Advertisement

Tag: play

ಆರ್ಯಕನೆಂಬ ನಾಯಕ: ಸತೀಶ್‌ ತಿಪಟೂರು ಬರಹ

ನಾವು ಮಾಡುವ ರಂಗಕೃಷಿಯು ಪ್ರಾಮಾಣಿಕವಾಗಿದ್ದರೆ ಪ್ರತಿಕ್ಷಣವೂ ಹುಟ್ಟುವ ಅಹಂಕಾರವನ್ನು ವಿಸರ್ಜಿಸುತ್ತಲೇ ಇರುತ್ತದೆ ಎಂದು ಹೇಳಿದೆ. ಯಾರ ಸ್ಮೃತಿಗಳು ಸಮಾಜದ ನೋವಿನಿಂದ ಅದ್ದುಕೊಂಡಿರುತ್ತದೋ, ಸಮುದಾಯದ ಕಾಳಜಿಗಳಲ್ಲಿ ಬೆಸೆದುಕೊಂಡಿರುತ್ತದೋ, ಅಂತಹ ಪ್ರಕೃತಿಗಳು ಹಣ, ಅಧಿಕಾರ, ಪ್ರಭಾವಳಿಗಳಿಂದ ಒದಗಿಬರಬಹುದಾದ ಅಹಂಕಾರದಿಂದ ಮುಕ್ತವಾಗಿರುತ್ತದೆ. ಇಲ್ಲಿ ಯಾರ ಬೇರುಗಳು ಸಡಿಲವಾಗಿರುತ್ತದೋ ಅಂತಹವರ ಪ್ರಕೃತಿ ಪಲ್ಲಟವಾಗುತ್ತದೆ; ಮತ್ತು ಹಾಗೆ ಆದುದಕ್ಕೆ ಇರುವ ಕಾರಣಗಳನ್ನು ದೊಡ್ಡದು ಮಾಡುತ್ತಾ ತಮ್ಮ ಇರುವಿಕೆಗೆ ಸಮರ್ಥನೆಯನ್ನು ನೀಡುತ್ತದೆ ಎಂದು ಹೇಳಿದೆ. ಹಣ, ಅಧಿಕಾರ, ಪ್ರಭಾವಳಿಗಳನ್ನು ಧಾರಣೆ ಮಾಡಿಕೊಂಡು ಜೀರ್ಣಿಸಿಕೊಳ್ಳುವ ಶಕ್ತಿಬೇಕು.
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಮತ್ತೊಂದು ಅಧ್ಯಾಯ ನಿಮ್ಮ ಓದಿಗೆ

Read More

ಇರುವ ಶಾಂತಿಯನ್ನು ಉಳಿಸಿಕೊಳ್ಳೋಣ

ಸ್ವರ್ಗದ ಹಕ್ಕಿಯಾದ ನವಿಲು ತನ್ನ ಒಂದು ಸಣ್ಣತಪ್ಪಿನಿಂದ ಅಲ್ಲಾನ ಶಾಪಕ್ಕೆ ಗುರಿಯಾಗಿ ಭೂಮಿಗೆ ಬಂದರೂ ಅವುಗಳು ನೆಲೆಸಿರುವಲ್ಲಿ ಶಾಂತಿ ಸಮಾಧಾನ ನೆಲೆಯೂರುತ್ತದೆ. ಭಾರತ ಮೊದಲನೆಯ ಅಣುಬಾಂಬಿನ ಪರೀಕ್ಷೆಯನ್ನು ಪ್ರೋಖರಾನಿನಲ್ಲಿ ನಡೆಸಿದಾಗ ಅವುಗಳೆಲ್ಲವೂ ಬೆಚ್ಚಿಬೀಳುತ್ತವೆ. ಅಲ್ಲಿ ಅವುಗಳು ಕಾಣಸಿಗುವುದಿಲ್ಲ. ಕಾಣೆಯಾಗಿರುವ ನವಿಲುಗಳಿಗಾಗಿ ನಾಟಕಕಾರ ಪತ್ರಿಕೆಯಲ್ಲಿ ಬರೆದು ಜಾಗೃತಿ ಮೂಡಿಸುವ ಪ್ರಯತ್ನಮಾಡಿತ್ತಾನೆ. ಶಾಂತಿನೆಲೆಸುವುದು ಆತನ ಹಂಬಲ.
ಪ್ರೊ. ಕೆ. ಇ. ರಾಧಾಕೃಷ್ಣ ಅನುವಾದಿತ ಸುರೇಶ ಆನಗಳ್ಳಿ ನಿರ್ದೇಶನದ “ನವಿಲು ಪುರಾಣ” ನಾಟಕದ ಕುರಿತು ನಾರಾಯಣ ಯಾಜಿ ಬರಹ

Read More

ಸೃಜನಶೀಲತೆಯ ಬೆಳಕಿನಲ್ಲಿ ವಿಜ್ಞಾನವೂ ಸಿದ್ಧಾಂತವೂ

ತನ್ನ ಬಾಲ್ಯದ ಧಾರ್ಮಿಕತೆಯ ತತ್ತ್ವವು ವಸ್ತುನಿಷ್ಠವಾಗಿ ಸಂಶೋಧನೆ ನಡೆಸಬೇಕಾದ ವಿಜ್ಞಾನಿಯ ದೃಷ್ಟಿಯನ್ನು ಪ್ರಭಾವಿಸುತ್ತದೆಯೆ? ಅದರಿಂದಾಗಿ ಕೆಲವೊಮ್ಮೆ ಧನಾತ್ಮಕ, ಇನ್ನು ಕೆಲವೊಮ್ಮೆ ಋಣಾತ್ಮಕ ಫಲಿತಾಂಶಗಳಿಗೆ, ವಾಸ್ತವದಿಂದ ದೂರವಾದ ಸಿದ್ಧಾಂತಗಳಿಗೆ ಅದು ಎಡೆಮಾಡಿಕೊಡಬಹುದೆ ಎಂಬ ಪ್ರಶ್ನೆಗಳನ್ನು ಪದರ ಪದರವಾಗಿ ಬಿಡಿಸಿಡುವ ನಾಟಕವಿದು. ನಿರ್ದೇಶನ  ಅತ್ಯಂತ ಪರಿಣಾಮಕಾರಿಯಾದುದು. ದೇಹಭಾಷೆ ಮತ್ತು ಧ್ವನಿಯ ಏರಿಳಿತಗಳ ಮೂಲಕ ಸಲಾಂ ಅವರ ಹತಾಶೆ, ನೋವುಗಳನ್ನು ಅಭಿವ್ಯಕ್ತಿಸುವಲ್ಲಿ ನಿರ್ದೇಶಕರು ಗೆದ್ದಿದ್ದಾರೆ. ‘ಅಬ್ದುಸ್ ಸಲಾಮ್ ಅವರ ವಿಚಾರಣೆ’ ನಾಟಕದ ಕುರಿತು ಡಾ. ಸುದರ್ಶನ ಪಾಟೀಲಕುಲಕರ್ಣಿ ಬರಹ

Read More

‘ನಂದು ಹ್ಯೂಮನಿಸಂ… ನಾನು ಎಲ್ರಿಗೂ ಕಾಫಿ ಕೊಡ್ಸಿ, ಕುಡೀರಿ ಅಂತೀನಿ…’

“ಒಮ್ಮೆ ಹೀಗೇ ಧುತ್ತನೆ ಎದುರಾದಿರಿ. ನಿಮ್ಮ ಕಣ್ಣುಗಳಲ್ಲಿ ಒಂದಿಷ್ಟು ಮುಜುಗರ ಇರುತ್ತದೆ ಎಂದು ನಿಮ್ಮ ಕಣ್ಣುಗಳನ್ನೇ ನೋಡಿದ್ದೆ. ನಿಮ್ಮನ್ನ ಕಾಣುವಾಗ ನಾನು ಕೊಂಚ ಅಳುಕಿದ್ದೆ ಅಷ್ಟೇ. ನೀವು ಆರಾಮಾಗೇ ಇದ್ದಿರಿ. ನನ್ನನ್ನ ಕಂಡಿದ್ದೇ ‘ಹೋ ಮಹೇಶ್ ಅವ್ರು.. ಬನ್ನಿ ಕಾಫಿ ಕುಡಿಯೋಣ..’ ಅಂತ ಕರೆದುಕೊಂಡು ಕಲಾಕ್ಷೇತ್ರದ ಹಿಂಬದಿಯ ಕ್ಯಾಂಟಿನ್ ಗೆ ನಡೆದಿರಿ. ನಗುನಗುತ್ತ ಮಾತಾಡಿದಿರಿ. ನನ್ನ ವಿಮರ್ಶೆ ಮಲಗಿತ್ತು ಎನ್ನುವುದು ನನಗೆ ಅವತ್ತೇ ಗೊತ್ತಾಗಿದ್ದು.
ಎನ್.ಸಿ. ಮಹೇಶ್‌ ಬರೆದ ‘ರಂಗ ವಠಾರ’ ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ