Advertisement

Tag: OLN

ಅಪರಾಧಕ್ಕೆ ತಕ್ಕ ಶಿಕ್ಷೆ ಮತ್ತು…. ಮುಂದಿನ ಹಾದಿ

ಅಪರಾಧಿಯು ತಪ್ಪೊಪ್ಪಿಕೊಂಡ ಐದು ತಿಂಗಳ ನಂತರ ತೀರ್ಪು ಹೊರಬಂದಿತು. ರಝುಮಿಖಿನ್ ಸಾಧ್ಯವಾದಾಗಲೆಲ್ಲ ಸೆರೆಮನೆಗೆ ಹೋಗಿ ಅವನ ಭೇಟಿ ಮಾಡುತ್ತಿದ್ದ. ಸೋನ್ಯಾಳೂ ಅಷ್ಟೇ. ದೂರವಾಗುವ ದಿನ ಬಂದಿತು. ಶಾಶ್ವತವಾಗಿ ದೂರವಾಗುತ್ತಿಲ್ಲ ನಾವು ಎಂದು ದುನ್ಯಾ ಆಣೆ ಮಾಡಿ ಹೇಳಿದಳು ಅಣ್ಣನಿಗೆ. ರಝುಮಿಖಿನ್ ಕೂಡ ಅದನ್ನೇ ಹೇಳಿದ. ಕನಿಷ್ಠಪಕ್ಷ ಮುಂದಿನ ಮೂರು ನಾಲ್ಕು ವರ್ಷಗಳಲ್ಲಿ ಏನು ಮಾಡಬೇಕೆಂಬ ಬಗ್ಗೆ ಅವನ ಸ್ನೇಹಪೂರ್ಣ ಮನಸಿನಲ್ಲಿ ಆಗಲೇ ಒಂದು ಯೋಜನೆ ದೃಢವಾಗಿ ರೂಪುತಳೆದಿತ್ತು.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಕೊನೆಯ ನುಡಿಗಳು.

Read More

ಬೆನ್ನುಬಿದ್ದ ಭೂತ ಇವನು!

ಈ ಕೊನೆಯ ಅಂಶದ ಕಾರಣದಿಂದ ಮಾರ್ಫಾ ಮನಸ್ಸಿಗೆ ಬಹಳ ಸಮಾಧಾನ ಆದಹಾಗಿತ್ತು. ಅವಳು ಜಾಣೆ. ನಾನು ಬರಿಯ ಹೆಣ್ಣು ಹುಚ್ಚಿನವನು, ಲಂಗದ ಅಂಚು ಕಂಡರೆ ಆಸೆ ಪಡುವವನು, ಗಂಭೀರವಾದ ಪ್ರೀತಿ ನನ್ನ ಮಟ್ಟಿಗೆ ಸಾಧ್ಯವೇ ಇಲ್ಲ ಅಂದುಕೊಂಡಿದ್ದಳು. ಜಾಣೆ ಹೆಂಗಸು, ಹೊಟ್ಟೆಯ ಕಿಚ್ಚಿನ ಹೆಂಗಸು ಇಬ್ಬರೂ ಬೇರೆ ಬೇರೆ. ಅದೇ ದೊಡ್ಡ ತಾಪತ್ರಯ.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಎಲ್ಲಿ ನೋಡಿದರೂ…!: ‘ಅಪರಾಧ ಮತ್ತು ಶಿಕ್ಷೆ’ ಕಾದಂಬರಿಯ ಎರಡನೇ ಭಾಗದ ಎರಡನೆಯ ಅಧ್ಯಾಯ

“ಕೊನ್ನೊಗ್ವಾಡೆಯೆಸ್ಕಿ ಬುಲೆವಾಕ್ಕೆ, ಎರಡು ದಿನದ ಹಿಂದೆ ಹುಡುಗಿ ಸಿಕ್ಕಿದ್ದಳಲ್ಲ, ಅದೇ ಬೀದಿಗೆ ತಿರುಗುವಾಗ, ಅವನ ನಗು ಹೊರಟು ಹೋಯಿತು. ಬೇರೆಯ ಯೋಚನೆಗಳು ತಲೆ ಎತ್ತುವುದಕ್ಕೆ ಶುರುಮಾಡಿದವು. ಆ ದಿನ ಆ ಹುಡುಗಿ ಹೋದ ಮೇಲೆ ಬಹಳ ಹೊತ್ತು ಕೂತು ಯೋಚನೆ ಮಾಡಿದ್ದೆನಲ್ಲಾ ಆ ಬೆಂಚಿನ ಹತ್ತಿರ ಹೋಗುವುದು ಬೇಡ ಅನ್ನಿಸಿತು. ಅವನು ಇಪ್ಪತ್ತು ಕೊಪೆಕ್ ಕೊಟ್ಟಿದ್ದ ಮೀಸೆ ಪೋಲೀಸಿನವನು ಮತ್ತೆ ಕಣ್ಣಿಗೆ ಬಿದ್ದರೆ ಕಷ್ಟವಾಗತ್ತೆ ಅನ್ನಿಸಿತು.”

Read More

ಫ್ಯದೊರ್ ದಾಸ್ತಯೇವ್ಸ್ಕಿಬರೆದ ʼಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ನಾಲ್ಕನೆಯ ಅಧ್ಯಾಯ

“ಹೀಗೆ ಪ್ರಶ್ನೆ ಹಾಕಿಕೊಂಡು ಹಿಂಸೆಮಾಡಿಕೊಳ್ಳುತ್ತಾ ಇದ್ದ. ಆಗುವ ಹಿಂಸೆಯಲ್ಲಿ ಒಂದು ಥರ ಸಂತೋಷವನ್ನೂ ಪಡುತ್ತಿದ್ದ. ಈ ಯಾವ ಪ್ರಶ್ನೆಗಳೂ ಹೊಸವಲ್ಲ. ಆ ತಕ್ಷಣಕ್ಕೆ ಹುಟ್ಟಿದವೂ ಅಲ್ಲ. ಈ ಪ್ರಶ್ನೆಗಳೆಲ್ಲ ಹಳೆಯ ನೋವಿನ ಹಾಗೆ ಹಿಂಸೆ ಕೊಟ್ಟು ಕೊಟ್ಟು ಮನಸ್ಸನ್ನು ನವೆಸಿಬಿಟ್ಟಿದ್ದವು. ಈ ನೋವು ಬಹಳ ಬಹಳ ಹಿಂದೆಯೇ ಹುಟ್ಟಿತ್ತು, ಬೆಳೆದಿತ್ತು, ಇತ್ತಿಚೆಗಷ್ಟೇ ಮಾಗಿತ್ತು, ದಟ್ಟೈಸಿತ್ತು..”
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ

Read More

ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ʼಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಎರಡನೆಯ ಅಧ್ಯಾಯ

“ಅವನ ಮಾತು ಅಲ್ಲಿದ್ದವರಲ್ಲಿ ಒಂದು ಥರ ಜಡವಾದ ಆಸಕ್ತಿ ಹುಟ್ಟಿಸಿತ್ತು. ಕೌಂಟರಿನಲ್ಲಿದ್ದ ಹುಡುಗರ ಮುಖದ ಮೇಲೆ ಗೇಲಿಯ ನಗು ಬಂದಿತ್ತು. ಅಂಗಡಿಯ ಯಜಮಾನ ‘ತಮಾಷೆ ಮನುಷ್ಯ’ನ ಕಥೆ ಕೇಳುವುದಕ್ಕೆಂದೇ ಮೇಲಿನ ರೂಮಿನಿಂದ ಇಳಿದು ಬಂದು, ಸ್ವಲ್ಪ ದೂರದಲ್ಲಿ ಕೂತು, ಆಗಾಗ ಸೋಮಾರಿತನದ ದೊಡ್ಡ ದೊಡ್ಡ ಆಕಳಿಕೆ ತೆಗೆಯುತ್ತಿದ್ದ. ಅಲ್ಲಿದ್ದವರಿಗೆಲ್ಲ ಮಾರ್ಮೆಲಡೋವ್…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ