Advertisement

Tag: KV Thirumalesh

ಪ್ರಜ್ಞೇನ ಸುಪ್ತಪ್ರಜ್ಞೆ ಓವರ್ ಟೇಕ್ ಮಾಡಿದೆ…..

ಮನಸ್ಸಿನ ಅಹಂಕಾರ ಮೊದಲು ಅಮಲು ಆನಂತರ ಚಟ ನಂತರ ಅಧೋಗತಿ. ಈ ಅಧೋಗತಿ ಎಂಬ ಹಂತ ಅಲ್ಲಿಯವರೆಗೆ ವ್ಯಕ್ತಿ ಪರಿವರ್ತನೆ ಆಗಲಿಲ್ಲ ಎಂದರೆ ಆತ ವೃತ್ತಿ, ವೈಯಕ್ತಿಕ ಎರಡೂ ಕಡೆ ಮುಳುಗಿದಂತೆಯೇ ಸರಿ. ಇಲ್ಲಿ ಮೊಹಂತಿ ಹೆಂಡತಿಗೆ ವಿಚ್ಛೇದನ ಕೊಡುತ್ತಾನೆ. ಆಕೆ ನೀರಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಳ್ಳಲು ನೇರ ಕಾರಣನಾಗುತ್ತಾನೆ. ಆನಂತರ ಇತರ ಮಕ್ಕಳನ್ನು ನೋಡಿ ನನಗೂ ಇದ್ದಿದ್ದರೆ ಅನ್ನುವುದು, ಅವಳು ಇನ್ನೊಮ್ಮೆ ಬಂದರೆ ಚೆನ್ನಾಗಿ ನೋಡಿಕೊಳ್ಳುವುದಾಗಿ ಕೇವಲ ಮನಸ್ಸಿನಲ್ಲಿ ಮಾತ್ರ ತೀರ್ಮಾನ ಮಾಡಿಕೊಂಡರೆ ಸಾಕೆ ಅದನ್ನು ಬಾಯಂಗಳದಲ್ಲೇ ಇರಿಸಿಕೊಂಡರೆ ಎದುರಿಗಿರುವವರ ಮನದಂಗಳ ತಲುಪುವುದು ಹೇಗೆ?
ಕೆ.ವಿ. ತಿರುಮಲೇಶರ ಕಾದಂಬರಿಗಳ ಕುರಿತು ವಿಶ್ಲೇಷಿಸಿದ್ದಾರೆ ಸುಮಾವೀಣಾ

Read More

“ಅಕ್ಷಯ ಕಾವ್ಯ”ಕ್ಕೆ ಒಂದು ಪ್ರವೇಶಿಕೆ

“ನೋಡಿ ಅವ ಎದ್ದೇ ಬಿಟ್ಟ. ನಾನಿನ್ನು ಕೂತಿರಲು ಸಾಧ್ಯವೇ ಇಲ್ಲ” ಎಂಬ ಸಾಲು ಅಥವಾ ಧ್ವನಿಯು ಏನೆಂದರಿಯದೆ ಏಕೆಂದರಿಯದೆ ಕಚ್ಚಾಡುವ ಮಂದಿಯ ತವಕ, ತಲ್ಲಣ ಮತ್ತು ದಮನಕಾರಿ ಮನೋವೃತ್ತಿಯನ್ನು ಬಯಲಿಗೆಳೆಯುತ್ತದೆ. ಈ ಕಾವ್ಯಕ್ಕೆ ಮನುಷ್ಯರ ಮನಸ್ಸಿನ ಮೂಲ ರಾಗ ಭಾವಗಳ ಕುರಿತು ವಿವಿಧ ನೆಲೆಗಳಲ್ಲಿ ಚಿಂತನೆಗೊಳಪಡಿಸುವ ಧ್ವನಿ ಪ್ರಾಪ್ತವಾಗಿದೆ. ಇಂಗ್ಲೆಂಡಿನಿಂದ ತಂದ ಮಿರಮಿರ ಮಿಂಚುವ ಸ್ವಚ್ಛ ಬೂಟುಗಳು ಊರಿನ ಕೊಳೆತ ಸಸ್ಯಾವಳಿಯ, ನೊಣ ಹಾರುವ ಗಲೀಜು ಬೀದಿಗೆ ಹೊಂದಲಾರದ ಪರಿಸ್ಥಿತಿಯು ಹಳ್ಳಿ ನಗರಗಳ ನಡುವಿನ ಬಿರುಕನ್ನು ಒಂದೇ ಮಾತಿನಲ್ಲಿ ವಿವರಿಸುತ್ತದೆ.
ಕೆ.ವಿ. ತಿರುಮಲೇಶರ ‘ಅಕ್ಷಯ ಕಾವ್ಯ’ ಕೃತಿಯ ಕುರಿತು ಡಾ. ಸುಭಾಷ್‌ ಪಟ್ಟಾಜೆ ಬರಹ

Read More

ಅನೇಕಾನೇಕ ಹೊಳಹುಗಳು….

ಯಾರೂ ಇಲ್ಲದೇ ಇರುವ ಸ್ಥಳದಲ್ಲಿ ತನ್ನದೇ ಹೆಜ್ಜೆಯನ್ನು ಇನ್ಯಾರದೋ ಎಂದು ನೋಡುವುದು ಒಂಟಿತನ ಸ್ಥಿರವಲ್ಲ ಕಷ್ಟ ಎಂಬುದನ್ನು ಅರ್ಥೈಸುತ್ತದೆ. ವಿಶಾಲ ಬದುಕಿನಲ್ಲಿ ಆಸೆ ಇರಿಸಿಕೊಂಡವನು ಇರುವ ಚಾಕುವಿನಲ್ಲಿಯೇ ಬೇಟೆಯಾಡುವ ಅಭ್ಯಾಸ ಪ್ರಾರಂಭಿಸುತ್ತಾನೆ ಪ್ರಯೋಗಕ್ಕೂ ಅಭ್ಯಾಸಬಲವಿರಬೇಕು ಎಂಬುದು ಇಲ್ಲಿ ಸಾಬೀತಾಗುತ್ತದೆ. ಅಂತರಾಷ್ಟ್ರೀಯ ಗುಪ್ತಚರ ಬಳಗದವನು ನಾನು ಹಾಗೆ….! ನಾನು ಹೀಗೆ….!
ಕೆ.ವಿ. ತಿರುಮಲೇಶರ “ಅನೇಕ” ಕಾದಂಬರಿಯ ಕುರಿತು ಸುಮಾವೀಣಾ ಬರಹ

Read More

ತೀರಿಹೋದ ತಿರುಮಲೇಶರ ಕುರಿತು

ಇದೇನು ನನ್ನ ವೈಯುಕ್ತಿಕ ಅನಿಸಿಕೆ ಅಲ್ಲ. ಕಾವ್ಯ ಪ್ರತಿಭೆಯ ಜೊತೆಜೊತೆಗೇ ಅದರ ದುಪ್ಪಟ್ಟು ವ್ಯಾಮೋಹಗಳೂ ಇದ್ದರೆ ಮಾತ್ರ ಕವಿಗಳು ಇಂತಹ ಖಿನ್ನತೆಗಳಿಂದ ಪಾರಾಗುತ್ತಾರೆ ಎಂದು ನಾನು ಯೌವನದಲ್ಲಿ ಓದಿರುವ ಸಂಸ್ಕೃತ ಕಾವ್ಯಮೀಮಾಂಸೆಗಳು ಹೇಳಿದ್ದವು. ಬಹುಶಃ ತಿರುಮಲೇಶರು ಪಾಶ್ಚಾತ್ಯ ಕಾವ್ಯ ಮೀಮಾಂಸೆಗೆ ಹೆಚ್ಚು ಒತ್ತುಕೊಟ್ಟಿದ್ದರು ಅನಿಸುತ್ತದೆ ಇರಲಿ ಬಿಡಿ.
ಕೆ.ವಿ. ತಿರುಮಲೇಶರ ಕುರಿತು ಅಬ್ದುಲ್‌ ರಶೀದ್‌ ಬರಹ ನಿಮ್ಮ ಓದಿಗೆ

Read More

ಇಲ್ಲೇ ಇದ್ದವರು ಇನ್ನಿಲ್ಲವಾದರು…

ಹೈದರಾಬಾದ್‌ನ ಲೋಕಲ್ ಟ್ರೇನ್‌ಗಗಳಲ್ಲಿ ಸುತ್ತಿದ, ರಸ್ತೆಬದಿ ನಿಂತು, ಕೆಂಡದಲ್ಲಿ ಕಾಯಿಸಿದ ಮುಸುಕಿನ ಜೋಳ ತಿನ್ನುವ, ಭಾನುವಾರದ ಫುಟ್‌ಪಾತ್ ಪುಸ್ತಕಗಳ ಅಂಗಡಿಗಳನ್ನು ಆಸಕ್ತಿಗಳಿಂದ ತಿರುಗುತ್ತ ಪುಸ್ತಕ ಕೊಳ್ಳುವ, ಹೈದರಾಬಾದನ್ನು, ಇಲ್ಲಿಯ ಕನ್ನಡ ಸಂಘಗಳನ್ನು, ಕನ್ನಡಿಗರನ್ನು, ಬಹಳ ಆಸ್ಥೆ – ಅಕಾರಾಸ್ಥೆಗಳಿಂದ ಪ್ರೀತಿಸುವ, ಆ‌ ಮಹಾನ್ ಚೇತನಕ್ಕೆ, ಕಣ್ತುಂಬಿದ ವಿದಾಯ ಹೇಳುವುದನ್ನು ಬಿಟ್ಟು, ಬೇರೇನು ಉಳಿದಿದೆ!!
ಕೆ.ವಿ. ತಿರುಮಲೇಶರ ಕುರಿತು ಗೋನವಾರ್ ಕಿಶನ್ ರಾವ್ ಆಪ್ತ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ