Advertisement

Tag: Ramzan Darga

ಗುಲಾಬ್ ಜಾಮೂನು ಕೊಡಿಸಿದ್ದ ಬಾಬುಮಾಮಾ

ಶ್ರೀಮಂತರಿಗೆ ಮತ್ತು ಮಧ್ಯಮವರ್ಗದವರಿಗೆ ಸಕ್ಕರೆಯ ಹುಚ್ಚು ಹಿಡಿದಿತ್ತು. ಬಾಬು ಮಾಮಾ ತನ್ನದೇ ರೀತಿಯಲ್ಲಿ ಪ್ಲ್ಯಾನ್ ಮಾಡಿದ. ನಾವು ಮೊದಲಿಗೆ ಇದ್ದ ಮದ್ದಿನಖಣಿ ಓಣಿಯಲ್ಲಿನ ನಮ್ಮ ಪರಿಚಯಸ್ಥರ ಮನೆಗೆ ಹೋಗಿ ‘ನಮಗೆ ಸಕ್ಕರೆ ಬೇಡ, ನಿಮಗೆ ಬೇಕಾದರೆ ತಂದು ಕೊಡುವುದಾಗಿ ತಿಳಿಸುತ್ತಿದ್ದ. ಅವರು ಕೈಚೀಲದೊಂದಿಗೆ ರೇಷನ್ ರೇಟಿಗಿಂತಲೂ ಹೆಚ್ಚಿಗೆ ಹಣ ಕೊಡುತ್ತಿದ್ದರು. ಆ ಮೇಲೆ ಕೈಚೀಲವೂ ಇಲ್ಲ, ಸಕ್ಕರೆಯೂ ಇಲ್ಲ. ಹೀಗೆ ದಿನಕ್ಕೊಬ್ಬರಾದರೂ ನಮ್ಮ ಮನೆ ಹುಡುಕಿಕೊಂಡು ಬರುತ್ತಿದ್ದರು….

Read More

ಹಿಂಸೆಯನ್ನು ಹತೋಟಿಯಲ್ಲಿಡಲು ಮಾನವೀಯತೆಯೇ ಬೇಕು

ಹುಲಿಗೆ ಆಕ್ರಮಣದ ನಖಗಳಿವೆ. ಆದರೆ ಹುಲ್ಲೆಗೆ ಸಂರಕ್ಷಣೆಯ ಕೊಂಬು ಮತ್ತು ವೇಗಶಕ್ತಿ ಇವೆ. ಇದೆಲ್ಲ ಇರುವಂಥದ್ದೆ. ಏಕೆಂದರೆ ಪ್ರಕೃತಿಯಲ್ಲಿನ ಹುಲಿ ಹುಲ್ಲೆಗಳು ಜೀವಜಾಲದಲ್ಲಿನ ಆಹಾರ ಸರಪಳಿಯ ನಿಯಮದಂತೆಯೆ ಬದುಕುತ್ತಿವೆ. ಆದರೆ ಆಂತರ್ಯದಲ್ಲಿ ಹುಲಿ, ಹುಲ್ಲೆಗಳಂತಿರುವ ಮಾನವರೂ ಇದ್ದಾರೆ. ಅವರಿಗೆ ಈ ಪ್ರಕೃತಿಯ ನಿಯಮ ಅನ್ವಯಿಸುವುದಿಲ್ಲ. ಆದ್ದರಿಂದ ಅವರು ಬದಲಾಗುಂಥ ವ್ಯವಸ್ಥೆ ರೂಪುಗೊಳ್ಳಬೇಕಿದೆ.

Read More

ದೌರ್ಬಲ್ಯಗಳಿಲ್ಲದ ಸ್ವಾಭಿಮಾನಿ ನನ್ನಪ್ಪನೇ ನನಗೆ ಮಾದರಿ

ಅಂದು ನನ್ನ ತಂದೆ ಸಂಭ್ರಮಿಸಿದ್ದು ಒಂದು ರೂಪಕವಾಗಿ ಮನದಲ್ಲಿ ಉಳಿದಿದೆ. ಅವರೆಲ್ಲ ಚೂಡಾ ತಿಂದ ಮೇಲೆ ಲಿಂಗಾಯತರಾದ ಶಿವಪ್ಪನವರಿಗೆ ಸಮೀಪದ ಲಿಂಗಾಯತರ ಮನೆಯಿಂದ ನೀರು ತಂದು ಕೊಟ್ಟ ನಂತರ ಅವರು ನೀರು ಕುಡಿದರು! ಆದರೆ ತಾಯಿ ಮಾಡಿಕೊಟ್ಟ ಚಹಾವನ್ನು ಎಲ್ಲರ ಜೊತೆ ಶಿವಪ್ಪ ಅವರೂ ಕುಡಿದರು. ಇದೆಲ್ಲ ನನಗೆ ವಿಚಿತ್ರ ಎನಿಸಿತು. ಅದೇ ನಳದ ನೀರು. ಲಿಂಗಾಯತರ ಮನೆಗೆ ಹೊಕ್ಕಾಗ ಅದು ಹೇಗೆ ಶುದ್ಧವಾಗುವುದು? ಆ ‘ಶುದ್ಧ’ ನೀರನ್ನು ನನ್ನ ತಂದೆ ತರುವಾಗ ಅಶುದ್ಧವಾಗುವುದಿಲ್ಲವೆ?

Read More

ನಾವು ಬೆಳಕಾಗಿರಬೇಕು ಇಲ್ಲವೆ ಶಾಂತವಾಗಿರಬೇಕು

ಮಾನವ ಸಹಜವಾಗಿ ಸೆಕ್ಯೂಲರ್ ಆಗಿರುತ್ತಾನೆ. ಆದರೆ ಅವನನ್ನು ಪ್ರಜ್ಞಾಪೂರ್ವಕವಾಗಿ ಕಮ್ಯೂನಲ್ ಮಾಡಿದರೂ ಅದು ಬಹಳದಿನ ಬಾಳಿಕೆ ಬರುವುದಿಲ್ಲ. ಮತ್ತೆ ಮತ್ತೆ ಜನ ಸಹಜತೆಯನ್ನು ಬಯಸುತ್ತಲೇ ಇರುತ್ತಾರೆ. ಹೀಗಾಗಿ ಕೋಮುವಾದಿಗಳು ಮತ್ತು ಮೂಲಭೂತವಾದಿಗಳ ಆಟ ನಿರಂತರವಾಗಿ ನಡೆಯುವುದಿಲ್ಲ. ಜನರು ವಿವಿಧ ಜಾತಿ ಮತ್ತು ಧರ್ಮಗಳ ಚೌಕಟ್ಟಿನಲ್ಲಿ ಸಿಲುಕಿದ್ದರೂ ದೈನಂದಿನ ಬದುಕಲ್ಲಿ ಇವೆಲ್ಲವುಗಳನ್ನು ಮೀರಿದವರೇ ಆಗಿರುತ್ತಾರೆ. ರಂಜಾನ್ ದರ್ಗಾ ‘ನೆನಪಾದಾಗಲೆಲ್ಲ ‘ ಸರಣಿಯ  20ನೇ ಕಂತಿನಲ್ಲಿ ತಮ್ಮ ಬಾಲ್ಯದ ನೆನಪುಗಳನ್ನು ಅನಾವರಣಗೊಳಿಸಿದ್ದಾರೆ.

Read More

ಅಮ್ಮನ ನಂಬಿಕೆ, ಔಷಧಿಗಳ ಮಹಿಮೆಯಲ್ಲಿ ಕಳೆದ ಬಾಲ್ಯ

ಬಡ ಗಿರಾಕಿಗಳಿಂದ ಹಿಡಿದು ಶ್ರೀಮಂತ ಗಿರಾಕಿಗಳವರೆಗೆ ಅವರ ಶಕ್ತ್ಯನುಸಾರ ಹಣ್ಣುಗಳನ್ನು ಕೊಳ್ಳುತ್ತಿದ್ದರು. ಹಣ್ಣುಗಳನ್ನು ಕೊಳ್ಳುವಾಗ ರೇಟಿಗೆ ಸಂಬಂಧಿಸಿದ ಕೊಸರಾಟ ಮಜಾ ಅನಿಸುತ್ತಿತ್ತು. ಗಿರಾಕಿಗಳು ತಮ್ಮ ಎಲ್ಲ ತರ್ಕ ಉಪಯೋಗಿಸಿ ಕಡಿಮೆ ಬೆಲೆಗೆ ಕೇಳುತ್ತಿದ್ದರು. ಆ ಹಣ್ಣುಗಳನ್ನು ತರುವ ಕಷ್ಟ, ಅದಕ್ಕಾಗಿ ಮಾಡಿದ ಖರ್ಚು, ಗಿರಾಕಿಗಳು ಕೇಳುವ ಬೆಲೆಗಿಂತ ಹೆಚ್ಚಾಗಿದೆ ಎಂಬುದನ್ನು ಅಜ್ಜಿ ವಿವರಿಸುತ್ತಿದ್ದಳು. ಇಷ್ಟಕ್ಕಾದರೆ ಕೊಡು ಎಂದು ಹೇಳುತ್ತ ಗಿರಾಕಿಗಳು ಮುಂದೆ ಹೋದಂತೆ ಮಾಡುತ್ತಿದ್ದರು. ಅಜ್ಜಿ ಕರೆಯದೆ ಇದ್ದಾಗ ಮತ್ತೆ ವಾಪಸ್ ಬರುತ್ತಿದ್ದರು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ