Advertisement

Tag: Maruthi Gopikunte

ಒಂಟಿತನ, ಖೋಖೋ, ಕಪ್ಪುಬಿಳುಪಿನ ಗಾಂಧಿ ಚಿತ್ರ: ಮಾರುತಿ ಗೋಪಿಕುಂಟೆ ಸರಣಿ

ಮೊದಮೊದಲು ಮೂವತ್ತು ನಲವತ್ತು ಸೆಕೆಂಡ್‌ಗಳಲ್ಲಿ ಔಟಾಗುತ್ತಿದ್ದ ನಾನು ಕ್ರಮೇಣ ಆಟದ ಪಟ್ಟುಗಳನ್ನು ತಿಳಿದುಕೊಂಡು ಒಂದೊಂದೆ ಕಲಿಯುತ್ತಾ ಹೋದೆ. ದಿನಕಳೆದಂತೆ ಎರಡು ನಿಮಿಷ ಓಡುವಷ್ಟರ ಮಟ್ಟಿಗೆ ತರಬೇತಾದೆ. ಹಂತ ಹಂತವಾಗಿ ಆಡುತ್ತಾ ಮೊದಲನೆ ಬ್ಯಾಚ್‌ಗೆ ಶಿಫ್ಟಾದೆ. ಕೊನೆಗೆ ಗಂಡು ಮಕ್ಕಳ ಖೊಖೋ ಪಂದ್ಯಕ್ಕೆ ಕ್ಯಾಪ್ಟನ್ ಆಗುವಷ್ಟರಮಟ್ಟಿಗೆ ಪ್ರಾವೀಣ್ಯತೆ ಪಡೆದೆ.
ಮಾರುತಿ ಗೋಪಿಕುಂಟೆ ಬರೆಯುವ ಸರಣಿ

Read More

ಕೇರಿಯ ಕುಟುಂಬವೊಂದರ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಪಕ್ಕದ ಊರಿಗೆ ಒಂದೆರಡು ಬಾರಿ ಹೋದಾಗ ಅವರ ಮನೆಗೆ ನಾವು ಹೋಗಿದ್ದೆವು. ಆದರೆ ಹಿರಿಮಗ ಪಾಂಡುರಂಗನ ಮೇಲೆ ಬಹಳಷ್ಟು ಜವಾಬ್ದಾರಿ ಇತ್ತು. ಆತ ದುಡಿದ… ದುಡಿಯುತ್ತಲೆ ಇದ್ದ. ತಂಗಿಯ ಮದುವೆಯನ್ನು ಬಹಳ ಜೋರಾಗಿಯೆ ಮಾಡಿದ. ವ್ಯಾಪಾರ ಚೆನ್ನಾಗಿಯೇ ನಡೆಯುತ್ತಿತ್ತು. ತಮ್ಮನ ಮದುವೆಯೂ ಆಗಿ ಆತ ಬೇರೆಯಾದನು. ಪಾಂಡುರಂಗ ಎಲ್ಲ ಜವಾಬ್ದಾರಿಗಳ ನಡುವೆ ಒಂದಿಷ್ಟು ಸಾಲಗಾರನಾದ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಇಪ್ಪತ್ತಾರನೆಯ ಕಂತು ನಿಮ್ಮ ಓದಿಗೆ

Read More

ನೆನಪುಗಳ ಬುತ್ತಿ “ನನ್ನ ಮನೆ”: ಮಾರುತಿ ಗೋಪಿಕುಂಟೆ ಸರಣಿ

ಮನೆ ನೆನೆದರೆ ಸಾಕು ಬಾಲ್ಯದ ಸಿಹಿ ಕಹಿ ಘಟನೆಗಳೆಲ್ಲ ನಮ್ಮ ಕಣ್ಣ ಮುಂದೆ ಹಾದುಹೋಗುತ್ತವೆ. ನಮ್ಮದು ಹಳೆಯ ಕಾಲದ ನಮ್ಮ ತಾತ ಕಟ್ಟಿಸಿದ ಜಂತಿಮನೆ ಮೊದಮೊದಲು ಅದು ಸಗಣಿಯಿಂದ ಶೃಂಗಾರವಾಗುತ್ತಿದ್ದದ್ದು ಕ್ರಮೇಣ ಅದಕ್ಕೆ ಗಾರೆ ಹಾಕಲಾಯಿತು. ಮರಳು ಮತ್ತು ಸುಣ್ಣವನ್ನು ಒಟ್ಟಿಗೆ ಅರೆದು ಕಲಸಿ ಅದನ್ನು ಹಾಸುನೆಲಕ್ಕೆ ನುಣುಪಾದ ಕಲ್ಲಿನಿಂದ ಉಜ್ಜಿ ಉಜ್ಜಿ ನೆಲಕ್ಕೆ ಅಂಟುವಂತೆ ಮಾಡುತ್ತಿದ್ದರು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಸಾಕುಪ್ರಾಣಿಗಳ ಒಡನಾಟದ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಒಂದು ಸಾರಿ ಅವರ ಮನೆಗೆ ಹಬ್ಬಕ್ಕೆಂದು ಹೋದಾಗ ಹಠಮಾಡಿ ಎರಡು ಪಾರಿವಾಳವನ್ನು ತಂದೆ. ನಮ್ಮ ಮನೆಯ ಹೊರಭಾಗದಲ್ಲಿ ನಾಲ್ಕು ಗೋಡೆಯನ್ನಷ್ಟೆ ಕಟ್ಟಿ ಬಚ್ಚಲು ಮನೆ ಎಂದು ಕರೆಸಿಕೊಳ್ಳುತ್ತಿದ್ದ ಬಚ್ಚಲು ಮನೆಯ ಮೂಲೆಯಲ್ಲಿ ಕಲ್ಲುಗಳಿಂದಲೆ ಗೂಡೊಂದನ್ನು ಕಟ್ಟಿ ಅದರಲ್ಲಿ ಎರಡು ಪಕ್ಷಿಗಳನ್ನು ಬಿಟ್ಟು ಸಾಕವುದೆಂದು ತೀರ್ಮಾನಿಸಿದೆ. ಆದರೆ ಅವು ಗುಂಪಿನಲ್ಲಿ ವಾಸವಾಗಿದ್ದರಿಂದ ಒಂದು ವಾರದಲ್ಲೆ ಒಂದು ಪಕ್ಷಿ ಸತ್ತೆಹೋಯಿತು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಹತ್ತೊಂಭತ್ತನೆಯ ಕಂತು

Read More

ಅಲ್ಪ ಕಾಲದ ಗೆಳೆಯರು: ಮಾರುತಿ ಗೋಪಿಕುಂಟೆ ಸರಣಿ

ಅವನು ಎರಡೂ ಬ್ಯಾಟುಗಳನ್ನು ನನಗೆ ಕೊಟ್ಟ. ಆ ಬ್ಯಾಟುಗಳೊಂದಿಗೆ ಮನೆಯಲ್ಲಿ ತಮ್ಮನೊಂದಿಗೆ ಆಡುತ್ತಿದ್ದೆ. ಹದಿನೈದು ದಿನವಾದರೂ ಶಾಲೆಗೆ ಆತ ಬರಲಿಲ್ಲ. ಹೊಸದುರ್ಗದ ಕಡೆ ಯಾವುದೊ ಊರಿಗೆ ಹೋದರು ಅಂತ ಗೊತ್ತಾಯ್ತು. ಅಲ್ಲಿನ ಶಾಲೆಗೆ ನೇರವಾಗಿ ವರ್ಗಾವಣೆ ಪತ್ರವನ್ನು ತರಿಸಿಕೊಂಡಿದ್ದರು. ಅಯ್ಯೋ ಆತನ ಪೂರ್ಣ ವಿಳಾಸವು ಇರಲಿಲ್ಲ. ಶಾಲೆಯಲ್ಲಿ ಕೇರಾಫ್‌ ವಿಳಾಸವನ್ನೆ ಕೊಟ್ಟಿದ್ದರು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಹದಿನೆಂಟನೆಯ ಕಂತು

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ