ನಾಟಕವೆಂದರೆ ಶೃತಿಗೆ ಅಣಿಗೊಳಿಸಿದ ವೀಣೆಯಂತೆ
ರಂಗದ ಕಾಯಕ ಅಂದರೆ ಮೊದಲು ನಮ್ಮ ಮನೋಧರ್ಮ ಗುರುತಿಸಿಕೊಂಡು ನಾಟಕ ಕಟ್ಟಿ ಅದು ಪ್ರೇಕ್ಷಕರ ಕಣ್ಣುಗಳ ಫ್ರೇಮಿನಲ್ಲಿ ಸರಿಯಾಗಿ ಫಿಟ್ಟಾಗುತ್ತದೆಯೇ ಎಂದು ಅಂದಾಜು ಮಾಡಿಕೊಳ್ಳಬೇಕು. ನಂತರ ಜನರಿಗೆ ಕಾಯಬೇಕು. ಪಾರ್ಕಿಂಗ್ ಕಡೆ ಕಣ್ಣು ಹಾಯಿಸುತ್ತಿರಬೇಕು. ಇಷ್ಟಾದ ಮೇಲೆ ಭರ್ಜಿಯ ಮೊನೆಗಳಿಗೆ ಮೈ ಒಡ್ಡಿ ನಿಲ್ಲಬೇಕು ಮತ್ತು ನೋವಿನಲ್ಲೂ ನಗಬೇಕು. ನಗಲು ಸಾಧ್ಯವಾಗದಿದ್ದರೆ ಮನಸ್ಸಿನ ಹದ ಕೆಡುತ್ತದೆ. ಮನಸ್ಸು ಕೆಟ್ಟರೆ ಬದುಕಿನ ನೋಟಕ್ರಮದ ಜಾಡು ತಪ್ಪುತ್ತದೆ. ಒಟ್ಟು ಚಿತ್ರವೇ ಕಲಕಿಹೋಗುತ್ತದೆ.
‘ರಂಗ ವಠಾರ’ ಅಂಕಣದಲ್ಲಿ ಮತ್ತೆ…