Advertisement

Tag: Kannada Poetry

ಐವತ್ತು ಪದ್ಯ, ಮೂವತ್ತಮೂರು ವರ್ಷ…: ದೀಪಾ ಗೋನಾಳ ಬರಹ

ಹೀಗೆ ತೇಲಿ ಹೋದ ಮತ್ತು ಕವಿತೆಯಾಗಿ ಉಳಿದು ಹೋದ ಜೀವ ಕೆತ್ತಿದ ಮೆತ್ತನೆ ಪದಗಳು ಬದುಕನ್ನ ಅವನು ಪಳಗಿಸ ಹೊರಟ ದಾರಿ ನಡುವೆ ನಿಂತು ನಕ್ಕ ದಾರಿಗಲ್ಲು. ಆ ಕಲ್ಲಿಗೂ ಕರುಳುಂಟು ಎನ್ನುವ ಅವನೊಳಗಿನ ಜೀವನಪ್ರೀತಿ. ಕವಿ ತಾನು ಇಲ್ಲದಾಗ ನಾವು ಅವನ ಮನೆಗೆ ಹೋದ್ರೆ ಏನು ಮಾಡಬೇಕು ಅಂತ ಹೇಳಿದ್ದಾನೆ, ಹೇಳಿ ಹೋಗಿದ್ದಾನೆ. ಅವನು ಇದನ್ನೆಲ್ಲ ಯಾಕೆ ಮೊದಲೇ ಇಷ್ಟು ನಿಖರವಾಗಿ ಹೇಳಿದ ಅನ್ನೊ ಪ್ರಶ್ನೆ ನನ್ನದು, ಆದರೆ ಅವನು ಹೇಳಿದ ಮಾತಿಗೆ ಬೆರಗೂ ಹಿಂಬಾಲಿಸೋದು ಕಂಡು ಆಶ್ಚರ್ಯವೂ..
ಎರಡು ವರ್ಷಗಳ ಹಿಂದೆ ತೀರಿಕೊಂಡ ಯುವಕವಿ ಅನಿಲ ಹುಲಮನಿ ಅವರ ಕವನ ಸಂಕಲನ “ಹೊಸ ಅಧ್ಯಾಯ”ವನ್ನು ಧಾರವಾಡದ ಕ್ರಾಂತಿ ಪ್ರಕಾಶನ ಪ್ರಕಟಿಸಿದ್ದು, ಈ ಸಂಕಲನದ ಕುರಿತು ದೀಪಾ ಗೋನಾಳ ಬರಹ

Read More

ವಿಜಯಶ್ರೀ ಎಂ. ಹಾಲಾಡಿ ಬರೆದ ಈ ದಿನದ ಕವಿತೆ

“ಅಮ್ಮನ ಹೊಟ್ಟೆಯಲ್ಲಿ
ಒಂಬತ್ತು ತಿಂಗಳು
ಬೆಚ್ಚಗೆ ಬೆಳೆದ
ಮಿದು ಮಿದು
ತನ್ನದೇ
ಹುಟ್ಟು ಬೆತ್ತಲೆ ದೇಹ
ಹೇಗಿದೆ ಈಗ…
ಬೆಳಕಿನಲ್ಲಿ ನೋಡಿಕೊಳ್ಳಲೂ;
ಅಸಡ್ಡೆಯಾಗಿ ರೂಪಾಂತರ ಹೊಂದಿರುವ
ಹಳೆಯ ಭಯ ಹಿಂಜರಿಕೆ ನಾಚಿಕೆ!”- ವಿಜಯಶ್ರೀ ಎಂ. ಹಾಲಾಡಿ ಬರೆದ ಈ ದಿನದ ಕವಿತೆ

Read More

ನೀಲಾಕಾಶದ ನಿಹಾರಿಕೆಗಳ ನೋವು ತಿಳಿದಿರಲಿ…

ಚಾಂದ್ ಪಾಷಾರಿಗೆ ಇರುವ ಸವಾಲೆಂದರೆ ಒಂದು mood ಅಥವಾ ಒಂದು ಹೊಳಹನ್ನು ಎಷ್ಟು ಸಶಕ್ತವಾಗಿ ಹೇಳಬಲ್ಲರೋ ಅದೇ ಸಾಮರ್ಥ್ಯವನ್ನು ಸಂಕೀರ್ಣ ವಸ್ತುವಿನ ನಿರ್ವಹಣೆಯಲ್ಲಿಯೂ ಸಾಧಿಸಬೇಕಾಗುತ್ತದೆ. ಹೇಳಿದ್ದನ್ನು ಚುರುಕಾಗಿ, ಪ್ರಭಾವಿಯಾಗಿ ಹೇಳುವುದು ಎಷ್ಟು ಮುಖ್ಯವೋ ಕಾವ್ಯದಲ್ಲಿ ಒಂದು ಅನುಭವವನ್ನು ಸಾಂದ್ರವಾಗಿ ಗಂಭೀರ ಚಿಂತನೆಯೊಂದಿಗೆ ಅಭಿವ್ಯಕ್ತಿಸುವುದು ಅಷ್ಟೇ ಮುಖ್ಯ. ಈ ಹಿಂದಿನ ಸಂಕಲನಗಳಲ್ಲಿ ಮತ್ತು ಪ್ರಸ್ತುತ ಕೃತಿಯಲ್ಲಿ ಈ ಸಾಮರ್ಥ್ಯದ ಝಲಕುಗಳನ್ನು ಚಾಂದ್‌ ಪಾಷಾ ತೋರಿದ್ದಾರೆ.
ಚಾಂದ್‌ ಪಾಷ ಎನ್.ಎಸ್. ಕವನ ಸಂಕಲನ “ಒದ್ದೆಗಣ್ಣಿನ ದೀಪ”ಕ್ಕೆ ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ

Read More

ಸಮಕಾಲೀನ ತಲ್ಲಣಗಳಿಗೆ ಹೆಗಲುಕೊಡುವ ಕವಿತೆಗಳು

ಮನುಷ್ಯ ಮಾಗಿದಷ್ಟೂ ಅವನ ಬರಹ ಪಕ್ವವಾಗುತ್ತದೆ ಎಂಬ ಮಾತು ಕೆಲವರಿಗೆ ಅಪವಾದವಾಗುತ್ತದೆ. ಸಮಾಜದ ತಲ್ಲಣಗಳಿಗೆ ಸ್ಪಂದಿಸುವ ಕವಿ ಮತ್ತು ಆತನ ಬರವಣಿಗೆಗಳು ಇಂಥ ದುರಿತ ಕಾಲಕ್ಕೆ ಖಂಡಿತ ಅವಶ್ಯಕತೆ ಇದೆ. ವಿಶಾಲ್ ಅವರ ಬರಹದ ನಡಿಗೆಯೂ ಸಮಸಮಾಜದ ನಿರ್ಮಿತಿಯ ಕಡೆಗೇ ಇದೆ. ಒಂದೊಂದು ಕವಿತೆಯಲ್ಲೂ ಅವರೇ ಕಂಡು, ಅನುಭವಿಸಿದ ನೋವುಗಳನ್ನು ಕಾವ್ಯದ ಮೂಲಕ ಹೊರಹಾಕಿದ್ದಾರೆ.
ಅಭಿಷೇಕ್‌ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣದಲ್ಲಿ ವಿಶಾಲ್‌ ಮ್ಯಾಸರ್‌ ಕವನ ಸಂಕಲನ ‘ಬಟ್ಟೆಗಂಟಿದ ಬೆಂಕಿ’ಯ ಕುರಿತ ಬರಹ ಇಲ್ಲಿದೆ

Read More

ಅನ್ವೇಷಣೆ ನಿರತ ಅನವರತ ಚಿತ್ತಪಥದ ಕವಿತೆಗಳತ್ತ…

ನಿಜಾರ್ಥದ ಕವಿ ಗೊತ್ತಿರುವುದನ್ನು ವಿವರಿಸುವುದಿಲ್ಲ, ಅರ್ಥಮಾಡಿಕೊಂಡಿದ್ದನ್ನು ಅರ್ಥಮಾಡಿಸುತ್ತಾನೆ. ಅಸ್ತಿತ್ವದ ಹುಡುಕಾಟ ವ್ಯಸನವಾಗುತ್ತ ಪ್ರೇಮ ಕಾಮ ಕೊನೆಗೆ ಸ್ವಾರ್ಥದೊಂದಿಗೂ ತಾದ್ಯಾತ್ಮ ಸ್ಥಾಪಿತವಾಗದ ಸ್ಥಿತಿಯಲ್ಲಿ ಪದರು ಪದರಾಗಿ ವಿಕಸನಗೊಂಡ ಪ್ರಜ್ಞೆ ಕಣ್ಣಾಮುಚ್ಚಾಲೆಯ ದೈನಿಕಗಳಲ್ಲಿ ಲೀನವಾಗುವ ಕ್ರಮವನ್ನು ಕಾಣಿಸುವ ವಿಶಿಷ್ಟ ಕವನಗಳಿವು. ನಾವೇ ಸೃಷ್ಟಿಸಿಕೊಂಡ ನರಕದಲ್ಲಿ ದೂರುಗಳು ತಪ್ಪೊಪ್ಪಿಗೆಯನ್ನು ಧ್ವನಿಸುತ್ತವೆ.
ಇತ್ತೀಚೆಗಷ್ಟೇ ಬಿಡುಗಡೆಯಾದ ಇಂದ್ರಕುಮಾರ್ ಎಚ್.ಬಿ. ಅವರ “ಬಾವಿಗ್ಯಾನವ ಮರೆತು” ಕವನ ಸಂಕಲನಕ್ಕೆ ಮಮತಾ ಆರ್. ಬರೆದ ಮುನ್ನುಡಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ