Advertisement

Tag: Kavya Kadame

ಬರವಣಿಗೆ ಎಂಬ ಅಫೀಮು

ಎಲ್ಲರಿಗೂ ಸಮನಾಗಿ ಸಿಗುವ ಇಪ್ಪತ್ನಾಲ್ಕೇ ಘಂಟೆಗಳನ್ನು ಇವರೆಲ್ಲ ತಡೆದು ನಿಲ್ಲಿಸಿದರು ಹೇಗೆ? ಜೀವನಕ್ಕೆ ಬೇಕಾದ ಹಣ ಸಂಪಾದಿಸಿದರು ಹೇಗೆ? ಮನೆಯನ್ನು ತೂಗಿಸಿದರು ಹೇಗೆ? ಅರೆ ಹೊಟ್ಟೆ ಉಂಡೇ ಎಷ್ಟು ರಾತ್ರಿ ಕಳೆದರು? ಅಷ್ಟಾಗಿಯೂ ಒಂದೊಳ್ಳೆಯ ಪುಟ ಬರೆದ ಮೇಲೆ ಅವರ ತುಟಿಯ ಮೇಲೆ ಮೂಡಿದ ಮುಗುಳೆಂಥದು? ಅಪಹಾಸ್ಯಕ್ಕೊಳಗಾದರೇ? ಪ್ರೀತಿಸುವವರಿಂದ ದೂರವಾದರೇ? ಅವರು ತಮ್ಮ ಬರವಣಿಗೆಗಾಗಿ ತೆತ್ತ ಬೆಲೆಯೆಂಥದು? ಕಲೆಯಿಂದ ಸಿಗುವ ಸುಖ ಈ ಎಲ್ಲವನ್ನೂ ಮೀರಿದ್ದೇ?

Read More

ಜಿಂಕೆಗಳು ಕೊಲೆ ಮಾಡಬಲ್ಲವೇ?

ಪೊಲೀಸರು ಊರಿನ ಎಲ್ಲರ ಜೊತೆಗೆ ಯನೀನಾಳನ್ನೂ ವಿಚಾರಣೆಗೆ ಒಳಪಡಿಸುತ್ತಾರೆ. ಯಾರ ಬಳಿಯೂ ಇರದ ಉತ್ತರಗಳು ಯನೀನಾಳ ಬಳಿ ದೊರೆಯುತ್ತವೆ. ಬಿಗ್ ಫೂಟ್ ಅಲ್ಲದೇ ಇತರರ ಕೊಲೆಯಾದ ಸ್ಥಳಗಳಲ್ಲಿಯೂ ಬೇರೆ ಬೇರೆ ತರಹದ ಪ್ರಾಣಿಗಳ ಹೆಜ್ಜೆ ಗುರುತುಗಳು ಕಂಡಿರುತ್ತವೆ. ನಾವೇ ಸಾಧು ಪ್ರಾಣಿಗಳ ಒಳಗಿನ ಕ್ರೌರ್ಯವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲವೇನೋ, ಈ ಎಲ್ಲ ಸಾಧು ಪ್ರಾಣಿಗಳೇ ಒಂದಾಗಿ ಊರಿನ ಜನರನ್ನು ಸಾಯಿಸುತ್ತಿರಬಹುದು ಎಂಬ ವಾದವನ್ನು ಒಪ್ಪಿಸುವ ಯನೀನಾ ಪೊಲೀಸರ ಕುಹಕಕ್ಕೆ ಗುರಿಯಾಗುತ್ತಾಳೆ.
‘ಕಾವ್ಯಾ ಓದಿದ ಹೊತ್ತಿಗೆ’ ಅಂಕಣದಲ್ಲಿ…

Read More

ಅಪರಾಧಕ್ಕೆ ತಕ್ಕ ಶಿಕ್ಷೆ ಅಂದರೇನರ್ಥ?

ಬಿಸಿಲು, ಉಪವಾಸ, ಸುತ್ತಲಿನ ಕೊಳಕು, ದೊಡ್ಡವರ ಸಣ್ಣತನ… ಮುಂತಾದವುಗಳಿಂದ ಅವನು ಬೇಸತ್ತಿದ್ದಾನೆ. ಇವನ ಒಳಿತು ಮತ್ತು ಭವಿಷ್ಯಕ್ಕಾಗಿ ತಂಗಿ ದುನ್ಯಾ ಸಿರಿವಂತನಾದ ಲೂಷನ್‍ನನ್ನು ಇಷ್ಟವಿಲ್ಲದಿದ್ದರೂ ವರಿಸಲು ಸಿದ್ಧವಾಗಿರುವ ವಿಷಯ ಈಗಷ್ಟೇ ಅವನಿಗೆ ತಾಯಿಯ ಪತ್ರದಿಂದ ತಿಳಿದಿದೆ. ಏನನ್ನಾದರೂ ಗಂಭೀರವಾಗಿ ಯೋಚಿಸುವಾಗ ಕೈಕಟ್ಟಿ ಅತ್ತಿಂದಿತ್ತ ಸರಸರನೆ ಓಡಾಡುವ ತಂಗಿಯ ಚಿತ್ರ ಅವನ ಕಣ್ಣ ಮುಂದಿದೆ.
ಕಾವ್ಯಾ ಓದಿದ ಹೊತ್ತಿಗೆ ಅಂಕಣದಲ್ಲಿ ಫ್ಯದೊರ್ ದಾಸ್ತಯೇವ್ಸ್ಕಿಯ ಪ್ರಸಿದ್ಧ ಕಾದಂಬರಿ “ಕ್ರೈಂ ಅಂಡ್‌ ಪನಿಷ್ಮೆಂಟ್‌” ಕುರಿತು ಬರೆದಿದ್ದಾರೆ ಕಾವ್ಯಾ ಕಡಮೆ

Read More

ಹೆಸರು ಧರಿಸಲೊಲ್ಲದ ಅನಾಮಧೇಯರು

ಈ ಮಿಡಲ್ ಸಿಸ್ಟರ್, ಹದಿನೆಂಟು ವರ್ಷದ ಯುವತಿ. ಅವಳಿಗೆ ಪಕ್ಕದೂರಿನಲ್ಲಿ ತನ್ನ ಮತಕ್ಕೆ ಸೇರದ ಒಬ್ಬ ‘ಮೇ ಬಿ’ ಬಾಯ್‍ಫ್ರೆಂಡ್ ಕೂಡ ಇದ್ದಾನೆ. “ನಾನು ಯಾವತ್ತೂ ಹತ್ತೊಂಬತ್ತನೆಯ ಶತಮಾನದ ಕಾದಂಬರಿಗಳನ್ನೇ ಓದುತ್ತೇನೆ, ಇಪ್ಪತ್ತನೆಯ ಶತಮಾನದ ರಾಜಕೀಯದಿಂದ ತಪ್ಪಿಸಿಕೊಳ್ಳಲು ನಾನೇ ಕಂಡುಕೊಂಡ ಶಾಂತಿಮಾರ್ಗವಿದು” ಎನ್ನುವ ಮಿಡಲ್ ಸಿಸ್ಟರ್ ಮನೆಯಿಂದ ಕೆಲಸಕ್ಕೆ, ಕೆಲಸದಿಂದ ಮನೆಗೆ ಸಾಗುವ ರಸ್ತೆಯಲ್ಲಿ ಪುಸ್ತಕ ಓದುತ್ತ ನಡೆಯುತ್ತಾಳೆ. ಓದುವ ಸಂಸ್ಕೃತಿ ಇರದ, ಅಷ್ಟೇನೂ ವಿದ್ಯಾವಂತರಿಲ್ಲದ ಈ ಪ್ರಾಂತ್ಯದಲ್ಲಿ ಅವಳ ಈ ವಿಚಿತ್ರ ಹವ್ಯಾಸಕ್ಕೆ ಮೂಗು ಮುರಿಯುವವರೇ ಎಲ್ಲ.
ಕಾವ್ಯಾ ಓದಿದ ಹೊತ್ತಿಗೆ ಅಂಕಣ.

Read More

ಯೂಲಿಸಿಸ್ ಕಾದಂಬರಿಗೆ ಶತಮಾನದ ಮೆರುಗು

ಇಂಗ್ಲೀಷ್ ಭಾಷೆಯ ಅತಿ ಕ್ಲಿಷ್ಟ ಕಾದಂಬರಿ ಎಂದೇ ಹೆಸರುವಾಸಿಯಾಗಿರುವ ಜೇಮ್ಸ್ ಜಾಯ್ಸ್‌ರ ಯೂಲಿಸಿಸ್ ಬಗ್ಗೆ ಎಷ್ಟು ಬರೆದರೂ ಸಾಕಾಗದೇನೋ. ಹದಿನೆಂಟು ಖಂಡಗಳಲ್ಲಿ ಒಂದೊಂದು ಅಧ್ಯಾಯವನ್ನೂ ಒಂದೊಂದು ಶೈಲಿಯಲ್ಲಿ ಬರೆಯಲಾಗಿದೆ. ಒಂದು ಚಾಪ್ಟರ್ ಸ್ವಗತದ ಶೈಲಿಯಲ್ಲಿದ್ದರೆ ಇನ್ನೊಂದು ಪ್ರಶ್ನೋತ್ತರದ ಮಾದರಿಯಲ್ಲಿದೆ. ಮತ್ತೊಂದು ನಾಟಕದ ಶೈಲಿಯಲ್ಲಿದೆ ಎನ್ನುವ  ಕಾವ್ಯಾ ಕಡಮೆ , ಈ ಓದು ಸುಲಭಕ್ಕೆ ದಕ್ಕುವಂತಹುದಲ್ಲ ಎನ್ನುತ್ತಾರೆ.  1922ನೇ ಇಸವಿಯಲ್ಲಿ ಪ್ಯಾರಿಸ್ಸಿನ ಶೇಕ್ಸ್‌ಪಿಯರ್…

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ