Advertisement

Tag: kathe

ಕುದ್ರಿ ಕುದ್ರಿನ…ಕತ್ತಿ ಕತ್ತಿನ….!

ಬೀಜಗಣಿತವನ್ನು ಕಲಿಸುತ್ತಿದ್ದಾಗ ಮೇಷ್ಟ್ರು 4x ಗೆ 3y ಸೇರಿಸಿದರೆ ಎಷ್ಟಾಗುತ್ತದೆ ಎನ್ನುವುದನ್ನು ಅವರೆಷ್ಟು ಬಾರಿ ಅರ್ಥ ಮಾಡಿಸಲು ಪ್ರಯತ್ನಿಸಿದ್ದರು. ಆದರೆ ನಿಷ್ಕ್ರಿಯಗೊಂಡಂತಿದ್ದ ನಮ್ಮ ಮೆದುಳೊಳಗೆ ಇಳಿಯದೆ ನಮ್ಮೆಲ್ಲರ ಉತ್ತರ ‘ಏಳು’ ಎಂದೇ ಇರುತ್ತಿತ್ತು.  ಅವರಿಗೆ ಕೊನೆ ಕೊನೆಗೆ ಕೋಪ ಬಂದರೂ ಅದನ್ನು ತೋರಿಸಿಕೊಳ್ಳದೇ ಭಿನ್ನವಾದ ಉದಾಹರಣೆಯನ್ನು ನೀಡುತ್ತಾ “ಹೆಲೊ ಜೆಂಟಲ್‌ಮೆನ್ಸ್, ನಾಲ್ಕು ಕುದ್ರಿಗಳೊಳಗ ಮೂರು ಕತ್ತಿಗಳನ್ನ ಕುಡಿಸಿದ್ರ ಎಷ್ಟ್ ಆಗ್ತೆತಿ” ಅಂದಾಗಲೂ ನಾವು ಏಳು ಅಂತಲೇ ಒದರಿಬಿಡುತ್ತಿದ್ದೆವು. ನಮ್ಮ ದಡ್ಡತನಕ್ಕೆ ಅವರು ಹಣಿ ಹಣಿ ಜಜ್ಜಿಕೊಂಡು ಮರುಕಪಟ್ಟು “ನಾಲ್ಕು ಕುದ್ರಿಗೆ ಮೂರು ಕತ್ತಿ ಸೇರಿದ್ರ ಏಳು ಆಗಲ್ಲ ಕಣ್ರಲೇ, ಕುದ್ರಿ ಕುದ್ರಿನ… ಕತ್ತಿ ಕತ್ತಿನ…. ಅವು ಯಾವತ್ತು ಒಂದ ಅಲ್ಲ ಎನ್ನುತ್ತಿದ್ದರು. ʻತಳಕಲ್‌ ಡೈರಿʼಯಲ್ಲಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ ಇಸ್ಮಾಯಿಲ್‌ ತಳಕಲ್‌

Read More

ಸವಾರಿ ಹೊರಟಳು ಮಳೆ ಮಹಾರಾಜ್ಞಿ

ಅಲ್ಲಿಯವರೆಗೆ ಹೂವುಗಳೆಲ್ಲ ಮಳೆಮಾಯಿಯನ್ನೇ ಭಜಿಸುತ್ತ, ಮಳೆಗಾಲದಲ್ಲೇ ಅರಳುತ್ತಿದ್ದವು. ಆದರೆ ಒಂದು ದಿನ  ಪುಷ್ಪರಾಜ ತನ್ನವರನ್ನೆಲ್ಲ ಕರೆದು ಆಜ್ಞಾಪಿಸಿದ. “ನೋಡಿ ಹೂಗಿಡಗಳೆ, ಇನ್ನುಮುಂದೆ ನೀವೆಲ್ಲಾ ಬೇಸಿಗೆಯಲ್ಲಿಯೇ ಅರಳಬೇಕು. ಬೇಸಿಗೆಯಲ್ಲಿ ಭೂಮಿಯಮ್ಮ ತುಂಬ ಬಳಲಿರುತ್ತಾಳೆ. ನಮಗೆಲ್ಲ ಆಧಾರವಾಗಿರುವ ಭೂಮಿಯಮ್ಮನಿಗೆ ನಾವು ಸ್ವಲ್ಪವಾದರೂ ಸಂತೋಷವನ್ನು ಮೂಡಿಸಬೇಕು’’ ಎಂದು ಆದೇಶಿಸಿದ.  ಅಂದಿನಿಂದ ಹೂವುಗಳೆಲ್ಲ ಬೇಸಿಗೆಯಲ್ಲಿ ಅರಳಲು ಶುರುವಾದವು. ‘ಹೂ ತುಂಬಿದ ಮರದ ನೆರಳು ಹೂವಿಗಿಂತ ಹಗುರ’ ಎಂದು ಭೂಮಿಯಮ್ಮ ನಕ್ಕಳು. ಮಳೆಮಾಯಿಯ ಸವಾರಿ ಕತೆಯೊಂದನ್ನು ಹೆಣೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ

Read More

ವಿಜಯಶ್ರೀ ಹಾಲಾಡಿ ಬರೆದ ಈ ಭಾನುವಾರದ ಕತೆ

“ಆ ಮುದ್ಕ ಸಂಕ್ರಪ್ಪ ದೇವಮ್ಮಕ್ಕನ ಗಂಡನೇ ಅಲ್ವಂತೆ. ಅವನೂರಾಗೆ ಬ್ಯಾರೆ ಸಂಸಾರ ಅದೆ. ಈವಮ್ಮಂಗೂ ಮಕ್ಕಳು ಮರಿ ಅವೆ. ಈ ವಯಸ್ನಾಗೆ ಈವಪ್ಪನ ಹಿಂದೆ ಓಡ್‌ಬಂದದೆ. ಸಂಕ್ರಪ್ಪಂಗೆ ರಿಟೈರ್ ಆಯ್ತಂತೆ. ಅದಕ್ಕೇ ಈಗ ಆವಯ್ಯನ್ನ ಬಿಟ್ಟು ಇನ್ನೆತ್ಲಾಗೋ ಹೋಗದೆ; ಘಾಟಿ ಹೆಂಗ್ಸು’ ಓನರ್ ಆಂಟಿಯಂತೂ ತಿಂಗಳೊಪ್ಪತ್ತು ಹೊಸರಾಗ, ಹಳೆರಾಗ ಎಲ್ಲವನ್ನೂ ಬೆರೆಸಿ ಹಾಡಿದರು. ಅಷ್ಟೆಲ್ಲ ಅಕ್ಕರೆಯ ಒರತೆಯಾಗಿರುವ ದೇವಮ್ಮಕ್ಕನ ನಿಜ ಬಣ್ಣ ಹೀಗಿರಬಹುದಾ ಎಂಬ ಅಚ್ಚರಿ ಮಲ್ಲಿಕಾಳಿಗೆ. ವಿಜಯಶ್ರೀ ಹಾಲಾಡಿ ಬರೆದ ಕತೆ

Read More

ಡಾ. ಜ್ಯೋತಿ ಬರೆದ ಈ ಭಾನುವಾರದ ಕತೆ

ನಾನು, ಮಕ್ಕಳೊಂದಿಗೆ ಕಾಡು ಮೇಡು ಸುತ್ತುತ್ತಾ ಕಷ್ಟನಷ್ಟ ಅನುಭವಿಸುವಾಗ ಜೊತೆಗಿದ್ದು, ಅಂತೂ ಈಗ ಗದ್ದುಗೆ ಸಿಕ್ಕ ಮೇಲೆ ವೈರಾಗ್ಯ ಮೂಡಿ, ಅಕ್ಕ ಭಾವನ ಹಿಂದೆ ಹೆಜ್ಜೆಯಿಡುವ ನಿರ್ಧಾರ ಮಾಡಿ, ಕಾಡಿನತ್ತ ಮುಖ ಮಾಡಿದೆ. ನನ್ನ ಮಕ್ಕಳಿಗೆ ತಕ್ಷಣ ನಂಬಲಾಗಲಿಲ್ಲ. ಮೊದಲು ನಾನೂ ಹಾಗೆಯೇ ಅಂದುಕೊಂಡಿದ್ದೆ. ಆದರೆ ಕುರುಕ್ಷೇತ್ರ ಯುದ್ಧರಂಗ ನೋಡಿದ ಮೇಲೆ ನನಗೆ ವೈರಾಗ್ಯ ಮೂಡಿತು. ಈ ವೈಭೋಗ, ಒಣ ಪ್ರತಿಷ್ಠೆ ಯಾವುದೂ ನನಗೆ ಬೇಕಿಲ್ಲವೆನಿಸಿತು. -ಡಾ.ಜ್ಯೋತಿ ಬರೆದ ಕತೆ ‘ಕುಂತಿಯ ಮುಸ್ಸಂಜೆ ಮಾತು’ ಇಂದಿನ ಓದಿಗಾಗಿ. 

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಟಿ.ಕೆ. ದಯಾನಂದ ಕತೆ

ಕಷ್ಟಪಟ್ಟು ಎದ್ದು ಗೋಡೆಗೆ ಒರಗಿಕೊಂಡ ಆಕೆ ಕೈ ಸನ್ನೆ ಮಾಡಿ ನೀರು ಕೇಳಿದಳು. ಹತ್ತಿರದಲ್ಲೇ ನಿಂತಿದ್ದ ಹುಡುಗಿಯೊಬ್ಬಳು ನೀರು ತಂದುಕೊಟ್ಟಳು. ನೀರು ಕುಡಿದು ಸುಧಾರಿಸಿಕೊಂಡ ಮೇಲೆ ಆಕೆ ದೊಡ್ಡ ಉಸಿರು ಬಿಟ್ಟು, ‘ಮಗ ಸತ್ತರೆ ತಾಯಿ ಏನು ಹೇಳ್ತಾಳಪ್ಪ. ಮಗ ಸತ್ತ, ಸಾಯಿಸಿದ್ರು’ ಎಂದು ಅಳಲು ಶುರುಮಾಡಿದಳು. ಕಣ್ಣೀರು ಒರೆಸಿಕೊಳ್ಳುತ್ತಾ, ‘ಇನ್ನೊಬ್ಬ ಮಗ ಇದ್ದಿದ್ರೆ ಆ ಪಾಪಿಗಳನ್ನ ಹೊಡೆದುಕೊಂದು ಈ ಸಾವಿಗೆ ಸೇಡು ತೀರಿಸ್ಕೊ ಅಂತ ಹೇಳಬೋದಿತ್ತು. ಆದ್ರೆ ಇದ್ದವ್ನು ಒಬ್ಬನೇ ಮಗ. ಅವನು ವಾಪಸ್ ಬರ್ತಾನಾ’ ಎಂದು ಬರಿಗಣ್ಣುಗಳಿಂದ ಅವನನ್ನು ನೋಡಿದಳು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ