Advertisement

Tag: Ramjan Darga

ಕತ್ತಲಲಿ ಕಂಡ ಮಿನುಗುವ ಕಣ್ಣುಗಳು….

ಆ ಹಾಳು ಗುಡಿಯ ಮುಂದೆ ಹೋದೆವು. ಒಬ್ಬರೂ ಕಾಣಲಿಲ್ಲ. ಅಷ್ಟೊತ್ತಿಗೆ ಒಳಗಿನಿಂದ ಒಬ್ಬ ಯುವಕ ಬಂದ. ದೇವಾಲಯದೊಳಗೆ ಸಂಪೂರ್ಣ ಕತ್ತಲು ಕವಿದಿತ್ತು. ಇದೇನು ಹೀಗೆ ಎಂದಾಗ, ಆತ ‘ಇರುವುದೊಂದೇ ಮೋಂಬತ್ತಿ ನಿಮ್ಮ ಬರುವಿಗೆ ಕಾಯುತ್ತಿದ್ದೆವು’ ಎಂದ. ಒಳಗೆ ಕಾಲಿಟ್ಟಕೂಡಲೆ ಆತ ಮೋಂಬತ್ತಿ ಹಚ್ಚಿದ. ಅಲ್ಲಿ ಕುರ್ಚಿ ಟೇಬಲ್ ಏನೂ ಇರಲಿಲ್ಲ. ಆ ಮೋಂಬತ್ತಿಯ ಬೆಳಕಲ್ಲಿ ನೂರಾರು ಯುವಕರು ಕುಳಿತಿದ್ದು ಮಸುಕು ಮಸುಕಾಗಿ ಕಾಣುತ್ತಿತ್ತು. ಅವರ ಕಣ್ಣುಗಳು ಮಾತ್ರ ನಕ್ಷತ್ರಗಳ ಹಾಗೆ ಹೊಳೆಯುತ್ತಿದ್ದವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 64ನೇ ಕಂತು ನಿಮ್ಮ ಓದಿಗೆ

Read More

900 ದಿನ ಫ್ಯಾಸಿಸ್ಟರ ಮುತ್ತಿಗೆಯಲ್ಲಿ ನಲುಗಿದ ಲೆನಿನ್‌ಗ್ರಾಡ್

ಎರಡನೇ ಮಹಾಯುದ್ಧದಲ್ಲಿ ಫ್ಯಾಸಿಸ್ಟರು 90 ಲಕ್ಷ ರಷ್ಯನ್ನರನ್ನು ಯಾತನಾಶಿಬಿರಗಳಲ್ಲಿ ಕೊಂದಿದ್ದಾರೆ. ಜನರನ್ನು ಕೊಲ್ಲಲು ಅವರು ಗ್ಯಾಸ್ ಚೇಂಬರ್‌ಗಳನ್ನು ಬಳಸಿದರು. ಮೃತದೇಹಗಳ ಕೊಬ್ಬನ್ನು ಸಾಬೂನು ಮತ್ತು ಹದಗೊಳಿಸಿದ ತೊಗಲು ತಯಾರಿಸಲು ಉಪಯೋಗಿಸಲಾಯಿತು. ಕೂದಲಿನಿಂದ ಹಾಸಿಗೆ ಮತ್ತು ಕಾಲ್ಚೀಲಗಳು ತಯಾರಾದವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಆ ತಂಪು ವಾತಾವರಣದಲ್ಲೂ ಬೆವರಿದೆ…

ಕೊನೆಗೆ ಗಲೀನಾಗೆ ವಿವರಿಸಬೇಕಾಯಿತು. ನಾನು ಬಹಳ ದುಃಖಿಯಾಗಿದ್ದೇನೆ. ನನ್ನ ಯುವಜನಾಂಗವನ್ನು ನಿಮ್ಮ ಯುವಜನಾಂಗದ ಜೊತೆ ಹೋಲಿಕೆ ಮಾಡಿಕೊಂಡು ನೋವನ್ನು ಅನುಭವಿಸುತ್ತಿದ್ದೇನೆ. ಅಲ್ಲದೆ ನನ್ನ ಸಂಸ್ಕಾರ ಬೇರೆಯೆ ಇದ್ದುದರಿಂದ ಈ ಕುಣಿತ ಸಾಧ್ಯವೇ ಇಲ್ಲದ ಮಾತು ಎಂದೆ. ಅವಳು ಅರ್ಥ ಮಾಡಿಕೊಂಡಳು. ‘ನಾನು ಉತ್ತರ ಭಾರತದ ಪ್ರವಾಸದಲ್ಲಿದ್ದಾಗ ಅಲ್ಲಿನ ಬಡತನ ನೋಡಿ ಮರುಗಿದ್ದೆ’ ಎಂದು ತಿಳಿಸಿದ ಅವಳು, ‘ಐ ಯಾಮ್ ಸೋ ಪ್ರೌಢ ಆಫ್ ಯು’ ಎಂದಳು. ಆ ಸ್ಥಳದಿಂದ ವಾಪಸ್ ಬಂದೆವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 52ನೇ ಕಂತು ನಿಮ್ಮ ಓದಿಗೆ.

Read More

ಯುದ್ಧದಲ್ಲಿ ಗೆಲ್ಲುವುದು ಸಾವು ಮಾತ್ರ…

ಯುಸಿ಼ಫ್ ತನ್ನ ಹದಿನೈದು ವರ್ಷದ ಮಗ ಆದಮ್‌ನ ಹಿಂದೆ ನಿಂತ. ಅಂಬೆಗಾಲು ಹಾಕುತ್ತ ಜನರ ಕಾಲೊಳಗಿಂದ ಬಾಗಿಲ ಬಳಿ ಹೋಗಲು ಮಗನಿಗೆ ತಿಳಿಸಿದ. ಆದಮ್ ಪ್ರಯತ್ನಪಟ್ಟು ಬಾಗಿಲ ಬಳಿ ಬಂದು ಹೊರಗೆ ನುಸುಳಿ ಓಡತೊಡಗಿದ. ಆದರೆ ನಾಜಿಗಳ ಗುಂಡಿಗೆ ಗುರಿಯಾದ. ಮಗನನ್ನು ಹಿಂಬಾಲಿಸಿದ ಯುಸಿ಼ಫ್ ಮೇಲೂ ಗುಂಡು ಹಾರಿಸಲಾಯಿತು. ನಾಜಿಯೊಂದು ಓಡಿ ಬಂದು ಬಿದ್ದ ಯುಸಿ಼ಫ್‌ನನ್ನು ಬೂಟುಗಾಲಿನಿಂದ ಒದ್ದು, ಬಂದೂಕಿನಿಂದ ತಿವಿಯಲಾಯಿತು. ಖತಿನ್ ಅನುಭವಿಸಿದ ಕೊನೆ ಗಳಿಗೆಯನ್ನು ಮೂರ್ಛಾವಸ್ಥೆಯಲ್ಲಿದ್ದ ಯುಸಿ಼ಫ್ ನೋಡಲಾಗಲಿಲ್ಲ. ನಾಜಿಗಳು ಅಲ್ಲಿಂದ ಹೋದ ನಂತರ ನೆರೆ ಗ್ರಾಮದ ಜನರು ಯುಸಿ಼ಫ್‌ನನ್ನು ಬದುಕಿಸಿದರು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ಸರಣಿ

Read More

ನಿಜಾರ್ಥದಲ್ಲಿ ಯಾರಿಗೂ ಗೆಲುವಿಲ್ಲ ಯುದ್ಧದಲ್ಲಿ…

ಮಾಸ್ಕೋ ಸಮೀಪದ ಬೊರೊದಿನೊ ಎಂಬ ಗ್ರಾಮದಲ್ಲಿ ನೆಪೊಲಿಯನ್ ಬೊನಾಪಾರ್ಟೆ ಸೈನ್ಯದ ವಿರುದ್ಧ ನಡೆದ ಯುದ್ಧದಿಂದ ಆ ಗ್ರಾಮ ಹೇಗೆ ನಾಶವಾಯಿತು ಎಂಬುದನ್ನು ರಷ್ಯನ್ ಪನೋರಮಾದಲ್ಲಿ ಅದ್ಭುತವಾಗಿ ಕಣ್ಣಿಗೆ ಕಟ್ಟುವಂತೆ ಸೃಷ್ಟಿಸಲಾಗಿದೆ. ದಾಳಿಗೊಳಗಾಗಿ ಸಾಯುತ್ತಿರುವ ಸೈನಿಕರು, ಬಿದ್ದು ಒದ್ದಾಡುತ್ತಿರುವ ಯುದ್ಧ ಕುದುರೆಗಳು, ಸುಡುತ್ತಿರುವ ಮನೆಗಳು, ಸುಟ್ಟು ಹೊಗೆಯಾಡುತ್ತಿರುವ ಪ್ರದೇಶಗಳು, ಹಾಹಾಕಾರದ ವಾತಾವರಣ ಹೀಗೆ ಎಲ್ಲವೂ ನಮ್ಮ ಮುಂದೆ ನಡೆಯುತ್ತಿರುವ ಹಾಗೆ ಅನಿಸುತ್ತದೆ. ನೆಪೊಲಿಯನ್ ಬೋನಾಪಾರ್ಟೆ ವಿನಾಶಕಾರಿ ಯುದ್ಧನೃತ್ಯ ಮಾಡುತ್ತಿರುವ ಹಾಗೆ ಅನಿಸುತ್ತದೆ. ರಂಜಾನ್‌ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿ

Read More

ಜನಮತ

ಸಾಹಿತ್ಯ ಪ್ರಕಾರಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...

Read More

ಬರಹ ಭಂಡಾರ