Advertisement

Tag: Kannada Novel

ನಮ್ಮೊಳಗೂ ಒಂದು “ಬೌಲ್” ಇದೆಯೇ?: ಬಿ.ಕೆ. ಸುಮತಿ ಬರಹ

ಮನುಷ್ಯ ಬದುಕಿನ ಎಲ್ಲ ಹೋರಾಟಗಳನ್ನೂ ಆರಂಭದ ಬಿಕು ಮತ್ತು ಮಾಲಿಂಗನ ಯುದ್ಧದಲ್ಲಿಯೇ ಕಾಣಬಹುದು. ಆ ಯುದ್ಧ ಒಂದು ಚಿತ್ರಮಾಲಿಕೆಯ ಹಾಗಿದೆ. ವಸ್ತುವನ್ನು ಅಪ್ಪಿಕೊಳ್ಳುವುದು, ಬಿಟ್ಟು ಕೊಡಲು ಹೆಣಗಾಡುವುದು, ಕಿತ್ತುಕೊಳ್ಳುವುದು, ಇದೇ ಅಲ್ಲವೇ ನಮ್ಮ ಹೋರಾಟ? ಶಬ್ದ ನಿಶ್ಶಬ್ದದ ಹೋರಾಟ. ಕೊಟ್ಟು ಬಿಟ್ಟಿದ್ದರೆ ಏನಾಗುತ್ತಿತ್ತು? ಮಾಲಿಂಗನಿಗೆ ಅದನ್ನು ಪಡೆಯುವ ಅರ್ಹತೆ ಇತ್ತೇ? ಬಿಕು ಆನಂದನ ಅಗಲಿಕೆಯಿಂದ ವಿಚಲಿತನಾಗಿ ಬಳಲಿ ನಿತ್ರಾಣನಾಗುವುದು ಏಕೆ? ಬಿಕುವಿನ ಆರೈಕೆಯಲ್ಲಿ ಅರಳಿದ ಸುಮಲತೆ ಆತನನ್ನು ಬಿಟ್ಟು ಹೊರಡಲು ಮನಸ್ಸು ಮಾಡಿದ್ದಾದರೂ ಹೇಗೆ?
ಡಾ. ಎಂ.ಎಸ್.‌ ಮೂರ್ತಿಯವರ “ಬೌಲ್‌” ಕಾದಂಬರಿಯ ಕುರಿತು ಬಿ.ಕೆ. ಸುಮತಿ ಬರಹ

Read More

ವಿಜ್ಞಾನದೊಂದಿಗೆ ಅಧ್ಯಾತ್ಮವೂ ಮಿಳಿತವಾಗುವ ಹೊತ್ತು…

ಕ್ಯಾನ್ಸರ್ ಸುʼನ ದೇಹವನ್ನು ತಿಂದುಹಾಕುವಾಗ ಬಹಳಷ್ಟು ಕೃಶನಾಗುವುದಲ್ಲದೇ ಅಂತಹ ತೀವ್ರ ಗಂಭೀರ ಸ್ಥಿತಿಯಲ್ಲೂ ಸಹಾ “ತಾನು ಯಾರು? ಇಲ್ಲಿ ಯಾಕಿದ್ದೇನೆ?” ಎಂಬ ಆತ್ಮವಿಮರ್ಶೆಗೆ ತೊಡಗಿಕೊಂಡು ಕೊನೆಗೆ ತಾನು ಇಡೀ ವಿಶ್ವಕ್ಕೆ ಸೇರಿದವ, ಬ್ರಹ್ಮಾಂಡದ ಅವಿಭಾಜ್ಯ ಅಂಗ. ಬ್ರಹ್ಮಾಂಡವನ್ನು ನಿಯಂತ್ರಿಸುವ ಶಕ್ತಿಯೇ ನನ್ನನ್ನೂ ನಿಯಂತ್ರಿಸುತ್ತಿದೆ ಎಂಬಂತಹ ಆಲೋಚನೆಗಳು ಉಪನಿಷತ್ತಿನಲ್ಲಿ ಬರುವ “ಯಾವ ಒಂದೇ ದಾರದ ಎಳೆಗಳಿಂದ ಬಟ್ಟೆಗಳು ತಯಾರಾಗುತ್ತದೋ ಅದೇ ತರಹ ಒಂದೇ ಶಕ್ತಿ ಇಡೀ ಸೃಷ್ಟಿಯ ಚರಾಚರದಲ್ಲೂ ಇದೆ” ಎಂಬಂತಹ ಬೌದ್ಧಿಕ ಸ್ತರದಲ್ಲಿ ತನ್ನಾತ್ಮವನ್ನು ವಿಶ್ವಾತ್ಮದೊಂದಿಗೆ ಬೆಸೆದುಕೊಳ್ಳುವ ಚಿಂತನೆಗಳು ಅವನನ್ನು ದಾರ್ಶನಿಕನೆನಿಸುತ್ತದೆ.
ಡಾ. ಪ್ರಸನ್ನ ಸಂತೇಕಡೂರು ಕಾದಂಬರಿ “ಸು” ಕುರಿತು ಕೆ.ಎನ್. ಲಾವಣ್ಯ ಪ್ರಭಾ ಬರಹ

Read More

ಎಲ್ಲ ಆಯಾಮಗಳಲ್ಲೂ ಸಮೃದ್ಧವಾದ “ಎತ್ತರ”

ಇವರೆಲ್ಲರೂ ಹಳೆಕಾಲದ ಟ್ರಂಕಿನೊಳಗೆ ಘಾತುಕ ರಹಸ್ಯವನ್ನು ತಣ್ಣಗೆ ಮಡಚಿಡಬಲ್ಲರು. ಹಾಗೆಯೇ ಮಡಿಲಿನಲ್ಲಿ ಮಲಗಿರುವ ಬೆಕ್ಕಿನ ಮರಿಯನ್ನು ಅತಿ ಅನೌಪಚಾರಿಕವಾಗಿ ಕೆಳಗಿಳಿಸುವಂತೆ ಗುಟ್ಟು ಬಿಟ್ಟುಕೊಡಬಲ್ಲವರು. ರಾಜಕಿಶೋರ, ಸರಳ, ಸುಗುಣೇಶ, ಮಾಧವ ಎಂಬ ಚುಕ್ಕಿಪಾತ್ರಗಳೆಲ್ಲ ಇವನನ್ನು ಸುಳಿಯ ಇನ್ನಷ್ಟು ಒಳಗೆ ಸೆಳೆಯಬಲ್ಲವರು. ಇವರೆಲ್ಲರಿಂದ ಸುತ್ತುವರೆದಿರುವ ಕಥಾನಾಯಕನಿಗೆ ಸಾವಯವ ಸಂಬಂಧದ ತಾದ್ಯಾತ್ಮ ಸಾಧ್ಯವಾಗುವುದು ‘ಒಂದು ಸುತ್ತು ಕಡಿಮೆ’ ಇರುವ ವಿಮಲಾಳೊಂದಿಗೆ. ನಾಣ್ಯ ಅವರ ನಡುವಿನ ಸಂವಾದದ ಭಾಷೆ.
ಇಂದ್ರಕುಮಾರ್ ಎಚ್.ಬಿ. ಯವರ “ಎತ್ತರ” ಕಾದಂಬರಿಯ ಕುರಿತು ಮಮತಾ ಆರ್. ಬರಹ

Read More

ನಿಷೇಧಿತ ಗಿರಿ ನೆತ್ತಿಯಲ್ಲಿ

ಹೀಗೆ ಕಡುಹಿಂಸೆಯಲ್ಲೇ ಹದಿನೈದು ದಿನ ಕಳೆದ ಮೇಲೆ ಕೊನೆಗೊಂದು ದಿನ ಸ್ವತಃ ಮಾಂಟ್ಗೊಮರಿ ಸಾಹೇಬರು, `ಕಾರಕೋರಂ ಶ್ರೇಣಿಯ ಎರಡು ಶಿಖರಗಳ ಅನ್ವೇಷಣೆ ದೊಡ್ಡ ಸಾಧನೆ. ನಂಗಾ ಪರ್ವತದ ವಿವರಗಳನ್ನು ಕಲೆ ಹಾಕಿದ್ದೂ ಸಾರ್ಥಕವಾಯಿತು. ಕಾರಕೋರಂ ಶ್ರೇಣಿಯ ದ್ವಿತೀಯ ಶಿಖರ, ಪೀಕ್ ಹದಿನೈದನ್ನೂ ಮೀರಿಸುವಷ್ಟು ಎತ್ತರ ಇರುವಂತಿದೆ’ ಎಂದು ಹೆಮ್ಮೆಯಿಂದ ಹೇಳಿದ್ದರು. ಉಳಿದವರೂ ತಲೆಯಾಡಿಸಿ ಸಮ್ಮತಿಸಿದ್ದರು. ಅವರ ಸಂಭಾಷಣೆ ಕೇಳಿ, `ಕಾರಕೋರಂ ಕಾಶ್ಮೀರದ ಉತ್ತರದಲ್ಲಿರುವ ಪರ್ವತಶ್ರೇಣಿ ಎಂಬುದು ಯಾರಿಗೆ ಗೊತ್ತಿಲ್ಲ. ಅದರಲ್ಲಿರುವ ಎರಡು ಎತ್ತರದ ಶಿಖರಗಳನ್ನು ಇವರೇ ಶೋಧಿಸಿದರಂತೆ!
ಡಾ. ಗಜಾನನ ಶರ್ಮ ಹೊಸ ಕಾದಂಬರಿ “ಪ್ರಮೇಯ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಫಾರೆಸ್ಟರ್‌ ಪೊನ್ನಪ್ಪ ಮತ್ತು ಕಾಡಿನ ಕೌತುಕಗಳು

ಗಡದ್ದಾಗಿ ತಿಂದು, ಕಾಲು ನೀಡಿ ಲೋಕದ ಪರಿವೇ ಇಲ್ಲದೆ ಗೊರಕೆ ಹೊಡೆಯುತ್ತಿದ್ದ ಸಿದ್ದಣ್ಣನಿಗೆ, ಪೊನ್ನಪ್ಪ ಕಾಲಲ್ಲಿ ಎರಡು ಬಾರಿ ತಿವಿದು ಎಚ್ಚರಿಸಿದ. ಚಕ್ಕನೆ ಎಚ್ಚರಗೊಂಡ ಸಿದ್ದಣ್ಣ, ಮರಗಳ್ಳರು ಬಂದಿದ್ದರಿಂದ ಫಾರೆಸ್ಟರ್ ನನ್ನನ್ನು ಎಬ್ಬಿಸಿರಬಹುದು ಎಂದು ಕಣ್ಣು ಬಿಟ್ಟವನೇ ಗಾಬರಿಯಿಂದ ಸುತ್ತಲೂ ನೋಡತೊಡಗಿದ. ಪೊನ್ನಪ್ಪ ಮೆಲ್ಲನೆ ಅವನ ಕೈಯನ್ನು ಅದುಮಿ, “ಏನೂ ಇಲ್ಲ, ಆತಂಕ ಪಡಬೇಡ, ನಾನು ಸ್ವಲ್ಪಹೊತ್ತು ಮಲಗುತ್ತೇನೆ. ಯಾರಾದರೂ ಬಂದ ಶಬ್ದ ಕೇಳಿಸಿದರೆ ನನ್ನನ್ನು ಎಬ್ಬಿಸು” ಎಂದು ಅವನ ಕಿವಿಯಲ್ಲಿ ಪಿಸುಗುಟ್ಟಿದ.
ನೌಶಾದ್‌ ಜನ್ನತ್ತ್‌ ಹೊಸ ಕಾದಂಬರಿ “ಫಾರೆಸ್ಟರ್‌ ಪೊನ್ನಪ್ಪ” ಇಂದ ಆಯ್ದ ಭಾಗ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ