Advertisement

Tag: Nagashree Ajay

ಸಂತೃಪ್ತಿಯೆನ್ನುವುದು ಅಂತರಂಗದ ಸಮಾಚಾರ: ನಾಗಶ್ರೀ ಅಜಯ್‌ ಅಂಕಣ

ಪ್ರತಿ ಸಣ್ಣ ವಿಷಯವನ್ನು ದೊಡ್ಡದಾಗಿ ಚಿಂತಿಸುತ್ತಾ, ಹಳಹಳಿಕೆಯನ್ನೇ  ವ್ಯಸನವಾಗಿಸಿಕೊಂಡವರು, ಇರುವಷ್ಟು ಕಾಲ ತೃಪ್ತಿಯಿಂದ ಬದುಕುವವರು,ಸಾಧಕರು, ಸಾಮಾನ್ಯರು, ಪೀಡಕರು, ಪುಣ್ಯಕೋಟಿಯಂತಹವರು ಹೀಗೆ ತರಹೇವಾರಿ ಜನರು. ಒಬ್ಬೊಬ್ಬ ವ್ಯಕ್ತಿಗೆ ಒಂದೊಂದು ರೀತಿಯ ಸಮಸ್ಯೆಗಳಿದ್ದೇ ಇರುತ್ತವೆ. ಆದರೆ  ಹಳ್ಳಿಯವರೆಲ್ಲ ಮುಗ್ಧರು, ಸಿಟಿಯವರೆಲ್ಲ ಸ್ಥಿತಿವಂತರು, ಓದಿದವರು ಪೆದ್ದರು, ಕಡಿಮೆ ಓದಿದವರು ವ್ಯವಹಾರ ಚತುರರು, ಮಕ್ಕಳೆಲ್ಲಾ ದೇವರಂತಹವರು…. ಈ ರೀತಿಯ ಜನಪ್ರಿಯ ಕುರುಡು ನಂಬಿಕೆಗಳ ಪಟ್ಟಿಯಲ್ಲಿ ಹಿರಿಯರೆಲ್ಲ ಒಂದೇ ಎಂಬುದು ಕೂಡ ಸೇರಿದೆ ಅಲ್ಲವೆ. ನಾಗಶ್ರೀ ಅಜಯ್‌ ಬರೆಯುವ ಲೋಕ ಏಕಾಂತ ಅಂಕಣದಲ್ಲಿ ಹೊಸ ಬರಹ ಇಂದಿನ ಓದಿಗೆ.

Read More

ಸೋಕಿದ ಕಹಿಯನ್ನು ಒಳಗಿಳಿಸಿಕೊಳ್ಳದೆ, ಸಿಹಿಯನಷ್ಟೇ ಹಂಚುತ್ತಾ….

೫೭ ವರ್ಷಗಳ ತಮ್ಮ ಬದುಕಿನ ಪಯಣದ ಬಗ್ಗೆ ಅವರ ಮಾತಿನಲ್ಲಿ ಸಂತೃಪ್ತಿಯಿತ್ತು. ಸವಾಲು, ಸಮಸ್ಯೆ, ಸಣ್ಣತನ, ಮೋಸ, ರಾಜಕೀಯಗಳ ಬಗ್ಗೆ ಒಂದು ಶಬ್ದವನ್ನೂ ವ್ಯಯಿಸದೆ, ತಮ್ಮ ಜ್ಞಾನ, ಉದಾತ್ತ ವಿಚಾರಗಳು, ಸಕಾರಾತ್ಮಕ ಸಂಗತಿಗಳ ಬಗ್ಗೆ ನಿರರ್ಗಳವಾಗಿ ಮಾತನಾಡಿದರು. ಅಲ್ಲಿ ಕೃತಕತೆಗೆ, ಕೃತ್ರಿಮಕ್ಕೆ ಆಸ್ಪದವೇ ಇರಲಿಲ್ಲ. ಅವರೊಳಗಿನ ಶುದ್ಧ ಆನಂದವನ್ನು ಸುತ್ತ ಪಸರಿಸುವ ಬೆಳಕಿನ ನದಿಯಂತೆ ಹರಿದರು. ಮಾತಾಡಿದರು. ನೃತ್ಯ ಮಾಡಿದರು. ಅದೊಂದು ಅನಿರ್ವಚನೀಯ ಅನುಭವ.
ಎಸ್. ನಾಗಶ್ರೀ ಅಜಯ್‌ ಬರೆಯುವ “ಲೋಕ ಏಕಾಂತ” ಅಂಕಣ

Read More

ಎಲ್ಲರೊಳಗೊಂದಾಗುವ ಕಲೆಯ ಕಲಿಯುತಾ….

ನೀವು ಯಾರೊಂದಿಗೆ ಮಾತಾಡದಿದ್ದರೂ ಪರವಾಗಿಲ್ಲ. ಚೆನ್ನಾಗಿ ಓದಿ ಒಳ್ಳೆಯ ಪದವಿ ಪಡೆಯಬೇಕು. ಊರ ಉಸಾಬರಿಗೆ ತಲೆಕೊಡುವುದು ಬಿಟ್ಟು ನಿನ್ನ ಜೀವನ ನೀನು ನೋಡಿಕೋ. ಅವರ ಮನೆಯಲ್ಲಿ ಸಾವಾಗಿದ್ದರೆ ಏನಂತೆ? ನಿನ್ನದೆಷ್ಟೋ ಅಷ್ಟರಲ್ಲಿರು. ಯಾವುದಕ್ಕೂ ಮುನ್ನುಗ್ಗಿ ತಲೆಕೊಡಬೇಡ. ಅಂಟಿಯೂ ಅಂಟದಂತೆ ಇರುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಹೆಚ್ಚು ಮಾತಿಲ್ಲದೆ ನಾಜೂಕಾಗಿ ಪರಿಸ್ಥಿತಿಯಿಂದ ಬಿಡಿಸಿಕೊಳ್ಳಬೇಕು.
ಎಸ್. ನಾಗಶ್ರೀ‌ ಅಜಯ್‌ ಬರೆಯುವ “ಲೋಕ ಏಕಾಂತ” ಅಂಕಣದಲ್ಲಿ ಹೊಸ ಬರಹ

Read More

ನಾಗಶ್ರೀ ಅಜಯ್‌ ಹೊಸ ಅಂಕಣ ಲೋಕ ಏಕಾಂತ ಆರಂಭ

ಮನೆ, ನೆಂಟರಿಷ್ಟರು, ಎಫ್ ಬಿ ಯಲ್ಲಿ ಸಾವಿರಾರು ಸ್ನೇಹಿತರು, ಸಹೋದ್ಯೋಗಿಗಳು ಹೀಗೆ ಪರಿಚಿತರ ಸಂಖ್ಯೆ ಹೆಚ್ಚಿರಬಹುದು. ಆದರೆ ನಮ್ಮ ಅಂತರಂಗದ ಪಿಸುಮಾತಿಗೆ ಕಿವಿಯಾಗುವವರು, ದುರ್ಬಲ ಘಳಿಗೆಯಲ್ಲಿ ಹೆಗಲಾಗುವವರು, ನೀನೇನೇ ಆಡಿದರೂ, ಮೌನವಾಗುಳಿದರೂ ಅರ್ಥಮಾಡಿಕೊಳ್ಳಬಲ್ಲೆ ಎನ್ನುವವರು ಎಷ್ಟು ಜನರಿಗಿದ್ದಾರೆ ಹೇಳಿ? ಅವರಿವರ ಮಾತು ಬಿಡಿ. ಮೊಬೈಲ್ ಬಂದ ಮೇಲಂತೂ ನಮಗೆ ನಾವು ದೊರಕುವುದೂ ಅಪರೂಪವೇ.ಯಾವುದೋ ಪುಟವೊಂದರಲ್ಲಿ ಮುಳುಗಿ ಹೋಗಿರುತ್ತೇವೆ. -ಹೀಗೆ ಬದುಕಿನ ಮಾಮೂಲಿ ಕ್ಷಣಗಳ ನಡುವೆ ನುಸುಳಿಕೊಂಡಿರುವ ಸೂಕ್ಷ್ಮಗಳನ್ನು ಗುರುತಿಸಿ ಬರೆದಿದ್ದಾರೆ ಎಸ್.‌ ನಾಗಶ್ರೀ ಅಜಯ್.‌

Read More

ಜನಮತ

ಸಾಹಿತ್ಯ ಪ್ರಕಾರಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...

Read More

ಬರಹ ಭಂಡಾರ