Advertisement

Tag: Narayana Yaji

ಪ್ರಜ್ಞಾ ಪ್ರವಾಹವನ್ನು ಧಾರೆಯಾಗಿಸಿದ ಆಖ್ಯಾನಕಾರ ಕೆ. ಟಿ. ಗಟ್ಟಿ: ನಾರಾಯಣ ಯಾಜಿ ಬರಹ

ಗಟ್ಟಿಯವರು ಕಾದಂಬರಿ ಬರೆಯುವಾಗ ನವ್ಯ ತನ್ನ ಉತ್ತುಂಗದಲ್ಲಿ ಇತ್ತು. ತೇಜಸ್ವಿ, ಆಲನಹಳ್ಳಿ ಶ್ರೀ ಕೃಷ್ಣ, ಅಡಿಗರು, ಅನಂತಮೂರ್ತಿ ಇವರೆಲ್ಲರೂ ತಮ್ಮ ವಿಶಿಷ್ಟ ಬಗೆಯ ಬರಹಗಳಿಂದ ಕನ್ನಡ ಸಾಹಿತ್ಯಲೋಕವನ್ನು ರಂಜನೆಯಿಂದ ವೈಚಾರಿಕತೆಯೆಡೆಗೆ ತೆಗೆದುಕೊಂಡು ಹೋಗಿದ್ದರು.
ಇತ್ತೀಚೆಗೆ ತೀರಿಕೊಂಡ ಖ್ಯಾತ ಕಾದಂಬರಿಕಾರ ಕೆ.ಟಿ. ಗಟ್ಟಿಯವರ ಸಾಹಿತ್ಯದ ಕುರಿತು ನಾರಾಯಣ ಯಾಜಿ, ಸಾಲೇಬೈಲು ಬರಹ ನಿಮ್ಮ ಓದಿಗೆ

Read More

ಅಕ್ಷರದ ಮೂಲಕ ಚಿರಂಜೀವಿಯಾಗಿರುವ ಶ್ರೀನಿವಾಸ ವೈದ್ಯ

ನವೋದಯಕಾಲದ ಲೇಖಕರು ಎದುರಿಸುವ ಎಲ್ಲಬಗೆಯ ವಿಪ್ಲವ ಮತ್ತು ಆತಂಕಗಳನ್ನು ಒಂದು ಕುಟುಂಬದ ಕಥೆಯಮೂಲಕ ಹೇಳುವ ಶ್ರೀನಿವಾಸ ವೈದ್ಯರ ಕ್ರಿಯಾಶೀಲತೆಯನ್ನು ಇಲ್ಲಿ ಕಾಣಬಹುದಾಗಿದೆ. ಅನೇಕ ಸಲ ಅನಂತಮೂರ್ತಿಯವರ ಮೌನಿಯಲ್ಲಿ ಈ ಕಾದಂಬರಿಯ ನೆರಳು ಬಿದ್ದಿರಬಹುದೇ ಅನಿವುವಷ್ಟು ಪ್ರಭಾವಶಾಲಿಯಾಗಿದೆ. ಬೇರು ಕಳೆದುಕೊಂಡ ವ್ಯಕ್ತಿ ಹೊಸ ಬೇರಿನೊಂದಿಗೆ ಕಂಡುಕೊಳ್ಳುವ ಆರ್ಥಿಕ ಭದ್ರತೆ ಮತು ಸಾಮಾಜಿಕ ಸ್ಥಾನಮಾನವನ್ನೂ ಪಡೆದುಕೊಳ್ಳುವ ಕ್ರಿಯೆ ಬ್ರಿಟಿಷರಿಂದ ಭಾರತಕ್ಕೆ ಸಿಗುವ ಸ್ವಾಂತಂತ್ರ್ಯದ ಜೊತೆಗೆ ಹಾಸುಹೊಕ್ಕಾಗಿದೆ.
ಇಂದು ತೀರಿಹೋದ ಶ್ರೀನಿವಾಸ ವೈದ್ಯರ ಕೃತಿಗಳ ಕುರಿತು ನಾರಾಯಣ ಯಾಜಿ ಬರಹ

Read More

ಏಕೆ ಕುಣಿವೆ ತೂಕ ತಪ್ಪಿ ಸಾಕು ಕಾಲ ಭೈರವ

ಗೇರುಹಣ್ಣನ್ನು ತಿಂದು ಬೀಜವನ್ನು ಎಲ್ಲರೂ ಸೇರಿ ಒಂದೆಡೆ ಕೂಡಿಡುತ್ತಿದ್ದೆವು. ನೂರು ಬೀಜಗಳಾದ ಮೇಲೆ ಅದನ್ನು ಕಮ್ತೀರ ಅಂಗಡಿಗೆ ಕೊಟ್ಟರೆ ಅವರು ನಮಗೆಲ್ಲ ಒಂದೊಂದು ಆಯ್ಸ್-ಕ್ಯಾಂಡಿ ಕೊಡುತ್ತಿದ್ದರು. ತಂಪಾಗಿರುವ ಅದನ್ನು ತಿನ್ನುತ್ತಾ ಅದಕ್ಕೆ ಹಾಕಿರುವ ಕೆಂಪನೆಯ ಬಣ್ಣ ನಮ್ಮ ಬಾಯಿಯ ಸುತ್ತಮುತ್ತ ಚಂದದ ಪ್ರಭಾವಳಿಯನ್ನು ರಚಿಸುತ್ತಿತ್ತು. ನಮ್ಮ ಈ ಘನಂದಾರಿ ನಡೆ ಅದು ಹೇಗೋ ಪರಮಜ್ಜನಿಗೆ ಗೊತ್ತಾಗಿಬಿಡುತ್ತಿತ್ತು. ನಾರಾಯಣ ಯಾಜಿ ಬರಹ

Read More

ದಾರಕ್ಕೆ ಹಲವು ಸುತ್ತುಗಳು; ಆದರೆ ಗಂಟು ಮಾತ್ರ ಒಂದೇ

ವಿಜಯ ಮತ್ತು ಮಂಗಳಾ ಪದ್ಮಿನಿ ಮತ್ತು ಪ್ರಕಾಶರನ್ನು ಕಾಡುತ್ತಿರುವಂತೆ ಆಕೆಯ ತಾಯಿ ತನ್ನ ಇಳಿ ವಯಸ್ಸಿನಲ್ಲಿ ವಿಧುರ ಅಶೋಕನನ್ನು ಸೇರಿ ಇಬ್ಬರೂ ವಿದೇಶಕ್ಕೆ ಹಾರುವದು ಸಲಿಸಾಗಿ ನಡೆಯುತ್ತದೆ. ಜೀವನದಲ್ಲಿ ಗುರಿ ಇರದೇ ಇದ್ದಾಗಲೂ ಕೆಲವೊಮ್ಮೆ ಅವಕಾಶಗಳು ಹಾದುಹೋಗುತ್ತವೆ. ಅದನ್ನು ತಮ್ಮ ತಮ್ಮ ಅನುಕೂಲತೆಯನ್ನಾಗಿ ಬಳಸಿ ಬದುಕನ್ನು ಹಸನುಗೊಳಿಸಬಹುದೆನ್ನುವದನ್ನು ಅಪರವಯಸ್ಕರ ಕಹಾನಿ ತಿಳಿಸುತ್ತದೆ. ವಿಷಾದವೆನ್ನುವದು ತೀವ್ರವಾದಾಗ ಗುರುವಿನ ಮಾರ್ಗದರ್ಶನವಿದ್ದರೆ ಅದರಿಂದ ಹೊರಬರುವದು ಸಾಧ್ಯವೆನ್ನುವದು ಪದ್ಮಿನಿ ಕಂಡುಕೊಂಡಿದ್ದು ಮತ್ತೋರ್ವ ಗುರು ಪುರುಷೋತ್ತಮನಲ್ಲಿ.
ಕುಸುಮಾ ಆಯರಹಳ್ಳಿ ಕಾದಂಬರಿ “ದಾರಿ”ಯ ಕುರಿತು ನಾರಾಯಣ ಯಾಜಿ ವಿಶ್ಲೇಷಣೆ

Read More

ಬದುಕಿನ ಪಥದಲ್ಲಿ ಮೂಡಿದ ನೆನಪಿನ ಪ್ರಬಂಧ

ಆ ಕಾಲದ ಓದುವ ವರ್ಣನೆ ಚನ್ನಾಗಿ ಮೂಡಿಬಂದಿದೆ. ಶಾಲೆ ಕಾಲೇಜಿಗೆ ನಡೆದುಕೊಂಡು ಹೋಗುತ್ತಲೇ ಶರಾವತಿ ದಾಟುವ ಕಾಲೇಜಿನಲ್ಲಿ ವಿಜ್ಞಾನವನ್ನು ತೆಗೆದುಕೊಂಡರೂ ಸಂಗೀತವನ್ನು ಒಂದು ವಿಷಯವನ್ನಾಗಿ ತೆಗೆದುಕೊಂಡು ಕಲಿತದ್ದು ನೋಡಿದರೆ ಸಂಗೀತದ ಮೇಲೆ ಇವರಿಗಿದ್ದ ಆಸಕ್ತಿಯ ಅರಿವಾಗುತ್ತದೆ. ಕಾಲೇಜಿನ ಪ್ರಿನ್ಸಿಪಾಲರಾಗಿದ್ದವರು ಖ್ಯಾತ ಕವಿ ವೀಸಿ, ತಮ್ಮ ಶಿಕ್ಷಕರುಗಳು, ಆ ಕಾಲದ ಕಾಲೇಜಿನ ಬದುಕು ಎಲ್ಲವೂ ಒಂದು ನೆನಪಿನ ಸುರುಳಿಯಂತೆ ಪ್ರಬಂಧದೋಪಾದಿಯಲ್ಲಿ ಹರಿದು ಬಂದಿದೆ. ಅದರಲ್ಲಿಯೂ ಇವರ ಮದುವೆಯ ಸ್ವಾರಸ್ಯ ತಪ್ಪದೇ ಓದಬೇಕು.
ಜಿ. ಎಸ್. ಹೆಗಡೆ ಜೀವನಾಧಾರಿತ “ಜೀವನ ಪಥ ನೆನಪಿನ ರಥ” ಪುಸ್ತಕದ ಕುರಿತು ನಾರಾಯಣ ಯಾಜಿ, ಸಾಲೇಬೈಲು ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ