ನಂಜುಂಡಿ ಕಲ್ಯಾಣವೂ ಮತ್ತು ‘ಮಿಲ್ಟ್ರೀ’ ಗ್ಯಾಂಗೂ

ಅಂತೂ ನಮ್ಮೂರಿಗೆ ನಂಜುಂಡಿ ಕಲ್ಯಾಣದ ಭಾಗ್ಯ. ಬರೋಬ್ಬರಿ ಒಂದು ವರ್ಷದ ನಂತರ. ಆದರೂ ನಮ್ಮ ಜನಕ್ಕೆ ಅದು ರಿಲೀಜ್ ಪಿಕ್ಚರ್. ಜಟಕಾ ಲೌಡ್ ಸ್ಪೀಕರ್ ಕಟ್ಟಿಕೊಂಡು ಸುತ್ತ ಹತ್ತೂರುಗಳಿಗೆ ಹೋಗಿ… “ಪ್ರೀಯ ಕಲಾಭಿಮಾನಿಗಳೆ.. ಕಲಾ ರಸಿಕರೆ.. ಒಮ್ಮೆ ನೋಡಿದರೆ ಮತ್ತೊಮ್ಮೆ ಮಗದೊಮ್ಮೆ.. ಮತ್ತೆ ಮತ್ತೆ ನೋಡಲೇಬೇಕಾದ ಸಿನೇಮಾ..” ಎನ್ನುತ್ತ.. “ಮರೆಯದಿರಿ.. ಮರೆತು ನಿರಾಶರಾಗದಿರಿ..…” ಎನ್ನುವ ನೊಟೀಸ್ ನೀಡಿ ಮರಳಿತು. ಸೈಕಲ್ ರಂಗ ಬಸ್ ಸ್ಟಾಪು ಸಲೂನು ಕೂಟು ಸರ್ಕಲ್‌ಗಳಲ್ಲಿ ಪೋಸ್ಟರ್ ಅಂಟಿಸಿದ.
ಲಿಂಗರಾಜ ಸೊಟ್ಟಪ್ಪನವರ ಬರೆದ ಪ್ರಬಂಧ

Read More