Advertisement

Tag: Ramzan Darga

ಹಸಿವು ಇಂಗಿಸುವ ಬಿಸ್ಕಿಟ್‌ ವಾಸನೆ….

ಆ ಸಭೆಯಲ್ಲಿ ಭಾಗವಹಿಸಿದ್ದ ಉಗ್ರಗಾಮಿಗಳ ನಾಯಕ 35 ವರ್ಷದವನಿರಬಹುದು. ಆತ ತನ್ನ ಹೆಂಡತಿ ಮತ್ತು ಮಗುವಿನ ಜೊತೆ ಬಂದಿದ್ದ. ಸಭಿಕರ ಮಧ್ಯದಿಂದ ಆತ ಉಗ್ರಗಾಮಿಗಳ ಪ್ರತಿನಿಧಿಯಾಗಿ ಕಾಶ್ಮೀರ ಸಮಸ್ಯೆ ಕುರಿತು ಮಾತನಾಡಿದ. ಕಾಶ್ಮೀರದಲ್ಲಿ ಎನ್‌ಕೌಂಟರಲ್ಲಿ ಸತ್ತ ಸುಮಾರು 60 ಸಾವಿರ ಯುವಕರ ಹೆಸರು, ವಯಸ್ಸು ಮುಂತಾದ ವಿವರಗಳುಳ್ಳ ಕಂಪ್ಯೂಟರ್ ಲಿಸ್ಟ್ ತಂದಿದ್ದ. ಅದರ ಜೊತೆಗಿದ್ದ ಇನ್ನೊಂದು ಲಿಸ್ಟಲ್ಲಿ ಅತ್ಯಾಚಾರಕ್ಕೊಳಗಾದ 65 ಸಾವಿರ ಕಾಶ್ಮೀರ ಯುವತಿಯರ ಹೆಸರು ಮುಂತಾದ ವಿವರಗಳಿರುವುದಾಗಿ ತಿಳಿಸಿದ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಉಜ್ಬೆಕಿಸ್ತಾನದ ನೆನಪಿನಲ್ಲಿ ಇತಿಹಾಸದ ನೋಟಗಳು

ನಮ್ಮ ಗೈಡ್, ಇತಿಹಾಸ ತಜ್ಞೆ ಗುಲ್ಚೆಹರಾ ನಮ್ಮನ್ನು ಈ ಮದ್ರಸಾ ಮುಂದೆ ಇರುವ ಬೃಹತ್ತಾದ ಏಕಶಿಲಾ ಕುಂಡವನ್ನು ತೋರಿಸಿದಳು. ಅದು ಒಂದು ಟ್ಯಾಂಕರ್ ನೀರು ತುಂಬುವಷ್ಟು ಆಳ ಮತ್ತು ಅಗಲ ಹೊಂದಿದೆ. ೧೯೧೭ರಲ್ಲಿ ರಷ್ಯಾದಲ್ಲಿ ನಡೆದ ಅಕ್ಟೋಬರ್ ಮಹಾಕ್ರಾಂತಿ ನಡೆದ ಘಟನೆಯಲ್ಲಿ ಕಮ್ಯುನಿಸ್ಟ್ ಸರ್ಕಾರ ಬಂದದ್ದು ಗೊತ್ತಾದ ಕೂಡಲೆ ಸಮರಕಂದದ ಯುವತಿಯರು ತಮ್ಮ ಬುರ್ಖಾಗಳನ್ನು ತಂದು ಈ ಕುಂಡದಲ್ಲಿ ಹಾಕಿ ಸುಟ್ಟರು ಎಂದು ಗುಲ್ ಚೆಹರಾ ತಿಳಿಸಿದಳು. ಹಾಗೆ ಬುರ್ಖಾಗಳನ್ನು ಸುಟ್ಟವರಲ್ಲಿ ಆಗ ಯುವತಿಯಾಗಿದ್ದ ತನ್ನ ಅಜ್ಜಿಯೂ ಇದ್ದಳೆಂದು ಹೇಳಿದಳು. ನಮಗೆಲ್ಲ ಆಶ್ವರ್ಯವೆನಿಸಿತು.  ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗೆಲೆಲ್ಲʼ ಸರಣಿಯ ೪೬ನೇ ಕಂತು ಇಂದಿನ ಓದಿಗಾಗಿ

Read More

ನನ್ನ ತಂದೆ ಶರಣರಂತೆ, ಸಂತರಂತೆ

ಅವರು ಜೀವನದಲ್ಲಿ ಸಾಲವನ್ನೇ ಮಾಡಲಿಲ್ಲ. ದುಡಿಮೆಯೆ ಅವರ ಬ್ಯಾಂಕು.  ವಾಪಸ್ ಮಾಡುವ ಶಕ್ತಿಇಲ್ಲವೆಂದ ಮೇಲೆ ಸಾಲ ಮಾಡಬಾರದು ಎಂಬುದು ಅವರ ನೀತಿಯಾಗಿತ್ತು. ಸಮಾಜ ಜಾತಿ ಉಪಜಾತಿಗಳ ಬಂಧನದಲ್ಲಿ ಸಿಕ್ಕಿ ಹಾಕಿಕೊಂಡಿದ್ದರೂ ಅಸ್ಪೃಶ್ಯತೆ ಆಚರಿಸುತ್ತಿದ್ದರೂ  ಆ ಬಗ್ಗೆ ತಲೆಕೆಡಿಸಿಕೊಳ್ಳಲಿಲ್ಲ. ‘ನೀವು ಹಾಗಿರಬೇಕು, ಹೀಗಿರಬೇಕು’ ಎಂದು ಯಾರಿಗೂ ಉಪದೇಶ ಮಾಡಲಿಲ್ಲ. ಆದರೆ ಸ್ವಂತಕ್ಕೆ ಜಾತಿ, ಧರ್ಮ ಮತ್ತು ಅಸ್ಪೃಶ್ಯತೆ ಮುಂತಾದವುಗಳನ್ನು ಮೀರಿ ಬದುಕಿದವರು. ನಾನು ಶನಿವಾರ ಜನಿಸಿದ್ದರಿಂದ ಪ್ರತಿ ಶನಿವಾರ ನನ್ನನ್ನು ಕರೆದುಕೊಂಡು ಶನಿದೇವರ ಗುಡಿಗೆ ಹೋಗುತ್ತಿದ್ದರು. ರಂಜಾನ್‌ ದರ್ಗಾ ಬರೆಯುವ  ನೆನಪಾದಾಗಲೆಲ್ಲ ಸರಣಿ

Read More

ಬಡವರ ಶಕ್ತಿ ಅದಮ್ಯ

ಬಡವರು ಎಷ್ಟೇ ಮೂಢನಂಬಿಕೆಯವರಿದ್ದರೂ ತಮ್ಮ ಶಕ್ತಿಯನ್ನು ಅವಲಂಬಿಸಿಯೆ ಬದುಕುವುದು ಅವರ ಜಾಯಮಾನವಾಗಿದೆ. ಬದುಕೆಂಬುದು ಅವರಿಗೆ ಹೋರಾಟದ ಅಖಾಡಾ ಆಗಿದೆ. ಆಹಾರ, ಬಟ್ಟೆ, ಆಶ್ರಯ ಮತ್ತು ಮಕ್ಕಳ ಭವಿಷ್ಯಕ್ಕಾಗಿ ಅವರು ನಿರಂತರವಾಗಿ ಹೋರಾಡುತ್ತಲೇ ಇರುತ್ತಾರೆ. ಆದರೆ ಈ ಹೋರಾಟ ಮಾರ್ಕ್ಸ್ ಹೇಳುವ ವರ್ಗ ಹೋರಾಟವಾಗಿರುವುದಿಲ್ಲ. ಅವರ ಶೋಷಣೆ ಮಾಡುವವರು ಅವರಿಗೆ ಅನ್ನದಾತರು ಎಂದು ಕಾಣುತ್ತಿದ್ದರೇ ಹೊರತು ಶೋಷಕರಾಗಿ ಕಾಣುತ್ತಿರಲಿಲ್ಲ.  ರಂಜಾನ್ ದರ್ಗಾ ಬರೆಯುವ ಆತ್ಮಕತೆ ನೆನಪಾದಾಗಲೆಲ್ಲ ಸರಣಿಯ 33ನೆಯ ಕಂತು ಇಲ್ಲಿದೆ. 

Read More

ಅಂಬಾಭವಾನಿಯ ಆರಾಧನೆಯ ದಿನಗಳು

ಪ್ರತಿ ಶುಕ್ರವಾರ ಜನ ಕಿಕ್ಕಿರಿದು ತುಂಬತೊಡಗಿದರು. ನನಗೋ ಶುಕ್ರವಾರ ಬಂದರೆ ಬೇಸರ ಶುರುವಾಗತೊಡಗಿತು. ನನ್ನ ಮತ್ತು ಅಂಬಾಭವಾನಿಯ ಮಧ್ಯದ ಏಕಾಗ್ರತೆಗೆ ಈ ಶಾಂತಿಭಂಗ ಬಹಳ ಕಿರಿಕಿರಿ ಎನಿಸುತ್ತಿತ್ತು. ಎಲ್ಲರೂ ಪ್ರಶ್ನೆ ಕೇಳುತ್ತಿದ್ದಿಲ್ಲ. ಆ ಮುಗ್ಧ ಮಹಿಳೆಯರು ಕುತೂಹಲದಿಂದ ಬರುತ್ತಿದ್ದರೂ ನನ್ನ ಪೂಜೆ ಧ್ಯಾನ ಮುಗಿಯುವ ವರೆಗೂ ತುಟಿಪಿಟಕ್ಕೆನ್ನದೆ ಕುಳಿತುಕೊಳ್ಳುತ್ತಿದ್ದರು. ಆದರೆ ಅವರೆಲ್ಲ ಬಂದು ಕೂಡುವುದೇ ನನಗೆ ಕಿರಿಕಿರಿ ಎನಿಸುತ್ತಿತ್ತು.
ರಂಜಾನ್ ದರ್ಗಾ ಬರೆಯುವ ಸರಣಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ