Advertisement

Tag: KS Narasimhaswamy

ಕೆ. ಎಸ್.ನ ಅವರ ಕವಿತೆಗಳಲ್ಲಿ ಮಣ್ಣಿನ ಹಾಡು

‘ನಿನ್ನ ಕಾಣದೆಯೆ ಬೆಳೆದೆ, ನಾ ಕಂಡಿಹೆ ತಾಯ ಸಂಪ್ರೀತಿಯನು ಚೆಲುವನು’ ಎನ್ನುವ ನಿರೂಪಕನಿಗೆ ತಂದೆ ಇಲ್ಲಿ ಅದೃಶ್ಯ ವ್ಯಕ್ತಿ ಅಥವಾ ಯಾವಾಗಲಾದರೊಮ್ಮೆ ಕಂಡರೂ, ಮಗ ‘ಕೈಬೀಸಿ ಕರೆದರೂ ರಾಜಾಧಿರಾಜನೆನ್ನುವ ಸೊಕ್ಕಿನಿಂದ’ ಮಗನ ಮೈಮುಟ್ಟದೆಯೇ ನಡೆವನು. ಆದರೆ ತಾಯಿಯಾದರೋ ‘ಮರುಭೂಮಿಯಲಿ ಮುಗಿಲ ತೊಟ್ಟಿಲ ಕಟ್ಟಿ, ಹಿಮ ಬೆಂಕಿ ಬಿರುಗಾಳಿ’ ಯ ವಿಕೋಪದ ನಡುವೆಯೂ ಹರುಷದಿಂದ ಅಮೃತವನ್ನೇ ಸೋಸಿ ಪೊರೆದವಳು.
ಇಂದು ಕವಿ ಕೆ.ಎಸ್. ನರಸಿಂಹಸ್ವಾಮಿಯವರ ಕವಿತೆಗಳ ಕುರಿತು ಗಿರಿಜಾ ಶಾಸ್ತ್ರಿ ಬರಹ

Read More

‘ಶಿಲಾಲತೆ’ಯಲ್ಲಿ ಪದುಮಳ ಬಳೆಗಳ ದನಿಯಿಲ್ಲವಲ್ಲ

ಕೆ.ಎಸ್. ನರಸಿಂಹ ಸ್ವಾಮಿ ಅವರು ಪ್ರೇಮಕವಿಯಾಗಿ ಸುಪ್ರಸಿದ್ಧರಾದರೂ ಅವರು ಬದುಕಿನ ಜಿಜ್ಞಾಸೆಗಳ ಬಗ್ಗೆ, ಅಧ್ಯಾತ್ಮದ ಕುರಿತು, ಇತರ ಸಂದಿಗ್ಧಗಳ ಕುರಿತು ಎಷ್ಟೊಂದು ಕವಿತೆಗಳನ್ನು ಬರೆದಿದ್ದಾರೆ. ಅವರ ಕಾವ್ಯ ಸರಳವಾಗಿತ್ತು, ರಮ್ಯವಾಗಿತ್ತು, ಕನಸುವಂತಿತ್ತು… ಎಲ್ಲಿಯವರೆಗೆ? ಶಿಲಾಲತೆಯವರೆಗೆ. ಅಲ್ಲಿಂದ ನರಸಿಂಹಸ್ವಾಮಿ ಕಠಿಣರಾಗುತ್ತಾ ಹೋದರು, ಪ್ರತಿಮೆಗಳಲ್ಲಿ ಮಾತನಾಡಲಾರಂಭಿಸಿದರು. ಅವರ ಜನ್ಮದಿನವಾದ ಇಂದು, ಅವರ ಬಹು ಪ್ರಸ್ತಾಪಿತ ಕವನಗಳನ್ನು ಬಿಟ್ಟು ‘ಶಿಲಾಲತೆ’ಯ ನಲವತ್ತರ ಚೆಲುವೆಯ ಬಗ್ಗೆ ವಿಶ್ಲೇಷಣಾ ಬರಹ ಬರೆದಿದ್ದಾರೆ ಲೇಖಕಿ ಮಾಲಿನಿ ಗುರುಪ್ರಸನ್ನ.

Read More

‘ಹೂವು-ಹೆಣ್ಣು’ ಕೆ.ಎಸ್.ನ. ಹುಟ್ಟಿದ ದಿನ ಅವರದೇ ಒಂದು ಕವನ

ಕೆ.ಎಸ್. ನರಸಿಂಹಸ್ವಾಮಿಯವರ ಹುಟ್ಟುಹಬ್ಬರ ಪ್ರಯುಕ್ತ “ಮೌನದಲಿ ಮಾತ ಹುಡುಕುತ್ತ” ಸಂಕಲನದಿಂದ ಆರಿಸಿರುವ ಈ ಕವನ ಕೆಂಡಸಂಪಿಗೆಯ ಓದುಗರಿಗಾಗಿ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ