ಸುಂದರಿಗೇನು ಕಷ್ಟ-ಸುಖಗಳಿರುವುದಿಲ್ಲವೇ?

ಇರುವ ಚೆಂದವನ್ನು ಕಾಪಾಡಿಕೊಳ್ಳಬೇಕೆಂಬ ಒತ್ತಡ ಸೃಷ್ಟಿಸುವ ತಾಕಲಾಟ ಬಲ್ಲೆ. ಒಂದೇ ಘಟ್ಟದಲ್ಲಿ ಹೆಚ್ಚು ಕಾಲ ಇರಲಾಗದು. ನಿಧಾನಕ್ಕೆ ಈ ಜತನ ಮಾಡುವ ಉಸಾಬರಿ ಸಾಕೆನ್ನಿಸಿತು. ಹೊರಗೆ ‘ಕಾಣುವ’ ಚೆಂದಕ್ಕಿಂತ ನಾನು ಬೇರೆ ಅನ್ನಿಸಿತು. ಎಷ್ಟೇ ಕಷ್ಟಪಟ್ಟರೂ ಕಾಲನ ಹೊಡೆತ ತನ್ನ ಕೆಲಸ ಮಾಡಿಯೇ ತೀರುತ್ತದೆ. ಕಾಲದೊಂದಿಗೆ ಹೋರಾಡುವುದಕ್ಕಿಂತ ನನ್ನ ವ್ಯಕ್ತಿತ್ವ, ಪ್ರತಿಭೆ, ಬುದ್ಧಿ, ಮನಸ್ಸಿನ ಜೊತೆ ಗುದ್ದಾಡುತ್ತಾ ಬೆಳೆಯುವುದರಲ್ಲಿ ಬದುಕಿನ ಸೌಂದರ್ಯವಿದೆ. ಈ ಸಮಯ ಮತ್ತೆ ಬರಲಾರದು. ಈ ಅವಕಾಶ ಮತ್ತೆ ಸಿಗಲಾರದು. ಹಠಕ್ಕೆ ಬಿದ್ದಂತೆ ಸಂಗೀತ ಮುಂದುವರೆಸಿದೆ.
ನಾಗಶ್ರೀ ಅಜಯ್‌ ಬರೆಯುವ ಲೋಕ ಏಕಾಂತ ಅಂಕಣ

Read More