹಣೆಪಟ್ಟಿ ಕಟ್ಟಿ ಸಂಶಯದಿಂದಲೇ ಎದುರುಗೊಳ್ಳುತ್ತಾರೆ. ಹಣದೊಂದಿಗೆ ಮದ, ಅಧಿಕಾರದೊಂದಿಗೆ ದರ್ಪ, ಶ್ರೀಮಂತಿಕೆಯೊಂದಿಗೆ ಖಾಯಿಲೆ, ಬಡತನದೊಂದಿಗೆ ನೆಮ್ಮದಿ ಇದ್ದಿರಲೇಬೇಕೆಂದು ಭಾವಿಸಿರುತ್ತಾರೆ. ಅತ್ಯಂತ ರಂಜನೀಯವಾಗಿ ಅದನ್ನು ಬಣ್ಣಿಸಿಯೂ ತೋರುತ್ತಾರೆ. ಪ್ರತಿಯೊಬ್ಬ ಮನುಷ್ಯನೂ ಭಿನ್ನ. ಪ್ರತಿಯೊಬ್ಬರ ಪರಿಸ್ಥಿತಿಯೂ ಭಿನ್ನ. ಒಂದೇ ಅಚ್ಚಿನಲ್ಲಿ ಅಳೆದು, ಸುರಿದು ತಯಾರಾದ ಬದುಕಲ್ಲ ಎಲ್ಲರದ್ದು.
ಎಸ್.‌ ನಾಗಶ್ರೀ ಅಜಯ್‌ ಬರೆಯುವ ‘ಲೋಕ ಏಕಾಂತ’ ಅಂಕಣ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್ ಕಥೆ

ಈ ದೃಶ್ಯಕ್ಕೆ ಅನತಿ ದೂರದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆಯುತ್ತಿದೆ. ಲಚ್ಚಣ್ಣನಿಗೆ ಎರಡು ದಶಕಗಳ ಕಾಲ ಈ ಊರಿನಲ್ಲಿ ಅನ್ನದ ವ್ಯಾಪ್ತಿ ತೋರಿಸಿದ್ದ ದೇವಿ ಪ್ರಸಾದ ಹೋಟೆಲಿನ ವಸ್ತ್ರಾಪಹರಣ ಮಾಡುತ್ತಿರುವಂತೆ ನಾಲ್ವರು ಕೆಲಸಗಾರರು ಅದರ ಮಾಡಿನ ಹಂಚುಗಳನ್ನು ಕಳಚಿ ಇಳಿಸುತ್ತಿದ್ದಾರೆ. ಆ ಹೋಟೆಲನ್ನು ಮೂರು ದಶಕಗಳ ಕಾಲ ನಡೆಸಿದ್ದ ಗೋಪಾಲಕೃಷ್ಣ ಮಂಜಿತ್ತಾಯರು ಕೊನೆಯುಸಿರೆಳೆದ ತಾಯಿಯ ಶವದೆದುರು ಶತಪಥ ಹಾಕುವ ಆಘಾತಗೊಂಡ ಮಗನಂತೆ ಅತ್ತಿಂದಿತ್ತ ಹೋಗುತ್ತಿದ್ದಾರೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್‌ ಬರೆದ ಕತೆ “ವಿದಾಯ” ನಿಮ್ಮ ಓದಿಗೆ

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ